ಬ್ರೇಕಿಂಗ್ ನ್ಯೂಸ್
24-10-20 04:28 pm Headline Karnataka News Network ಕರ್ನಾಟಕ
ಮಡಿಕೇರಿ, ಅಕ್ಟೋಬರ್ 24: ಬಿಜೆಪಿಗೆ ಬರಲು ಇನ್ನೂ ಹತ್ತು ಕಾಂಗ್ರೆಸ್ ಶಾಸಕರು ರೆಡಿಯಾಗಿದ್ದಾರೆ, ಅವರೆಲ್ಲ ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೊಸ ಬಾಂಬ್ ಹಾಕಿದ್ದಾರೆ.
ಶನಿವಾರ ಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ನಳಿನ್ ಕುಮಾರ್, ಕಾಂಗ್ರೆಸ್ ಪಕ್ಷದಲ್ಲಿ ಭ್ರಮ ನಿರಸನಗೊಂಡು ಅಲ್ಲಿನ ಶಾಸಕರು ಬಿಜೆಪಿಯತ್ತ ಬರುತ್ತಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಬಂಡೆ ಮತ್ತು ಹುಲಿಯ ನಡುವೆ ನಾಯಕತ್ವಕ್ಕಾಗಿ ಸಮರ ಏರ್ಪಟ್ಚಿದೆ. ಸಿಎಂ ಸ್ಥಾನಕ್ಕಾಗಿ ಈಗಲೇ ಕಚ್ಚಾಟ ಆರಂಭಿಸಿದ್ದಾರೆ. ಆರ್.ಆರ್ ನಗರದಲ್ಲಿ ಡಿಕೆ ಶಿವಕುಮಾರ್, ಶಿರಾದಲ್ಲಿ ಸಿದ್ದರಾಮಯ್ಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಎರಡು ಕಡೆಯೂ ಕಾಂಗ್ರೆಸ್ ಸೋಲು ಕಾಣಲಿದೆ. ಇವರ ಉಸ್ತುವಾರಿಗಳೇ ಕಾಂಗ್ರೆಸನ್ನು ಸೋಲಿಸಲಿದ್ದಾರೆ. ಬಿಜೆಪಿ ಅಲ್ಲಿ ನಿರಾಯಾಸವಾಗಿ ಗೆಲ್ಲಲಿದೆ ಎಂದರು. ಯಡಿಯೂರಪ್ಪ ನುಡಿದಂತೆ ನಡೆದುಕೊಂಡಿದ್ದಾರೆ. ಬಿಜೆಪಿಗೆ ಬಂದ 17 ಶಾಸಕರಿಗೂ ಸ್ಪರ್ಧೆಗೆ ಅವಕಾಶ ನೀಡಿದ್ದಾರೆ. ರಾಜ್ಯದ ಜನರಿಗೆ ನೀಡಿರುವ ಭರವಸೆಯನ್ನು ಯಡಿಯೂರಪ್ಪ ಈಡೇರಿಸಲಿದ್ದಾರೆ ಎಂದರು.
ಸಿದ್ದರಾಮಯ್ಯ ತನ್ನನ್ನು ಕಾಡು ಮನುಷ್ಯ ಎಂದು ಟೀಕಿಸಿದ್ದಕ್ಕೆ ಅವರ ಹೆಸರೆತ್ತದೆ ಟಾಂಗ್ ನೀಡಿದ ನಳಿನ್ ಕುಮಾರ್, ಕಾಡು ಮನುಷ್ಯನಿಗಿಂತ ಕಾಡು ಪ್ರಾಣಿ ಹೆಚ್ಚು ಕ್ರೂರಿ. ರಾಜ್ಯದಲ್ಲಿ ಹುಲಿ ಅಧಿಕಾರದಲ್ಲಿತ್ತು. ಅದಕ್ಕೆ ಗೋಮಾತೆ ಮೇಲೂ ಕನಿಕರ ಇರಲಿಲ್ಲ ಎಂದು ಟೀಕಿಸಿದರು.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm