ಬ್ರೇಕಿಂಗ್ ನ್ಯೂಸ್
02-04-23 06:36 pm HK News Desk ಕರ್ನಾಟಕ
ಹಾಸನ, ಏ 02: ಜಾತ್ಯಾತೀತ ಜನತಾದಳದ ನಾಯಕ ಹೆಚ್ ಡಿ ರೇವಣ್ಣ ಅವರ ಆರೋಪಗಳಿಂದ ಬೇಸತ್ತು ಹಾಸನದ ಡಿವೈಎಸ್ಪಿ ಉದಯ್ ಭಾಸ್ಕರ್ ಅವರು ವರ್ಗಾವಣೆ ಮಾಡುವಂತೆ ತಾವೇ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಡಿವೈಎಸ್ಪಿ ಉದಯ್ ಭಾಸ್ಕರ್ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ ಅವರ ವಿರುದ್ಧ ಕ್ರಮಕ್ಕೆ ಹೆಚ್ಡಿ ರೇವಣ್ಣ ಒತ್ತಾಯಿಸಿದ್ದರು. ಇದೀಗ ಡಿವೈಎಸ್ಪಿ ಮನನೊಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಸ್ವಯಂ ವರ್ಗಾವಣೆಗೆ ಕೋರಿದ್ದಾರೆ.
ನಾನು ನಿಷ್ಪಕ್ಷಪಾತ, ನೇರ ನುಡಿಯ ವ್ಯಕ್ತಿತ್ವವುಳ್ಳವನು. ರಾಜಕಾರಣಿಗಳು ನನ್ನಿಂದ ಕಾನೂನು ಬಾಹಿರ ಕ್ರಮ ಆಪೇಕ್ಷಿಸುತ್ತಿದ್ದಾರೆ. ಅವರ ಒತ್ತಾಯಗಳಿಗೆ ನಾನು ಮಣಿಯದ ಕಾರಣ ನನ್ನ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಉದಯ್ ಭಾಸ್ಕರ್ ಪರೋಕ್ಷವಾಗಿ ಮಾಜಿ ಸಚಿವ ರೇವಣ್ಣ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ನನ್ನ ಮೇಲೆ ಆರೋಪ ಮಾಡಿ ನನ್ನ ಮೇಲಾಧಿಕಾರಿಗಳಿಗೆ ಮಾನಸಿಕ ಒತ್ತಡಗಳನ್ನು ನೀಡುತ್ತಿದ್ದಾರೆ. ರಾಜಕಾರಣಿಗಳು ಈ ಚುನಾವಣಾ ಸಂದರ್ಭದಲ್ಲಿ ನನಗೆ ಸುಗಮವಾಗಿ ಕೆಲಸ ಮಾಡಲು ಅಡ್ಡಿಪಡಿಸಿ ಗೊಂದಲ ಸೃಷ್ಟಿಪಡಿಸುವುದು ಖಚಿತ. ಇದರಿಂದ ಮೇಲಾಧಿಕಾರಿಗಳಿಗೂ ಇರುಸುಮುರುಸು ಉಂಟಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದೀಗ ಬೇಸರದಿಂದಲೇ ತಮ್ಮ ವರ್ಗಾವಣೆಗೆ ಬೇಡಿಕೆ ಇಟ್ಟಿರುವ ಉದಯ್ ಭಾಸ್ಕರ್, ಚುನಾವಣಾ ಪ್ರಕ್ರಿಯೆ ಮುಗಿಯುವ ತನಕ ನನ್ನನ್ನು ಹಾಸನ ಜಿಲ್ಲೆಯಿಂದ ತಮಗೆ ಸರಿ ಎನಿಸಿದ ಸ್ಥಳಕ್ಕೆ ತಾತ್ಕಾಲಿಕ ವರ್ಗಾವಣೆಗೆ ಕೋರುತ್ತೇನೆ ಎಂದು ಮೇಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಉದಯ್ ಭಾಸ್ಕರ್ ವಿರುದ್ಧ ಗಂಭೀರ ಆರೋಪ ಮಾಡಿರುವ ಎಚ್.ಡಿ.ರೇವಣ್ಣ ಅವರನ್ನು ಅಮಾನತುಗೊಳಿಸಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ಉದಯಭಾಸ್ಕರ್ ಅವರು ಆಯಾ ಪೊಲೀಸ್ ಠಾಣೆಗಳ ರೌಡಿ ಶೀಟರ್ಗಳೊಂದಿಗೆ ನಂಟು ಹೊಂದಿದ್ದು, ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಎಚ್ಡಿ ರೇವಣ್ಣ ಆರೋಪಿಸಿದ್ದರು.
Hassan DySP Uday Bhaskar frustrated with Revanna statements, requests higher officers to transfer
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm