ಬ್ರೇಕಿಂಗ್ ನ್ಯೂಸ್
10-04-23 12:47 pm HK News Desk ಕರ್ನಾಟಕ
ವಿಜಯನಗರ, ಎ.10: ಮನುಷ್ಯ ಸತ್ತಾಗ ಸಂಬಂಧಿಕರು, ಸ್ನೇಹಿತರು ಅಂತಿಮ ಗೌರವ ಸಲ್ಲಿಸುವುದು ನಡೆದುಕೊಂಡು ಬಂದ ವಾಡಿಕೆ. ಆದರೆ ಇಲ್ಲೊಂದು ಮಂಗ ತನಗೆ ಅನ್ನ ಹಾಕುತ್ತಿದ್ದ ವ್ಯಕ್ತಿ ಸತ್ತಾಗ ಅಂತಿಮ ದರ್ಶನಕ್ಕೆ ಬಂದಿದ್ದಲ್ಲದೆ, ಆತನ ತಲೆಗೆ ಮುತ್ತುಕೊಟ್ಟು ವಿದಾಯ ಹೇಳಿದ್ದು ನೋಡಿದವರನ್ನು ಬೆರಗಾಗಿಸಿದೆ.
ವಿಜಯನಗರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಹೊಟೆಲ್ ಉದ್ಯಮಿ ಶವಕ್ಕೆ ಮಂಗ ಮುತ್ತು ಕೊಟ್ಟು ನಮನ ಸಲ್ಲಿಸಿ ತನಗೆ ಅನ್ನ ಕೊಟ್ಟವರ ಋಣ ತೀರಿಸಿದೆ. ಹಗರಿಬೊಮ್ಮನಹಳ್ಳಿ ಪಟ್ಟಣದ ಹೊಟೇಲ್ ಉದ್ಯಮಿ ಪರಶುರಾಮ ಪೋಮುಸಾ ಹಬೀಬ್ ಸಾವಜಿ ಎಂಬ ವೃದ್ಧ ವ್ಯಕ್ತಿ ಏಪ್ರಿಲ್ 3 ರಂದು ಇಹಲೋಕ ತ್ಯಜಿಸಿದ್ದರು. ಸಾವಜಿ ಸಣ್ಣಂದಿನಿಂದಲೂ ಪ್ರಾಣಿ - ಪಕ್ಷಿ ಪ್ರಿಯರಾಗಿದ್ದರು. ತಮ್ಮ ಜೀವನದುದ್ದಕ್ಕೂ ಪ್ರಾಣಿ ಪಕ್ಷಿಗಳಿಗೆ ಕೈಲಾದ ನೆರವು ನೀಡುತ್ತಿದ್ದರು. ಅದರಲ್ಲೂ ಈ ಕೋತಿಗೆ ನಿತ್ಯವೂ ಹೊಟೇಲಿನಿಂದ ಹಣ್ಣು, ರೊಟ್ಟಿ ನೀಡಿ ಆರೈಕೆ ಮಾಡುತ್ತಿದ್ದರು. ಮನೆಯ ಬಳಿ ಬರುತ್ತಿದ್ದ ಕೋತಿ ಕಿಟಕಿ ಬಳಿ ಬಂದು ಈ ಅಜ್ಜನನ್ನು ನೋಡುತ್ತಿತ್ತು. ಇದನ್ನು ಗಮನಿಸಿದ ಅಜ್ಜ ಮನೆಯವರಿಗೆ ಹೇಳಿ ಅದಕ್ಕೆ ಆಹಾರ ಕೊಡಿಸುತ್ತಿದ್ದರು.
ಅಜ್ಜನ ಸೂಚನೆಯಂತೆ ಮನೆಯವರು ಕೋತಿಗೆ ನಿತ್ಯವೂ ಆಹಾರ ನೀಡುತ್ತಿದ್ದರು. ಅದನ್ನು ತಿಂದ ಕೋತಿ ಸಂತೃಪ್ತಿಯಿಂದ ಮರಳುತ್ತಿತ್ತು. ಆದರೆ ಇಂದು ಅಜ್ಜ ಇಹಲೋಕ ತ್ಯಜಿಸಿದ್ದನ್ನು ತಿಳಿದ ಮಂಗ ತನ್ನ ಆಪತ್ಬಾಂಧವ ಆಗಲಿದ್ದಾನೆಂದು ಮರುಗಿದೆ. ಅಲ್ಲದೆ, ನಿತ್ಯ ತನಗೆ ಆಹಾರ ಹಾಕುತ್ತಿದ್ದ ಅಜ್ಜನ ಹಣೆಗೆ ಮುತ್ತು ಕೊಟ್ಟು ವಿದಾಯ ಹೇಳಿದ್ದು ಮಂಗನಿಗೂ ದುಃಖ, ಸಂತಸದ ಭಾವನೆ ಇದೆಯೆಂಬುದನ್ನು ಸಾರಿದೆ.
ಗೌರವ ಸಲ್ಲಿಸಿದ ಬಳಿಕ ಬಂದಷ್ಟೇ ವೇಗವಾಗಿ ಮಂಗ ಅಲ್ಲಿಂದ ತೆರಳಿದ್ದೂ ಆಗಿದೆ. ಈ ಮೂಲಕ ಅನ್ನ ಕೊಟ್ಟವರನ್ನು ಮುಪ್ಪಿನ ವರೆಗೂ ನೆನೆಯಬೇಕು ಎಂಬ ಸಂದೇಶವನ್ನು ಕೋತಿ ಸಾರಿದೆ. ಇದರ ವಿಡಿಯೋ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದ್ದು ಜನರ ಗಮನ ಸೆಳೆದಿದೆ.
Monkey kisses forehead of dead man during the last rites who feed it with rice, shocks people in Vijayanagara.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 10:17 pm
HK News Staffer
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm