ಬ್ರೇಕಿಂಗ್ ನ್ಯೂಸ್
01-04-23 07:31 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.1 : ಚಿಕ್ಕಮಗಳೂರಿನ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ ನಡೆದಿದ್ದು ಮೂಲ ಮತ್ತು ವಲಸಿಗ ನಾಯಕರ ಬಣಗಳು ಪರಸ್ಪರ ಕೈ ಕೈ ಮಿಲಾಯಿಸಿಕೊಂಡು ಕಿತ್ತಾಡಿಕೊಂಡಿವೆ. ಕೆಪಿಸಿಸಿ ಸಂಯೋಜಕರ ಮೇಲೆ ಹಲ್ಲೆ ನಡೆಸಲಾಗಿದೆ.
ಕಾರ್ಯಕರ್ತರು ತಾವು ತಾವೇ ಹೊಡೆದಾಡಿ ಪರಸ್ಪರ ಹಿಗ್ಗಾಮುಗ್ಗ ಥಳಿಸಿಕೊಂಡಿದ್ದಾರೆ. ತಾಲೂಕು ಅಧ್ಯಕ್ಷ ಮಾತಿಗೆ ಮುಂದಾಗುತ್ತಿದ್ದಂತೆ ಸಿಟ್ಟಿಗೆದ್ದ ಕಾರ್ಯಕರ್ತರು, ಆಕಾಂಕ್ಷಿಗಳ ಬೆಂಬಲಿಗರ ತಳ್ಳಾಟ ನಡೆಸಿದ್ದಾರೆ. ಬಳಿಕ ಪೊಲೀಸರು ಮಧ್ಯೆ ಪ್ರವೇಶಿಸಿ ಉದ್ರಿಕ್ತ ಕಾರ್ಯಕರ್ತರನ್ನು ಹೊರಕ್ಕೆ ಕಳಿಸಿದ್ದಾರೆ. ಪರ ವಿರೋಧ ನಡುವೆಯೇ ಕಾರ್ಯಕರ್ತರು ಸಭೆಯಿಂದ ಹೊರ ನಡೆದಿದ್ದಾರೆ.
ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಎರಡು ಬಣಗಳು ಕಿತ್ತಾಟ ನಡೆಸಿವೆ. ಟಿಕೆಟ್ ವಿಚಾರದಲ್ಲಿ ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಬೆಳಗ್ಗೆಯಿಂದಲೂ ಸಭೆ ನಡೆದಿತ್ತು. ಬಳಿಕ ಮಾತಿಗೆ ಮಾತು ಬೆಳೆದು ಕುರ್ಚಿ ಹಿಡಿದು ಹೊಡೆದಾಟ ನಡೆಸಿದ್ದಾರೆ. ಕೆಪಿಸಿಸಿ ಸಂಯೋಜಕರಾಗಿದ್ದ ಪವನ್ ಮೇಲೆ ಹಲ್ಲೆ ನಡೆಸಲಾಗಿದೆ.
ಇತ್ತೀಚೆಗೆ ಬಿಜೆಪಿಯಿಂದ ಕಾಂಗ್ರೆಸ್ ಬಂದಿದ್ದ ಲಿಂಗಾಯತ ಮುಖಂಡ ಎಚ್.ಡಿ.ತಮ್ಮಯ್ಯ ಯಾರಿಗೆ ಟಿಕೆಟ್ ಕೊಟ್ಟರೂ ಕೆಲಸ ಮಾಡೋಣ ಎನ್ನುತ್ತಿದ್ದಂತೆ ಮಾರಾಮಾರಿ ಶುರುವಾಗಿದೆ. ಇವರ ಮಾತಿನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ಗರಂ ಆಗಿದ್ದಾರೆ. ಇದೇ ವೇಳೆ, ಪಕ್ಷ ಒಗ್ಗಟ್ಟಾಗಿ ಹೋಗಲಿ ಎಂದ ಮಂಜೇಗೌಡ ವಿರುದ್ಧವೂ ಕಾರ್ಯಕರ್ತರು ರೆಬಲ್ ಆಗಿದ್ದಾರೆ. ಯಾರಿಗೋ ಅಲ್ಲ... ಅಂತ ಮಂಜೇಗೌಡ ವಿರುದ್ಧ ಕಾರ್ಯಕರ್ತರು ತಿರುಗಿ ಬಿದ್ದು ಗಲಾಟೆ ನಡೆದಿದೆ. ನೋಡ ನೋಡ್ತಿದ್ದಂತೆ ಕಾಂಗ್ರೆಸ್ ಕಚೇರಿ ರಣರಂಗವಾಗಿದೆ.
#chikmagalu #congress office turns ugly after #fight over #ticket, #KPCC organiser attacked by members #BreakingNews #karnatakacongress pic.twitter.com/HpyLizhsIb
— Headline Karnataka (@hknewsonline) April 1, 2023
chikmagalu congress office turns ugly after fight over ticket, KPCC organiser attacked by members
03-07-25 05:24 pm
Bangalore Correspondent
Rain kadaba, Sullia, Mangalore: ಕಡಬ, ಸುಳ್ಯದಲ್...
03-07-25 10:54 am
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
04-07-25 02:38 pm
Mangalore Correspondent
Mangalore Youth death, ullal: ಕುಡಿದ ಮತ್ತಿನಲ್ಲ...
04-07-25 11:46 am
Mangalore Police, Drugs, Sudheer Kumar Reddy:...
03-07-25 10:50 pm
ರಹಿಮಾನ್ ಕೊಲೆ ಪ್ರಕರಣ ; ಅನುಮತಿ ನಿರಾಕರಿಸಿದ್ದರೂ ಬ...
03-07-25 10:39 pm
Mangalore Police, New Rules, Festival; ಮೊಸರು...
03-07-25 03:43 pm
04-07-25 12:31 pm
Mangalore Correspondent
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm
ಮಹಾದೇವ್ ಬೆಟ್ಟಿಂಗ್ ಹಗರಣ ; ಮೋಸ್ಟ್ ವಾಂಟೆಡ್ ಆರೋಪಿ...
03-07-25 07:09 pm
Infosys Employee, Video Recording, Crime: ಇನ್...
02-07-25 10:15 pm