ಬ್ರೇಕಿಂಗ್ ನ್ಯೂಸ್
10-04-23 12:47 pm HK News Desk ಕರ್ನಾಟಕ
ವಿಜಯನಗರ, ಎ.10: ಮನುಷ್ಯ ಸತ್ತಾಗ ಸಂಬಂಧಿಕರು, ಸ್ನೇಹಿತರು ಅಂತಿಮ ಗೌರವ ಸಲ್ಲಿಸುವುದು ನಡೆದುಕೊಂಡು ಬಂದ ವಾಡಿಕೆ. ಆದರೆ ಇಲ್ಲೊಂದು ಮಂಗ ತನಗೆ ಅನ್ನ ಹಾಕುತ್ತಿದ್ದ ವ್ಯಕ್ತಿ ಸತ್ತಾಗ ಅಂತಿಮ ದರ್ಶನಕ್ಕೆ ಬಂದಿದ್ದಲ್ಲದೆ, ಆತನ ತಲೆಗೆ ಮುತ್ತುಕೊಟ್ಟು ವಿದಾಯ ಹೇಳಿದ್ದು ನೋಡಿದವರನ್ನು ಬೆರಗಾಗಿಸಿದೆ.
ವಿಜಯನಗರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಹೊಟೆಲ್ ಉದ್ಯಮಿ ಶವಕ್ಕೆ ಮಂಗ ಮುತ್ತು ಕೊಟ್ಟು ನಮನ ಸಲ್ಲಿಸಿ ತನಗೆ ಅನ್ನ ಕೊಟ್ಟವರ ಋಣ ತೀರಿಸಿದೆ. ಹಗರಿಬೊಮ್ಮನಹಳ್ಳಿ ಪಟ್ಟಣದ ಹೊಟೇಲ್ ಉದ್ಯಮಿ ಪರಶುರಾಮ ಪೋಮುಸಾ ಹಬೀಬ್ ಸಾವಜಿ ಎಂಬ ವೃದ್ಧ ವ್ಯಕ್ತಿ ಏಪ್ರಿಲ್ 3 ರಂದು ಇಹಲೋಕ ತ್ಯಜಿಸಿದ್ದರು. ಸಾವಜಿ ಸಣ್ಣಂದಿನಿಂದಲೂ ಪ್ರಾಣಿ - ಪಕ್ಷಿ ಪ್ರಿಯರಾಗಿದ್ದರು. ತಮ್ಮ ಜೀವನದುದ್ದಕ್ಕೂ ಪ್ರಾಣಿ ಪಕ್ಷಿಗಳಿಗೆ ಕೈಲಾದ ನೆರವು ನೀಡುತ್ತಿದ್ದರು. ಅದರಲ್ಲೂ ಈ ಕೋತಿಗೆ ನಿತ್ಯವೂ ಹೊಟೇಲಿನಿಂದ ಹಣ್ಣು, ರೊಟ್ಟಿ ನೀಡಿ ಆರೈಕೆ ಮಾಡುತ್ತಿದ್ದರು. ಮನೆಯ ಬಳಿ ಬರುತ್ತಿದ್ದ ಕೋತಿ ಕಿಟಕಿ ಬಳಿ ಬಂದು ಈ ಅಜ್ಜನನ್ನು ನೋಡುತ್ತಿತ್ತು. ಇದನ್ನು ಗಮನಿಸಿದ ಅಜ್ಜ ಮನೆಯವರಿಗೆ ಹೇಳಿ ಅದಕ್ಕೆ ಆಹಾರ ಕೊಡಿಸುತ್ತಿದ್ದರು.
ಅಜ್ಜನ ಸೂಚನೆಯಂತೆ ಮನೆಯವರು ಕೋತಿಗೆ ನಿತ್ಯವೂ ಆಹಾರ ನೀಡುತ್ತಿದ್ದರು. ಅದನ್ನು ತಿಂದ ಕೋತಿ ಸಂತೃಪ್ತಿಯಿಂದ ಮರಳುತ್ತಿತ್ತು. ಆದರೆ ಇಂದು ಅಜ್ಜ ಇಹಲೋಕ ತ್ಯಜಿಸಿದ್ದನ್ನು ತಿಳಿದ ಮಂಗ ತನ್ನ ಆಪತ್ಬಾಂಧವ ಆಗಲಿದ್ದಾನೆಂದು ಮರುಗಿದೆ. ಅಲ್ಲದೆ, ನಿತ್ಯ ತನಗೆ ಆಹಾರ ಹಾಕುತ್ತಿದ್ದ ಅಜ್ಜನ ಹಣೆಗೆ ಮುತ್ತು ಕೊಟ್ಟು ವಿದಾಯ ಹೇಳಿದ್ದು ಮಂಗನಿಗೂ ದುಃಖ, ಸಂತಸದ ಭಾವನೆ ಇದೆಯೆಂಬುದನ್ನು ಸಾರಿದೆ.
ಗೌರವ ಸಲ್ಲಿಸಿದ ಬಳಿಕ ಬಂದಷ್ಟೇ ವೇಗವಾಗಿ ಮಂಗ ಅಲ್ಲಿಂದ ತೆರಳಿದ್ದೂ ಆಗಿದೆ. ಈ ಮೂಲಕ ಅನ್ನ ಕೊಟ್ಟವರನ್ನು ಮುಪ್ಪಿನ ವರೆಗೂ ನೆನೆಯಬೇಕು ಎಂಬ ಸಂದೇಶವನ್ನು ಕೋತಿ ಸಾರಿದೆ. ಇದರ ವಿಡಿಯೋ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದ್ದು ಜನರ ಗಮನ ಸೆಳೆದಿದೆ.
Monkey kisses forehead of dead man during the last rites who feed it with rice, shocks people in Vijayanagara.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm