ಬ್ರೇಕಿಂಗ್ ನ್ಯೂಸ್
06-04-23 12:36 pm HK News Desk ಕರ್ನಾಟಕ
ಬೆಂಗಳೂರು, ಎ.6: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಂಡಿದ್ದು, 42 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಲಾಗಿದೆ. ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು ಮತ್ತೆ 42 ಕ್ಷೇತ್ರಗಳಿಗೆ ಹೆಸರು ಅಂತಿಮಗೊಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಈ ಬಾರಿಯೂ ಟಿಕೆಟ್ ಘೋಷಣೆ ಆಗಿಲ್ಲ. ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಮತ್ತು ಪುತ್ತೂರು ಕ್ಷೇತ್ರದ ಸಸ್ಪೆನ್ಸ್ ಉಳಿಸಿಕೊಳ್ಳಲಾಗಿದೆ. ಉಡುಪಿ ಕ್ಷೇತ್ರದಲ್ಲಿ ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ಟಿಕೆಟ್ ಪಡೆದಿದ್ದಾರೆ. ಕಾರ್ಕಳ ಕ್ಷೇತ್ರದ ಟಿಕೆಟ್ ಅಂತಿಮ ಆಗಿಲ್ಲ. ಉಳಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಧಾರವಾಡದಲ್ಲಿ ಟಿಕೆಟ್ ಪಡೆದಿದ್ದಾರೆ. ವಿನಯ ಕುಲಕರ್ಣಿ ಸಿಎಂ ಕ್ಷೇತ್ರ ಶಿಗ್ಗಾಂವಿಯಲ್ಲಿ ಸ್ಪರ್ಧೆ ಮಾಡಲಿದ್ದಾರೆಂದು ಹೇಳಲಾಗಿತ್ತು.
ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ, ಕಲಘಟಕಿ ಕ್ಷೇತ್ರದಿಂದ ಸಂತೋಷ್ ಲಾಡ್, ಕಡೂರು ಕ್ಷೇತ್ರದಲ್ಲಿ ಕೆ.ಎಸ್. ಆನಂದ್ ಟಿಕೆಟ್ ಪಡೆದಿದ್ದಾರೆ. ಕಡೂರು ಕ್ಷೇತ್ರದಲ್ಲಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಸಿದ್ದರಾಮಯ್ಯ ಬಣದ ವೈಎಸ್ ವಿ ದತ್ತಾ ನಿರಾಸೆಗೊಂಡಿದ್ದಾರೆ.
ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಬಾಬುರಾವ್ ಚಿಂಚನಸೂರು ಗುರುಮಿಠಕಲ್ ಕ್ಷೇತ್ರದಲ್ಲಿ ಟಿಕೆಟ್ ಪಡೆದಿದ್ದಾರೆ. ಗಂಗಾವತಿಯಲ್ಲಿ ಇಕ್ಬಾಲ್ ಅನ್ಸಾರಿ, ಬಾದಾಮಿ ಬಿ.ಬಿ. ಚಿಮ್ಮನಕಟ್ಟಿ, ಗುಬ್ಬಿ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಬಂದಿದ್ದ ಎಸ್.ಆರ್.ಶ್ರೀನಿವಾಸ್ ಟಿಕೆಟ್ ಪಡೆದಿದ್ದಾರೆ. ಮಂಡ್ಯದಲ್ಲಿ ಡಿಕೆಶಿ ಆಪ್ತ ರವಿಕುಮಾರ್ ಗಣಿಗ, ಮೇಲುಕೋಟೆಯಲ್ಲಿ ರೈತ ಸಂಘದ ಕೆಎಸ್ ಪುಟ್ಟಣ್ಣಯ್ಯ ಅವರಿಗೆ ಕಾಂಗ್ರೆಸ್ ಬೆಂಬಲ ನೀಡಿದೆ
Congress releases second list of 42 candidates for Karnataka Assembly elections pic.twitter.com/wzpumgNTf3
— ANI (@ANI) April 6, 2023
Youth leader Prasad Raj Kanchan has been given the election ticket to contest from the Udupi constituency. As expected, the Congress gave the ticket to a candidate from the Mogaveera community. Prasad Raj has already started campaigning. It is said that that three names were in the final list for the Congress ticket from Udupi. Finally, Prasad Raj Kanchan was selected.
20-01-26 07:51 pm
Bangalore Correspondent
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
20-01-26 07:04 pm
HK News Desk
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
20-01-26 05:01 pm
Bangalore Correspondent
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm