ಬ್ರೇಕಿಂಗ್ ನ್ಯೂಸ್
24-03-23 04:38 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.24: ಟಿಕೆಟ್ ಬೇಡಿಕೆ ಮುಂದಿಟ್ಟು ಸಿದ್ದರಾಮಯ್ಯ ನಿವಾಸದಲ್ಲಿ ಹಾಲಿ ಶಾಸಕ ಹರಿಹರ ರಾಮಪ್ಪ ಹಾಗೂ ವಿಧಾನಪರಿಷತ್ ಬಿಜೆಪಿ ಸದಸ್ಯ ಆರ್.ಶಂಕರ್ ಪರವಾಗಿ ಕಾರ್ಯಕರ್ತರು ಜಮಾಯಿಸಿದ್ದರು. ಕಾರ್ಯಕರ್ತರ ಜೊತೆಗೆ ಮಾತನಾಡಿಸಲು ಸಿದ್ದರಾಮಯ್ಯ ಆಗಮಿಸಿದ ಸಂದರ್ಭದಲ್ಲಿ ನಡೆದ ತಳ್ಳಾಟದಿಂದ ಗರಂ ಆದ ಸಿದ್ದು, ಕಾರ್ಯಕರ್ತರೊಬ್ಬರ ಕಪಾಳಕ್ಕೆ ಬಾರಿಸಿದ ಪ್ರಸಂಗ ನಡೆಯಿತು.
ಶುಕ್ರವಾರ ಬೆಳಗ್ಗೆ ಶಿವಾನಂದ ಸರ್ಕಲ್ ಬಳಿ ಇರುವ ಸಿದ್ದರಾಮಯ್ಯ ನಿವಾಸಕ್ಕೆ ಶಾಸಕ ರಾಮಪ್ಪ ಬೆಂಬಲಿಗರು ಆಗಮಿಸಿದ್ದರು. ರಾಮಪ್ಪ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಬಲಿಗರು ಜಮಾಯಿಸಿ ಟಿಕೆಟ್ ನೀಡುವಂತೆ ಆಗ್ರಹಿಸಿದರು. ಮತ್ತೊಂದು ಕಡೆಯಲ್ಲಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆರ್. ಶಂಕರ್ ಬೆಂಬಲಿಗರು ಕೂಡಾ ಆಗಮಿಸಿದ್ದರು. ರಾಣೆಬೆನ್ನೂರು ಕ್ಷೇತ್ರದ ಟಿಕೆಟ್ ನೀಡುವಂತೆ ಕಾರ್ಯಕರ್ತರು ಸಿದ್ದರಾಮಯ್ಯ ಬಳಿ ಒತ್ತಾಯಿಸಿದರು.
ಈ ವೇಳೆ ಕಾರ್ಯಕರ್ತರ ಜೊತೆಗೆ ಮಾತನಾಡಲು ಸಿದ್ದರಾಮಯ್ಯ ಆಗಮಿಸಿದರು. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಜೊತೆ ಮಾತನಾಡಲು ಕಾರ್ಯಕರ್ತರು ಮುಗಿಬಿದ್ದರು. ಈ ವೇಳೆ ಉಂಟಾದ ತಳ್ಳಾಟದಿಂದ ಕೋಪಗೊಂಡ ಸಿದ್ದರಾಮಯ್ಯ ಕಾರ್ಯಕರ್ತನೊಬ್ಬನಿಗೆ ಕಪಾಲಮೋಕ್ಷ ಮಾಡಿದರು.
ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಅಂತಿಮ ಹಂತದ ಲಾಬಿ ನಡೆಯುತ್ತಿದೆ. ಅದರಲ್ಲೂ ರಾಣೆಬೆನ್ನೂರು ಟಿಕೆಟ್ ಗಾಗಿ ಆರ್. ಶಂಕರ್ ಬೆಂಬಲಿಗರು ಸಿದ್ದರಾಮಯ್ಯ ಮನೆಗೆ ಬಂದಿರುವುದು ಕುತೂಹಲ ಕೆರಳಿಸಿದೆ. ಆರ್. ಶಂಕರ್ ಕಾಂಗ್ರೆಸ್ ಸೇರ್ಪಡೆಗೆ ಪ್ರಯತ್ನಿಸಿದ್ದರು. ಆದರೆ ಅದಕ್ಕೆ ಸಿದ್ದರಾಮಯ್ಯ ಅವರೇ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಇದೆ. ಈ ನಡುವೆ ಅವರ ಬೆಂಬಲಿಗರು ಸಿದ್ದರಾಮಯ್ಯ ಮನೆಯಲ್ಲಿ ಜಮಾಯಿಸಿ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದಾರೆ.
An irked @siddaramaiah slaps a Congress worker outside his residence, dozens of supporters had gathered to meet him, the man who was slapped is said to have repeatedly asked Siddaramaiah about the ticket for his leader. pic.twitter.com/caGK7qKaJ5
— Deepak Bopanna (@dpkBopanna) March 24, 2023
Congress leader Siddaramaiah today slapped a man when he was reportedly surrounded by a group of supporters demanding election ticket for a party MLA.
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm