ಬ್ರೇಕಿಂಗ್ ನ್ಯೂಸ್
24-10-20 04:28 pm Headline Karnataka News Network ಕರ್ನಾಟಕ
ಮಡಿಕೇರಿ, ಅಕ್ಟೋಬರ್ 24: ಬಿಜೆಪಿಗೆ ಬರಲು ಇನ್ನೂ ಹತ್ತು ಕಾಂಗ್ರೆಸ್ ಶಾಸಕರು ರೆಡಿಯಾಗಿದ್ದಾರೆ, ಅವರೆಲ್ಲ ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೊಸ ಬಾಂಬ್ ಹಾಕಿದ್ದಾರೆ.
ಶನಿವಾರ ಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ನಳಿನ್ ಕುಮಾರ್, ಕಾಂಗ್ರೆಸ್ ಪಕ್ಷದಲ್ಲಿ ಭ್ರಮ ನಿರಸನಗೊಂಡು ಅಲ್ಲಿನ ಶಾಸಕರು ಬಿಜೆಪಿಯತ್ತ ಬರುತ್ತಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಬಂಡೆ ಮತ್ತು ಹುಲಿಯ ನಡುವೆ ನಾಯಕತ್ವಕ್ಕಾಗಿ ಸಮರ ಏರ್ಪಟ್ಚಿದೆ. ಸಿಎಂ ಸ್ಥಾನಕ್ಕಾಗಿ ಈಗಲೇ ಕಚ್ಚಾಟ ಆರಂಭಿಸಿದ್ದಾರೆ. ಆರ್.ಆರ್ ನಗರದಲ್ಲಿ ಡಿಕೆ ಶಿವಕುಮಾರ್, ಶಿರಾದಲ್ಲಿ ಸಿದ್ದರಾಮಯ್ಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಎರಡು ಕಡೆಯೂ ಕಾಂಗ್ರೆಸ್ ಸೋಲು ಕಾಣಲಿದೆ. ಇವರ ಉಸ್ತುವಾರಿಗಳೇ ಕಾಂಗ್ರೆಸನ್ನು ಸೋಲಿಸಲಿದ್ದಾರೆ. ಬಿಜೆಪಿ ಅಲ್ಲಿ ನಿರಾಯಾಸವಾಗಿ ಗೆಲ್ಲಲಿದೆ ಎಂದರು. ಯಡಿಯೂರಪ್ಪ ನುಡಿದಂತೆ ನಡೆದುಕೊಂಡಿದ್ದಾರೆ. ಬಿಜೆಪಿಗೆ ಬಂದ 17 ಶಾಸಕರಿಗೂ ಸ್ಪರ್ಧೆಗೆ ಅವಕಾಶ ನೀಡಿದ್ದಾರೆ. ರಾಜ್ಯದ ಜನರಿಗೆ ನೀಡಿರುವ ಭರವಸೆಯನ್ನು ಯಡಿಯೂರಪ್ಪ ಈಡೇರಿಸಲಿದ್ದಾರೆ ಎಂದರು.
ಸಿದ್ದರಾಮಯ್ಯ ತನ್ನನ್ನು ಕಾಡು ಮನುಷ್ಯ ಎಂದು ಟೀಕಿಸಿದ್ದಕ್ಕೆ ಅವರ ಹೆಸರೆತ್ತದೆ ಟಾಂಗ್ ನೀಡಿದ ನಳಿನ್ ಕುಮಾರ್, ಕಾಡು ಮನುಷ್ಯನಿಗಿಂತ ಕಾಡು ಪ್ರಾಣಿ ಹೆಚ್ಚು ಕ್ರೂರಿ. ರಾಜ್ಯದಲ್ಲಿ ಹುಲಿ ಅಧಿಕಾರದಲ್ಲಿತ್ತು. ಅದಕ್ಕೆ ಗೋಮಾತೆ ಮೇಲೂ ಕನಿಕರ ಇರಲಿಲ್ಲ ಎಂದು ಟೀಕಿಸಿದರು.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm