ಬ್ರೇಕಿಂಗ್ ನ್ಯೂಸ್
16-03-23 10:23 pm HK News Desk ಕರ್ನಾಟಕ
ಚಿಕ್ಕಮಗಳೂರು, ಮಾ.16 : ಮೂಡಿಗೆರೆ ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ ಬದಲಿಸಬೇಕೆಂದು ಬಿಜೆಪಿ ಕಾರ್ಯಕರ್ತರು ಹೆದ್ದಾರಿಯಲ್ಲಿ ಯಡಿಯೂರಪ್ಪ ಮತ್ತು ಸಿಟಿ ರವಿ ಅವರಿದ್ದ ಕಾರನ್ನು ಅಡ್ಡಗಟ್ಟಿ ಹೈಡ್ರಾಮಾ ನಡೆಸಿದ ಘಟನೆ ನಡೆದಿದೆ.
ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ನೂರಾರು ಕಾರ್ಯಕರ್ತರು ಚಿಕ್ಕಮಗಳೂರು - ಮೂಡಿಗೆರೆ ಹೆದ್ದಾರಿಯ ನಡು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕುಮಾರಸ್ವಾಮಿ ಬೇಡವೇ ಬೇಡ ಅಂತ ಕೂಗಾಟ ನಡೆಸಿದ್ದು ಬಿ.ಎಸ್.ವೈ. ಬರುವ ಮಾರ್ಗದಲ್ಲಿ ರಸ್ತೆ ತಡೆದು ಭಾರೀ ಪ್ರತಿಭಟನೆ ನಡೆಸಿದ್ದಾರೆ. 1000ಕ್ಕೂ ಅಧಿಕ ಜನರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ್ದು ಬಿಜೆಪಿ ಸ್ಥಳೀಯ ಮುಖಂಡರು, ಕಾರ್ಯಕರ್ತರೇ ಸೇರಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ, ಶಾಸಕ ಕುಮಾರಸ್ವಾಮಿ ಅವರನ್ನ ಪೊಲೀಸರು ಬೇರೆ ಕಡೆ ಕರೆದೊಯ್ದು ಬಚಾವ್ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರ ಆಕ್ರೋಶ ಹಿನ್ನೆಲೆಯಿಂದ ಬಿಎಸ್ವೈ ರೋಡ್ ಶೋ ಕ್ಯಾನ್ಸಲ್ ಮಾಡಿ ಬಂದ ದಾರಿಯಲ್ಲೇ ಹಿಂತಿರುಗಿದ್ದಾರೆ.

ಯಡಿಯೂರಪ್ಪ ಮತ್ತು ಸಿಟಿ ರವಿ ಅವರನ್ನ ರಸ್ತೆ ಮಧ್ಯೆಯೇ ಅಡ್ಡ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ನಾಯಕರು ತೀವ್ರ ಮುಜುಗರಕ್ಕೆ ಒಳಗಾಗಿದ್ದಾರೆ. ಅಲ್ಲದೆ ಸಿಟ್ಟುಗೊಂಡು, ರೋಡ್ ಶೋ ಕ್ಯಾನ್ಸಲ್ ಮಾಡಿ ಯಡಿಯೂರಪ್ಪ ನೇರವಾಗಿ ಹೆಲಿಪ್ಯಾಡ್ ಗೆ ತೆರಳಿದ್ದಾರೆ.
ಇದರಿಂದ ಗರಂ ಆದ ಸಿಟಿ ರವಿ, ಪಕ್ಷದ ಮರ್ಯಾದೆ ಕಳೆಯುತ್ತಿದ್ದೀರಾ ಎಂದು ಕಾರ್ಯಕರ್ತರ ಬಗ್ಗೆ ಸಿಟ್ಟಾಗಿದ್ದಾರೆ. ಆಕ್ರೋಶ ಇದ್ದರೆ, ನೀವು ಮೊದಲೇ ಮಾತನಾಡಿಕೊಳ್ಳಬೇಕಿತ್ತು. ಕಾರ್ಯಕ್ರಮ ಏರ್ಪಡಿಸಿ ಇಷ್ಟೆಲ್ಲ ಹೈಡ್ರಾಮಾ ಮಾಡಬೇಕಿತ್ತೇ ಎಂದು ಸ್ಥಳೀಯ ಮುಖಂಡರನ್ನು ತರಾಟೆಗೆತ್ತಿಕೊಂಡಿದ್ದಾರೆ.
#KarnatakaElections2023
— Apurva Mirajkar (@apurvasays) March 16, 2023
Another issue at BJP's Vijay Snakalp Yatra at Mudigere.
Party workers encircle BSY demanding ticket not to be given to MLA MP Kumaraswamy. Upset Yediyurappa canceled the road show because of the drama. pic.twitter.com/FmTmHUJyjf
Rift within the BJP in Karnataka were laid bare to the public today as former Karnataka Chief Minister BS Yediyurappa was forced to cancel the party's pre-election march in Chikkamagaluru district, after being gheraoed by party workers apparently supporting party national general secretary CT Ravi.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm