ಬ್ರೇಕಿಂಗ್ ನ್ಯೂಸ್
07-04-23 07:14 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.7: ಕಡೂರು ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ವೈ.ಎಸ್.ವಿ.ದತ್ತಾ ತೀವ್ರ ಬೇಸರಗೊಂಡಿದ್ದು ಪಕ್ಷೇತರ ನಿಲ್ಲುತ್ತಾರಾ ಎನ್ನುವ ಕುತೂಹಲ ಉಂಟಾಗಿದೆ. ಟಿಕೆಟ್ ಸಿಗದ ಬೇಸರದಲ್ಲಿ ಅಭಿಮಾನಿಗಳಿಗೆ ಪತ್ರ ಬರೆದಿದ್ದು ಇಂದು ನನ್ನ-ನಿಮ್ಮ ಆತ್ಮಗೌರವ, ಸ್ವಾಭಿಮಾನಕ್ಕೆ ಅಪಮಾನ ಎಂದು ದತ್ತ ಮೇಷ್ಟ್ರು ಬರೆದುಕೊಂಡಿದ್ದಾರೆ.
ಆತ್ಮಗೌರವ ಹಾಗೂ ಸ್ವಾಭಿಮಾನಕ್ಕಾಗಿ ಅಭಿಮಾನಿಗಳ ಸಭೆ ಕರೆಯುತ್ತೇನೆ. ಕಡೂರಿನಲ್ಲಿ ಭಾನುವಾರ (ಎ.9) ಬೆಳಗ್ಗೆ 11 ಗಂಟೆಗೆ ಸಭೆಯಲ್ಲಿ ಮಾತುಕತೆ ನಡೆಸಿ ಮುಂದಿನ ನಡೆಯನ್ನು ನಿರ್ಧರಿಸುತ್ತೇನೆ ಎಂದು ವೈ.ಎಸ್.ವಿ.ದತ್ತಾ ತಿಳಿಸಿದ್ದಾರೆ.
ನನ್ನ ಬಳಿ ಹಣ-ಜಾತಿ ಬಲ ಇಲ್ಲದಿದ್ದರೂ ದತ್ತಣ್ಣ ಎಂದು ಕರೆದಿದ್ದೀರಾ.. ಆತ್ಮೀಯತೆಯಿಂದ ತಬ್ಬಿಕೊಂಡು ಬೆಳೆಸಿದ್ದೀರಾ.. ಪ್ರಸ್ತುತ ರಾಜಕೀಯ ಸ್ಥಿತಿಯಲ್ಲಿ ಒಬ್ಬರ ಜೊತೆ ಒಬ್ಬರಿರಬೇಕು. ನನ್ನ ಜೊತೆ ನೀವು, ನಿಮ್ಮ ಜೊತೆ ನಾನಿರಬೇಕು ಎಂದು ಮಾರ್ಮಿಕ ಮಾತುಗಳನ್ನು ದರ್ತಾ ಪತ್ರದಲ್ಲಿ ಬರೆದಿದ್ದಾರೆ.
ಕಡೂರು ಮತದಾರರ ಸ್ವಾಭಿಮಾನಕ್ಕಾಗಿ ಸಭೆ ಕರೆದಿದ್ದಾರೆ ಎನ್ನಲಾಗುತ್ತಿದೆ. ಇವರ ನಿಲುವು ನೋಡಿದರೆ ಕ್ಷೇತ್ರದಲ್ಲಿ ಪಕ್ಷೇತರ ಕಣಕ್ಕಿಳಿಯುವ ಸೂಚನೆ ಇದೆ. ದತ್ತಾ ಅವರು ಕಡೂರಿನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಹೀಗಾಗಿ ಇತ್ತೀಚೆಗೆ ಜೆಡಿಎಸ್ ಬಿಟ್ಟು ದತ್ತಣ್ಣ ಕಾಗ್ರೆಸ್ ಸೇರಿದ್ದರು. ಕಡೂರಿನ ಕಾಂಗ್ರೆಸ್ ಟಿಕೆಟ್ ಈ ಬಾರಿ ದತ್ತ ಅವರಿಗೆ ಎಂದು ಹೇಳಲಾಗಿತ್ತು. ಅಲ್ಲದೆ, ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿದ್ದರು.
ಆದರೆ ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಕೆ.ಎಸ್. ಆನಂದ್ ಹೆಸರು ಕಡೂರು ಕ್ಷೇತ್ರಕ್ಕೆ ಅಂತಿಮ ಮಾಡಲಾಗಿದೆ. ದತ್ತ ಅವರಿಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು ದತ್ತ ಮನೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.
ಪಕ್ಷೇತರವಾಗಿ ಚುನಾವಣೆ ಸ್ಪರ್ಧೆ ಮಾಡುವಂತೆ ದತ್ತಗೆ ಅಭಿಮಾನಿಗಳು ಸಲಹೆ ನೀಡಿದ್ದಾರೆ. ಇದಕ್ಕೆ ದತ್ತಣ್ಣ ತನ್ನ ಅಭಿಮಾನಿಗಳಿಗೆ ಎರಡು ದಿನ ಅವಕಾಶ ಕೇಳಿದ್ದಾರೆ. ಭಾನುವಾರದ ಸಭೆ ಬಳಿಕ ದತ್ತ ಅವರ ಮುಂದಿನ ತೀರ್ಮಾನ ಪ್ರಕಟವಾಗಲಿದೆ.
Congress Rebellion in Kadur, Duttannas emotional letter to fans. Congress Leader Y S V Datta who failed to get ticket to contest from Kadur constituency said that a meeting of his followers has been convened at Kadur on April 9 to discuss his future course of action. In a letter to his followers
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm