ಬ್ರೇಕಿಂಗ್ ನ್ಯೂಸ್
03-04-23 03:59 pm HK News Desk ಕರ್ನಾಟಕ
ಶಿವಮೊಗ್ಗ, ಎ.3: ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನವಜಾತ ಹೆಣ್ಣು ಶಿಶುವನ್ನು ನಾಯಿಯೊಂದು ಬಾಯಿಯಲ್ಲಿ ಕಚ್ಚಿಕೊಂಡು ಬಂದ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.
ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ವಾರ್ಡ್ ಕಡೆಯಿಂದ ಬಾಯಿಯಲ್ಲಿ ನವಜಾತ ಶಿಶುವನ್ನು ನಾಯಿ ಕಚ್ಚಿಕೊಂಡು ಬರುತ್ತಿರುವುದನ್ನು ಸಾರ್ವಜನಿಕರು ಗಮನಿಸಿದ್ದು, ಆಸ್ಪತ್ರೆಯ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ನಾಯಿಯನ್ನು ಓಡಿಸಿ ಮಗುವನ್ನು ಪರೀಕ್ಷಿಸಿದಾಗ ಅದು ಮೃತಪಟ್ಟಿರುವುದು ದೃಢಪಟ್ಟಿದೆ.
ಆಸ್ಪತ್ರೆ ಹಿಂಭಾಗ ಮಗು ಬಿಟ್ಟು ಹೋಗಲಾಗಿತ್ತು ;
ನವಜಾತ ಶಿಶುವನ್ನು ಯಾರೋ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಾರ್ಡ್ ಹಿಂಭಾಗ ಬಿಟ್ಟು ಹೋಗಿರುವುದಾಗಿ ದೊಡ್ಡಪೇಟೆ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಶಂಕಿಸಲಾಗಿದೆ. ಶಿಶು ಮೃತಪಟ್ಟಿದ್ದು, ನಾಯಿ ಕಚ್ಚಿಕೊಂಡು ಓಡಾಡಿದೆ. ಹೆತ್ತವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅವರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮೆಗ್ಗಾನ್ ಆಸ್ಪತ್ರೆ ಭದ್ರತಾ ಸಿಬ್ಬಂದಿ ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಆಧಾರದ ಮೇಲೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಮೃತ ಮಗು ಮೆಗ್ಗಾನ್ ಆಸ್ಪತ್ರೆಯಲ್ಲಿ ಜನಿಸಿಲ್ಲ ;
ಯಾರೋ ಹೊರಗಡೆಯಿಂದ ಶಿಶುವನ್ನು ತಂದು ಎಸೆದಿರಬಹುದು ಎಂಬ ಶಂಕೆ ಇದೆ. ಬಯೋಮೆಡಿಕಲ್ ತ್ಯಾಜ್ಯ ನಿರ್ವಹಣೆಯನ್ನು ಸರಿಯಾಗಿ ಮಾಡಬೇಕಾಗಿರುವುದು ಆಯಾ ಆಸ್ಪತ್ರೆ ಆದ್ಯ ಕರ್ತವ್ಯ. ಅದನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಸರಿಯಾಗಿ ಮಾಡಲಾಗುತ್ತಿದೆ. ಜತೆಗೆ, ಶಿಶು ನಮ್ಮ ಆಸ್ಪತ್ರೆಯಲ್ಲಿ ಜನಿಸಿಯೇ ಇಲ್ಲ. ಬೇರೆಯ ತಾಲೂಕಿನಲ್ಲಿ ಜನಿಸಿರಬಹುದಾದ ಮಗುವನ್ನು ಇಲ್ಲಿ ತಂದು ಹಾಕಿರುವ ಸಾಧ್ಯತೆಯೂ ಇರಬಹುದು. ಈ ಬಗ್ಗೆ ಆಸ್ಪತ್ರೆಯ ಡಿಎಚ್ಒ ಅವರ ಗಮನಕ್ಕೆ ತರಲಾಗಿದೆ ಎಂದು ಮೆಗ್ಗಾನ್ ಆಸ್ಪತ್ರೆ ಅಧೀಕ್ಷಕ ಡಾ. ಶ್ರೀಧರ್ ತಿಳಿಸಿದ್ದಾರೆ.
ಪ್ರಿಮೆಚ್ಯೂರ್ ಹೆರಿಗೆಯ ಶಂಕೆ ;
ಸದ್ಯ ಮೃತ ಶಿಶುವಿನ ಮರಣೋತ್ತರ ಪರೀಕ್ಷೆ ನಡೆಸಿ, ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಮೃತ ಶಿಶು 900 ಗ್ರಾಂ ತೂಕ ಹೊಂದಿದ್ದು, ಪ್ರಿಮೆಚ್ಯೂರ್ ಹೆರಿಗೆ ಆಗಿರಬಹುದು ಎಂದು ಶಂಕಿಸಲಾಗಿದೆ. ಜತೆಗೆ, ಇದರ ಹೆರಿಗೆ ಮೆಗ್ಗಾನ್ನಲ್ಲಿ ಆಗಿಲ್ಲ. ಈ ಕುರಿತು ಮಾಹಿತಿ ಕಲೆ ಹಾಕುವುದಕ್ಕಾಗಿ ಮೂರು ತಂಡಗಳನ್ನು ರಚನೆ ಮಾಡಲಾಗಿದೆ. ಈ ಸಂಬಂಧ ಕಾರ್ಯಾಚರಣೆ ನಡೆಸುತ್ತಿರುವ ತಂಡಗಳಿಗೆ, 15 ದಿನಗಳಲ್ಲಿ ಜಿಲ್ಲೆಯ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿಆಗಿರುವ ಹೆರಿಗೆಗಳ ಬಗ್ಗೆ ಮೂರು ದಿನಗಳಲ್ಲಿ ಮಾಹಿತಿ ಸಂಗ್ರಹಿಸಲು ಸೂಚನೆ ನೀಡಲಾಗಿದೆ ಎಂದು ಮೆಗ್ಗಾನ್ ಆಸ್ಪತ್ರೆಯ ಡಿಎಚ್ಒ ಡಾಕ್ಟರ್ ರಾಜೇಶ್ ಸುರಗಿಹಳ್ಳಿ ಹೇಳಿದ್ದಾರೆ.
An incident of a stray dog running around with a newborn baby in its mouth has been reported from McGann Teaching District Hospital here. The dog was found carrying the newborn in its mouth in the wee hours of March 31, but the incident came to light on Sunday.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
20-01-26 07:04 pm
HK News Desk
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
20-01-26 05:01 pm
Bangalore Correspondent
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm