ಬ್ರೇಕಿಂಗ್ ನ್ಯೂಸ್
26-10-20 09:29 am Headline Karnataka News Network ಕರ್ನಾಟಕ
ಮೈಸೂರು, ಅಕ್ಟೋಬರ್ .26 : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಕೊನೆಯ ದಿನದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಸಂಭ್ರಮ ಮನೆ ಮಾಡಿದೆ.
ಕೊರೊನಾ ಹಿನ್ನೆಲೆಯಲ್ಲಿ ಕೇವಲ 300 ಮಂದಿಗೆ ಮಾತ್ರ ಜಂಬೂಸವಾರಿ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದ್ದು, ಸೀಮಿತ ಮಂದಿಯಷ್ಟೇ ಪಾಲ್ಗೊಳ್ಳಲಿದ್ದಾರೆ. ಪ್ರತಿ ವರ್ಷ ಲಕ್ಷಾಂತರ ಮಂದಿ ಭಾಗವಹಿಸುತ್ತಿದ್ದ ಜಂಬೂ ಸವಾರಿ ಈ ಬಾರಿ ಸೀಮಿತ ಸಂಖ್ಯೆಯ ವೀಕ್ಷಕರ ನಡುವೆ ಸಂಪನ್ನಗೊಳ್ಳಲಿದೆ.

ಮಧ್ಯಾಹ್ನ 2 ಗಂಟೆ 59 ನಿಮಿಷದಿಂದ 3 ಗಂಟೆ 20 ನಿಮಿಷದ ನಡುವಿನ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನಂದಿದ್ವಜಕ್ಕೆ ಪೂಜೆ ಸಲ್ಲಿಸಲಿದ್ದು ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. 3 ಗಂಟೆ 40 ನಿಮಿಷದಿಂದ 4 ಗಂಟೆ 15 ನಿಮಿಷದೊಳಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಅಂಬಾರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಆಬಳಿಕ ಅರಮನೆ ಆವರಣದಿಂದ ಜಂಬೂ ಸವಾರಿ ಆರಂಭಗೊಳ್ಳಲಿದೆ.
ಅರಮನೆ ಆವರಣಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದ್ದು, ಅರಮನೆ ಸುತ್ತ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 300 ಮಂದಿ ಪಾಲ್ಗೊಳ್ಳುವ ಗ್ಯಾಲರಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಆಸನ ವ್ಯವಸ್ಥೆ ಮಾಡಲಾಗಿದೆ.
ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಕೇವಲ ಎರಡು ಸ್ತಬ್ದಚಿತ್ರಗಳು, ಐದು ಜನಪದ ಕಲಾತಂಡಗಳು ಪಾಲ್ಗೊಳ್ಳಲಿವೆ. ಕೊರೊನಾ ಜಾಗೃತಿ ಮೂಡಿಸುವ ಒಂದು ಸ್ತಬ್ದಚಿತ್ರ ಪ್ರಮುಖವಾಗಿ ಪಾಲ್ಗೊಳ್ಳುತ್ತಿದೆ.
ನೇರ ವೀಕ್ಷಣೆಗೆ ನಿರ್ಬಂಧ ಇರುವುದರಿಂದ ಜನರು ವರ್ಚುವಲ್ ನೇರ ಪ್ರಸಾರ ಹಾಗೂ ಮಾಧ್ಯಮಗಳ ಮೂಲಕ ಮೆರವಣಿಗೆ ವೀಕ್ಷಿಸಿ ಕಣ್ತುಂಬಿಕೊಳ್ಳಬೇಕಾಗಿದೆ
Amid the covid-19 scare, the government has agreed to organise the world famous Dasara celebrations in the palace city of Mysuru in a "simple" way. Jamboo Savari, the biggest attractions of Mysuru Dasara, will be telecast live on Doordarshan Chandana and some social media platforms.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm