ಬ್ರೇಕಿಂಗ್ ನ್ಯೂಸ್
25-03-23 05:21 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.25 : ಮನೆಯವರು ಪ್ರೀತಿ ನಿರಾಕರಿಸಿದ್ದಕ್ಕೆ ನೊಂದಿದ್ದ ಪ್ರೇಮಿಗಳು ರಾಮದೇವರ ಬೆಟ್ಟದಿಂದ ಕೆಳಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿ ಪವಾಡ ಸದೃಶ ಬದುಕುಳಿದ ಘಟನೆ ನಡೆದಿದೆ.
ಬೆಂಗಳೂರಿನ ನಾಗರಬಾವಿ ನಿವಾಸಿ ಚೇತನ್ (19) ಮತ್ತು ಕತ್ರಿಗುಪ್ಪೆಯ ಯುವತಿ (19) ಆತ್ಮಹತ್ಯೆಗೆ ಯತ್ನಿಸಿದವರು. ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಚೇತನ್ ಬಿಇ ವ್ಯಾಸಂಗ ಮಾಡುತ್ತಿದ್ದರೆ, ಯುವತಿ ಬಿಕಾಂ ಓದುತ್ತಿದ್ದಾಳೆ. ಇಬ್ಬರೂ 5 ವರ್ಷಗಳಿಂದ ಪ್ರೀತಿಸುತ್ತಿದ್ದು, ಮನೆಯವರಿಗೂ ತಿಳಿದಿತ್ತು.
ಆದರೆ, ಇವರ ಪ್ರೀತಿಯನ್ನು ನಿರಾಕರಿಸಿದ್ದ ಎರಡೂ ಕುಟುಂಬದವರು ವ್ಯಾಸಂಗ ಮುಂದುವರಿಸಲು ಸೂಚನೆ ನೀಡಿದ್ದರು. ಇದರಿಂದ ಮನನೊಂದ ಇಬ್ಬರೂ ಬೈಕ್ನಲ್ಲಿ ರಾಮದೇವರ ಬೆಟ್ಟಕ್ಕೆ ತೆರಳಿದ್ದಾರೆ. ಪಾರ್ಕಿಂಗ್ ಜಾಗದಲ್ಲಿ ಬೈಕ್ ನಿಲ್ಲಿಸಿ, ನಂತರ ಬೆಟ್ಟಕ್ಕೆ ತೆರಳಿ, ಡೆತ್ನೋಟ್ ಬರೆದಿಟ್ಟು ಬ್ಯಾಗ್ ಮತ್ತು ಚಪ್ಪಲಿಯನ್ನು ಬಿಟ್ಟು ಬೆಟ್ಟದಿಂದ ಜಿಗಿದಿದ್ದಾರೆ.
ನಮ್ಮ ಮನೆಯಲ್ಲಿ ಪ್ರೀತಿ ನಿರಾಕರಿಸಿದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ನೋಟ್ನಲ್ಲಿ ಬರೆದಿದ್ದು ಸುಮಾರು 100 ಅಡಿಗೂ ಹೆಚ್ಚು ಆಳದ ಕಂದಕಕ್ಕೆ ಜಿಗಿದಿದ್ದಾರೆ. ಇಷ್ಟು ಎತ್ತರದಿಂದ ಜಿಗಿದರೆ ಕಲ್ಲು ಬಂಡೆಗಳಿಂದ ಕೂಡಿರುವ ಪ್ರದೇಶದಲ್ಲಿ ಬದುಕುಳಿಯುವುದು ಕಷ್ಟ. ಆದರೆ ಇಬ್ಬರೂ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಭದ್ರತೆಗೆ ನಿಯೋಜನೆ ಮಾಡಿರುವ ಹೋಂಗಾರ್ಡ್ ಸಿಬ್ಬಂದಿ, ಬೆಟ್ಟದ ಮೇಲೆ ಪರಿಶೀಲನೆ ಮಾಡುತ್ತಿದ್ದ ವೇಳೆ ಚಪ್ಪಲಿ ಮತ್ತು ಬ್ಯಾಗ್ ಇರುವುದು ಕಂಡುಬಂದಿತ್ತು. ತಕ್ಷಣವೇ ಏನೋ ಅನಾಹುತ ನಡೆದಿರಬೇಕೆಂದು ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಪರಿಶೀಲನೆ ನಡೆಸಿದಾಗ ಇಬ್ಬರು ಆತ್ಮಹತ್ಯೆಗೆ ಯತ್ನಿಸಿರುವುದು ಕಂಡುಬಂದಿದೆ. ಇಬ್ಬರೂ ಮೃತಪಟ್ಟಿರಬಹುದು ಎಂದು ಅಂದಾಜಿಸಿದ್ದರೂ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಕಂಡುಬಂದಿದ್ದು, ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ಪ್ರೇಮಿಗಳನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
The lovers who expressed their opposition to Love fell from the cliff of Ramadevara Betta and tried to commit suicide. The condition of the young man is critical, while the young woman has minor injuries and is being treated at Rajarajeshwari Hospital, Bangalore. The lovers, who had come to the deserted area of Ramdevara hill, tried to commit suicide by throwing themselves from the top of a big rock.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
20-01-26 05:01 pm
Bangalore Correspondent
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm