ಬ್ರೇಕಿಂಗ್ ನ್ಯೂಸ್
29-03-23 10:29 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29 : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮೈಸೂರಿನಲ್ಲಿ ರೋಡ್ ಶೋ ವೇಳೆ ಕಲಾವಿದರ ಮೇಲೆ 500 ರೂ. ಮುಖಬೆಲೆಯ ನೋಟುಗಳನ್ನು ಎಸೆದ ವಿಚಾರದಲ್ಲಿ ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ತೆರೆದ ಬಸ್ನಲ್ಲಿ ರೋಡ್ ಶೋ ನಡೆಸಿದ್ದ ಡಿಕೆಶಿ ಕಲಾವಿದರತ್ತ ಹಣ ಎಸೆದಿದ್ದರು. ಈ ಬಗ್ಗೆ ಬಿಜೆಪಿ ಎಂಎಲ್ಸಿ ರವಿಕುಮಾರ್ ನೇತೃತ್ವದ ನಿಯೋಗ ಡಿಕೆಶಿ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಜತೆಗೆ, ಎಸ್ಡಿಪಿಐ ಮುಖಂಡನೊಬ್ಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಚಾರದಲ್ಲೂ ದೂರು ಸಲ್ಲಿಸಲಾಗಿದೆ.
ಪ್ರಜಾಧ್ವನಿ ಯಾತ್ರೆ ವೇಳೆ ಡಿಕೆ ಶಿವಕುಮಾರ್ ತೆರೆದ ಬಸ್ಸಿನಲ್ಲಿ ಸಂಚರಿಸುತ್ತಿದ್ದರು. ಇದೇ ವೇಳೆ ಒಂದು ಬದಿಯಲ್ಲಿ ಕಲಾವಿದರ ತಂಡ ವಿವಿಧ ಪ್ರದರ್ಶನಗಳನ್ನು ನಡೆಸುತ್ತಿತ್ತು. ಅವರತ್ತ ಡಿಕೆಶಿ 500 ರೂ. ಮುಖಬೆಲೆಯ ನೋಟುಗಳನ್ನು ಎಸೆದಿದ್ದರು. ಡಿಕೆಶಿ ನೋಟು ಎಸೆಯುತ್ತಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡಿತ್ತು.

ಮುಸ್ಲಿಮರ ಮೀಸಲಾತಿ ವಾಪಸ್ ಕೊಡದಿದ್ದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಚಡ್ಡಿ ಬಿಚ್ಚಿಸುತ್ತೇವೆ ಎಂದು ಚಿತ್ರದುರ್ಗ ಜಿಲ್ಲೆಯ ಎಸ್ಡಿಪಿಐ ಮುಖಂಡರೊಬ್ಬರು ಇತ್ತೀಚೆಗೆ ಹೇಳಿದ್ದರು. ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಿ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸುವ ಬಗ್ಗೆ ಕಳೆದ ವಾರ ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಮುಸ್ಲಿಮರಿಗೆ ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಎಸ್ಡಿಪಿಐ ಮುಖಂಡರು ಬಿಜೆಪಿ ಹಾಗೂ ಬೊಮ್ಮಾಯಿ ವಿರುದ್ಧ ಹರಿಹಾಯ್ದಿದ್ದರು.
Karnataka BJP Wednesday filed a complaint against state Congress president DK Shivakumar after videos of him showering currency notes on crowds during a roadshow emerged on Tuesday.
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm