ಬ್ರೇಕಿಂಗ್ ನ್ಯೂಸ್
26-03-23 11:44 am HK News Desk ಕರ್ನಾಟಕ
ಯಾದಗಿರಿ, ಮಾ.26: ಜೆಡಿಎಸ್ ನಾಯಕರು ಹಮ್ಮಿಕೊಂಡಿದ್ದ ಪಂಚರತ್ನ ರಥಯಾತ್ರೆಗೆ ಬಳಸಿ ಎಸೆದಿದ್ದ ಹಳಸಿದ ಅನ್ನ, ಸಾಂಬಾರನ್ನು ತಿಂದ ಸುಮಾರು 15ಕ್ಕೂ ಹೆಚ್ಚು ಜಾನುವಾರುಗಳು ದಾರುಣ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ನಡೆದಿದೆ.
ಯರಗೋಳ ಹೊರವಲಯದಲ್ಲಿ ಮೊನ್ನೆ ಮಾ.23ರಂದು ಜೆಡಿಎಸ್ ಪಂಚರತ್ನ ರಥಯಾತ್ರೆಯ ಅಂಗವಾಗಿ ಸಮಾವೇಶದಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಉಳಿದ ಅನ್ನಾಹಾರವನ್ನು ಅಲ್ಲಿಯೇ ಹೊಲದ ಬಳಿ ಬಿಸಾಡಿ ಹೋಗಿದ್ದರು. ಎರಡು ದಿನಗಳಲ್ಲಿ ಬಿಸಿಲಿಗೆ ಹಾಳಾಗಿದ್ದ ಆಹಾರವನ್ನು ದನಗಳು ತಿಂದಿದ್ದು 15ಕ್ಕೂ ಹೆಚ್ಚು ಜಾನುವಾರುಗಳು ಹೊಟ್ಟೆಯುಬ್ಬಿ ಮೃತಪಟ್ಟಿವೆ.
ಗುರುಮಠಕಲ್ ಜೆಡಿಎಸ್ ಅಭ್ಯರ್ಥಿ ಶರಣಗೌಡ ಕಂದಕೂರ್ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಸಮಾವೇಶದ ನಂತರ ಉಳಿದ ಅನ್ನಾಹಾರವನ್ನು ವಿಲೇವಾರಿಗೊಳಿಸದೆ ನಿರ್ಲಕ್ಷ್ಯ ವಹಿಸಿದ್ದೇ ಜಾನುವಾರುಗಳ ಸಾವಿಗೆ ಕಾರಣ ಎಂಬ ಆರೋಪವನ್ನು ರೈತರು ಮಾಡಿದ್ದಾರೆ. ಮಾಹಿತಿ ತಿಳಿಯುತ್ತಲೇ ಪಶು ವೈದ್ಯರ ತಂಡ ಭೇಟಿ ನೀಡಿದ್ದು, ಮೃತಪಟ್ಟ ಜಾನುವಾರುಗಳ ಮರಣೋತ್ತರ ಪರೀಕ್ಷೆ ನಡೆಸಿದೆ. ಅಸ್ವಸ್ಥಗೊಂಡ 10ಕ್ಕೂ ಹೆಚ್ಚು ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ ಜೆಡಿಎಸ್ ನಾಯಕ ಶರಣುಗೌಡ ಕಂದಕೂರ, ರೈತರನ್ನು ಸಂಪರ್ಕಿಸಿ ಸಾಂತ್ವನ ಹೇಳಿದ್ದಾರೆ. ಜಾನುವಾರುಗಳ ಮಾಲೀಕರುಗಳಿಗೆ ಧನಸಹಾಯ ನೀಡಿದ್ದು, ತ್ಯಾಜ್ಯ ವಿಲೇವಾರಿ ಹೊಣೆ ಹೊತ್ತಿದ್ದ ತಂಡವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
About 15 cattle succumbed to food poisoning after consuming left over food from an election rally organised by the Janata Dal (Secular) party at Yeragol village in Yadgir district.
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm