ಬ್ರೇಕಿಂಗ್ ನ್ಯೂಸ್
12-04-23 12:26 pm HK News Desk ಕರ್ನಾಟಕ
ಬೆಳಗಾವಿ, ಎ.12: ಟಿಕೆಟ್ ತಪ್ಪಿಸಿಕೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಈಗ ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ.
ಬುಧವಾರ ಅಥಣಿ ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಿಷ್ಠಾವಂತನಿಗೆ ಗೌರವ ಇರದ ಪಕ್ಷದಲ್ಲಿ ಇರುವ ಅಗತ್ಯತೆ ಇಲ್ಲ. ವಿಧಾನಪರಿಷತ್ ಸ್ಥಾನಕ್ಕೂ ರಾಜಿನಾಮೆ ನೀಡುವಂತೆ ಕ್ಷೇತ್ರದ ಜನತೆ ಸಲಹೆ ನೀಡಿದ್ದಾರೆ. ನಾನೂ ಕೂಡ ಸ್ವಾಭಿಮಾನಿ ರಾಜಕಾರಣಿ. ಲಜ್ಜೆಗೆಟ್ಟ ರಾಜಕಾರಣಿ ಅಲ್ಲ. ಅಧಿಕಾರದ ಅಮಲಿನಲ್ಲೂ ನಾನಿಲ್ಲ. ನಾನು ಯಾರ ಬೆನ್ನಿಗೂ ಚೂರಿ ಹಾಕಿಲ್ಲ ಎಂದರು.
ನನ್ನ ಹೈ ಕಮಾಂಡ್ ನನ್ನ ಜನತೆ. ಜನತೆ ತೀರ್ಮಾನಕ್ಕೆ ಬದ್ಧನಾಗಿದ್ದು ತಕ್ಷಣ ವಿಧಾನಪರಿಷತ್ ಸದಸ್ಯತ್ವ ಸೇರಿದಂತೆ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜಿನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದರು.


ರಮೇಶ್ ಜಾರಕಿಹೊಳಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಲಕ್ಷ್ಮಣ ಸವದಿ, 'ನನ್ನೊಂದಿಗೆ ಸ್ನೇಹದಿಂದ ಇದ್ದ, ಪ್ರೀತಿಯಿಂದ ನೋಡುತ್ತಿದ್ದ ಸಿಎಂ ಬಸವರಾಜ ಬೊಮ್ಮಾಯಿಗೆ ಈಗ ಎರಡನೇ ಬಾರಿಗೆ ಸಿಎಂ ಆಗುವ ಭಾಗ್ಯ ಇಲ್ಲ. ಪ್ರಧಾನಿ ಆಗುವ ಯೋಗ ಇದೆ. ಇದೆಲ್ಲದರ ನಡುವೆ ನನಗೂ ಒಬ್ಬರು ಗುರು ಇದ್ದಾರೆ. ಅವರ ಮಾತು ಮೀರುವ ಪರಿಸ್ಥಿತಿ ಬಂದಿದೆ. ಕ್ಷಮಿಸಿ ಗುರುವೇ' ಎಂದು ಸಿಎಂ ವಿರುದ್ಧವೂ ಪರೋಕ್ಷವಾಗಿ ಮಾತಿನ ತಿರುಗೇಟು ಕೊಟ್ಟರು.
ಪಕ್ಷಾಂತರ ವಿಷಯವಾಗಿ ಪ್ರತಿಕ್ರಿಯಿಸಿದ ಸವದಿ, 'ಇಷ್ಟೆಲ್ಲ ಆದರೂ ಬಿಜೆಪಿ ವರಿಷ್ಟರಾರೂ ನನ್ನನ್ನು ಸಂಪರ್ಕಿಸಿಲ್ಲ. ಆದರೆ, ಇತರ ಪಕ್ಷಗಳ ಅನೇಕ ಮುಖಂಡರು ಸಂಪರ್ಕದಲ್ಲಿದ್ದಾರೆ. ನಾಳೆಯೇ ಗಟ್ಟಿ, ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ' ಎಂದು ಪಕ್ಷ ಬದಲಾವಣೆಯ ಮುನ್ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಲಕ್ಷ್ಮಣ ಸವದಿ ಮನೆಗೆ ಮಾಜಿ ಶಾಸಕ ಹಾಗೂ ಸವದಿ ಸ್ನೇಹಿತ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಭೇಟಿ ನೀಡಿ ಚರ್ಚಿಸಿದ್ದಾರೆ. ಅರ್ಧ ಗಂಟೆಗಯೂ ಹೆಚ್ಚು ಹೊತ್ತು ಮಾತುಕತೆ ನಡೆಸಿದ ಹಳೇ ಸ್ನೇಹಿತರು ಹೊಸ ಲೆಕ್ಕಾಚಾರ ಹಾಕಿದ್ದು, ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ಪಕ್ಕಾ ಎನ್ನುವಂತೆ ಮಾಡಿದೆ.
20 ವರ್ಷಗಳಿಂದ ಕ್ಷೇತ್ರದ ಜನ ನನ್ನ ಮಾತು ಕೇಳಿದ್ದಾರೆ. ಈಗ ನಾನು ಜನತೆ ಮಾತು ಕೇಳುತ್ತೇನೆ. ಸ್ವತಂತ್ರವಾಗಿ ಸ್ಪರ್ಧಿಸು ಎಂದರೆ ಅದಕ್ಕೂ ಸಿದ್ಧ. ನಾನೀಗ ರಾಜಕೀಯದ ಸಂಕಷ್ಟ ಕಾಲದಲ್ಲಿದ್ದೇನೆ. ಈಗ ನನ್ನ ಕೈ ಬಿಡಬೇಡಿ'', ಎಂದು ಕ್ಷೇತ್ರದ ಮತದಾರರಲ್ಲಿ ಮನವಿ ಮಾಡುತ್ತ ಲಕ್ಷ್ಮಣ ಸವದಿ ಕಣ್ಣೀರು ಹಾಕಿದರು.
A day after former Deputy Chief Minister of Karnataka Laxman Savadi was denied ticket to fight the state Assembly elections, the BJP MLC announced his decision to quit the party
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
20-01-26 07:04 pm
HK News Desk
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
20-01-26 05:01 pm
Bangalore Correspondent
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm