ಬ್ರೇಕಿಂಗ್ ನ್ಯೂಸ್
08-03-23 03:22 pm HK News Desk ಕರ್ನಾಟಕ
ಶಿವಮೊಗ್ಗ, ಮಾ.8 : ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಮಹಮ್ಮದ್ ಶಾರೀಕ್ ನನ್ನು ಎನ್ಐಎ ಅಧಿಕಾರಿಗಳು ಮತ್ತು ಪೊಲೀಸರು ಶಿವಮೊಗ್ಗಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ತೀರ್ಥಹಳ್ಳಿ ಮತ್ತು ಶಿವಮೊಗ್ಗ ಆಸುಪಾಸಿನಲ್ಲಿ ಬಾಂಬ್ ಬ್ಲಾಸ್ಟ್ ಟ್ರಯಲ್ ಮಾಡಿದ್ದ ಪ್ರಕರಣದಲ್ಲಿಯೂ ಶಾರೀಕ್ ಆರೋಪಿಯಾಗಿದ್ದು ಆ ಹಿನ್ನೆಲೆಯಲ್ಲೂ ವಿಚಾರಣೆ ನಡೆಸಲಾಗುತ್ತಿದೆ. ತೀರ್ಥಹಳ್ಳಿ ಸೊಪ್ಪುಗುಡ್ಡೆ ಮೂಲದ ಶಾರೀಕ್ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಗುಣಮುಖನಾಗಿದ್ದಾನೆ. ಎರಡು ದಿನಗಳ ಹಿಂದೆ ಆತನನ್ನು ವಶಕ್ಕೆ ಪಡೆದಿರುವ ಎನ್ಐಎ ಅಧಿಕಾರಿಗಳು ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.
ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರು, ಶಾರೀಕ್ ನಿವಾಸದ ಬಳಿ ಒಯ್ದು ತನಿಖೆ ನಡೆಸಿದ್ದಾರೆ. ಈ ವೇಳೆ ಸೊಪ್ಪುಗುಡ್ಡೆಯ ಶಾರಿಕ್ ನಿವಾಸಕ್ಕೆ ಬೀಗ ಹಾಕಲಾಗಿತ್ತು. ಶಾರಿಕ್ ಚಿಕ್ಕಮ್ಮ ಬ್ರಹ್ಮಾವರಕ್ಕೆ ತೆರಳಿದ್ದರಿಂದ ಮನೆಯ ಎದುರೇ ಸ್ಥಳ ಮಹಜರು ನಡೆಸಿದ್ದಾರೆ. ಶಾರೀಕ್, ಮಾಝ್ ಮುನೀರ್, ಸಯ್ಯದ್ ಯಾಸೀನ್ ಸೇರಿಕೊಂಡು ತುಂಗಾ ತೀರದಲ್ಲಿ ಬಾಂಬ್ ಟ್ರಯಲ್ ಮಾಡಿರುವುದು ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬಯಲಾಗಿತ್ತು. ಮಾಝ್, ಯಾಸಿನ್ ಪೊಲೀಸರ ಬಲೆಗೆ ಬಿದ್ದಿದ್ದರೆ, ಶಾರೀಕ್ ತಲೆಮರೆಸಿಕೊಂಡಿದ್ದ. ಆನಂತರ ಮೈಸೂರಿನಲ್ಲಿ ಹೆಸರು ಬದಲಿಸಿ ಅಡಗಿಕೊಂಡಿದ್ದ. ಅಲ್ಲಿಂದಲೇ ಕುಕ್ಕರ್ ಬಾಂಬ್ ತಯಾರಿಸಿ ಮಂಗಳೂರಿಗೆ ಹಿಡಿದು ತಂದಿದ್ದಾಗ ಬ್ಲಾಸ್ಟ್ ಆಗಿತ್ತು. ಹಾಗಾಗಿ ಬಾಂಬ್ ಟ್ರಯಲ್ ಮಾಡಿದ್ದ ಜಾಗಕ್ಕೆ ಶಾರೀಕ್ ನನ್ನು ಶಿವಮೊಗ್ಗ ಪೊಲೀಸರು ಕರೆದೊಯ್ದು ತನಿಖೆ ನಡೆಸಿದ್ದಾರೆ.
Cooker blast case, NIA officers take Bomber Mohammed Shariq to Shivamogga for spot Mahazar.
07-03-26 12:01 pm
HK News Staffer
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm