ಬ್ರೇಕಿಂಗ್ ನ್ಯೂಸ್
11-03-23 11:59 am Bangalore Correspondent ಕರ್ನಾಟಕ
ಬೆಂಗಳೂರು, ಮಾ.11 : ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ್ ಶನಿವಾರ ಬೆಳಗ್ಗೆ ಮೈಸೂರಿನಲ್ಲಿ ಮೃತಪಟ್ಟಿದ್ದಾರೆ.
ಚಾಮರಾಜನಗರದಿಂದ ಎರಡು ಬಾರಿ ಕಾಂಗ್ರೆಸ್ ಸಂಸದರಾಗಿದ್ದ ಧ್ರುವನಾರಾಯಣ್, ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದರು. ಈ ಬಾರಿ ಚುನಾವಣೆಯಲ್ಲಿ ನಂಜನಗೂಡು ಅಸೆಂಬ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯಥಿಯಾಗಿ ಸ್ಪರ್ಧಿಸುವವರಿದ್ದರು. ಈ ಹಿನ್ನೆಲೆಯಲ್ಲಿ ಮತದಾರರನ್ನು ಭೇಟಿ ಮಾಡುವ ಕಾರ್ಯದಲ್ಲಿ ತೊಡಗಿದ್ದರು.
ಧ್ರುವನಾರಾಯಣ ಅವರಿಗೆ ಆರೋಗ್ಯದ ಸಮಸ್ಯೆ ಇರಲಿಲ್ಲ. ಎದೆ ನೋವು ಶುರುವಾಗಿದೆ ಎಂದು ಶನಿವಾರ ಬೆಳಗ್ಗೆ 6.30ಕ್ಕೆ ಕಾರು ಚಾಲಕನಿಗೆ ಕರೆ ಮಾಡಿದ್ದರು. ಚಾಲಕ 6.40ಕ್ಕೆ ಬಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ರಕ್ತವಾಂತಿ ಆಗಿದ್ದರಿಂದ ತೀವ್ರ ಅಸ್ವಸ್ಥರಾಗಿದ್ದರು. ಮೈಸೂರಿನ ಡಿಆರ್ಎಂಎಸ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಧ್ರುವನಾರಾಯಣ ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಕೃಷಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದ ಧ್ರುವನಾರಾಯಣ್ 1983ರಲ್ಲಿ ಕಾಂಗ್ರೆಸ್ ಪ್ರವೇಶ ಮಾಡಿದ್ದರು. ಚಾಮರಾಜನಗರದಿಂದ ಸಂಸದರಾಗಿ ಎರಡು ಬಾರಿ ಆಯ್ಕೆಯಾಗಿದ್ದರು. ಕೊಳ್ಳೇಗಾಲ ಮತ್ತು ಸಂತೇಮರಹಳ್ಳಿ ಕ್ಷೇತ್ರಗಳಿಂದ ಎರಡು ಬಾರಿ ಶಾಸಕರಾಗಿದ್ದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ನಿಧನ ಹಿನ್ನಲೆಯಲ್ಲಿ ಶನಿವಾರದ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಶನಿವಾರ ರಾಮನಗರದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆ ನಡೆಯಬೇಕಿತ್ತು. ನಿಧನದ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯಬೇಕಿದ್ದ ಪ್ರಜಾ ಧ್ವನಿ ಯಾತ್ರೆ ರದ್ದಾಗಿದೆ. ಮಾಜಿ ಸಂಸದ ಧ್ರುವನಾರಾಯಣ ನಿಧನಕ್ಕೆ ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ.
Karnataka Pradesh Congress Committee (KPCC) Working President R. Dhruvanarayan, 62, passed away in Mysuru on Saturday morning. Mr. Dhruvanarayan, a former MP representing Chamarajanagar Lok Sabha constituency, suffered a cardiac arrest on Saturday morning and passed away at his residence in Mysuru, sources said.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm