ಬ್ರೇಕಿಂಗ್ ನ್ಯೂಸ್
12-04-23 07:59 pm HK News Desk ಕರ್ನಾಟಕ
ಶಿವಮೊಗ್ಗ, ಎ.12: ಕರ್ನಾಟಕ ವಿಧಾನಸಭಾ ಚುನಾವಣೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಬಿಜೆಪಿ ಟಿಕೆಟ್ ವಿಚಾರ ಇದೀಗ ಬಿಜೆಪಿಯಲ್ಲಿ ಬಂಡಾಯದ ಬಾವುಟ ಜೋರಾಗಿದೆ. ಪಕ್ಷದ ಹಿರಿಯ ನಾಯರ ಕೆಎಸ್ ಈಶ್ವರಪ್ಪ ರಾಜೀನಾಮೆ ಘೋಷಣೆ ಬೆನ್ನಲ್ಲೇ ಹಲವು ಹಿರಿಯ ನಾಯಕರು ಪಕ್ಷ ತೊರೆಯುತ್ತಿದ್ದಾರೆ.
ಲಕ್ಷ್ಮಣ್ ಸವದಿ ಬೆನ್ನಲ್ಲೇ ಆರ್ ಶಂಕರ್ ಬಿಜೆಪಿ ತೊರೆದಿದ್ದಾರೆ. ಇತ್ತ ಈಶ್ವರಪ್ಪ ರಾಜೀಮಾಮೆ ಎಫೆಕ್ಟ್ ಇಷ್ಟಕ್ಕೆ ನಿಂತಿಲ್ಲ. ರಾಜೀನಾಮೆಯಿಂದ ಬೇಸತ್ತು, ಶಿವಮೊಗ್ಗ ಮಹಾನಗರ ಪಾಲಿಕೆಯ 19 ಸದಸ್ಯರು ದಿಢೀರ್ ರಾಜೀನಾಮೆ ಘೋಷಿಸಿದ್ದಾರೆ. ಶಿವಮೊಗ್ಗ ನಗರ ಬಿಜೆಪಿ ಅಧ್ಯಕ್ಷಕರು ಹಾಗೂ ಜಿಲ್ಲಾಧ್ಯಕ್ಷರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.
ಮಾಜಿ ಸಚಿವ ಈಶ್ವರಪ್ಪನವರಿಗೆ ಟಿಕೆಟ್ ನಿರಾಕರಿಸಿದ ಕಾರಣ ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ. ಪಕ್ಷದ ಸೂಚನೆಯಂತೆ ನಡೆದುಕೊಂಡಿದ್ದಾರೆ. ಆದರೆ ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಕಟ್ಟಿದ ಹಿರಿಯ ನಾಯಕರಿಗೆ ಬಿಜೆಪಿ ಹೈಕಮಾಂಡ್ ದ್ರೋಹ ಮಾಡಿದೆ ಎಂದು ಪಾಲಿಗೆ ಸದಸ್ಯರು ಆರೋಪಿಸಿದ್ದಾರೆ. ಹೀಗಾಗಿ ರಾಜೀನಾಮೆ ನೀಡಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ಹುಟ್ಟು ಹಾಕಿ, ರಾಜ್ಯದಲ್ಲಿ ಪಕ್ಷವನ್ನು ಈ ಮಟ್ಟಕ್ಕೆ ಬೆಳೆಯಲು ಕಾರಣರಾಜ ಮಹನೀಯರಲ್ಲಿ ಬಿಎಸ್ ಯಡಿಯೂರಪ್ಪ, ದಿವಂಗತ ಅನಂತ್ ಕುಮಾರ್ ಹಾಗೂ ಕೆಎಸ್ ಈಶ್ವರಪ್ಪನ ಅಗ್ರಮಾನ್ಯರು. ಈಶ್ವರಪ್ಪ ತಮ್ಮದೇ ವ್ಯಕ್ತಿತ್ವ ಹಾಗೂ ವರ್ಚಸ್ಸಿನ ಮೂಲಕ ಇಡೀ ರಾಜ್ಯಾದ್ಯಂತ ಪಕ್ಷವನ್ನು ಸಂಘಟಿಸಿದ್ದಾರೆ. ಶಿವಮೊಗ್ಗ ನಗರದ ಶಾಸಕರಾಗಿ, ರಾಜ್ಯ ಸರ್ಕಾರದ ಸಚಿವರಾಗಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಈ ಜನಪ್ರಿಯ ನಾಯಕರನ್ನು ವಯಸ್ಸಿನ ಕಾರಣ ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧಿಸದಂತೆ ಸೂಚಿಸಿ ಬಿಜೆಪಿ ಹೈಕಮಾಂಡ್ ರಾಜೀನಾಮೆ ಪತ್ರವನ್ನು ಪಡೆದಿದ್ದಾರೆ. ಕೇಂದ್ರದ ಬಿಜೆಪಿ ವರಿಷ್ಠರ ನಿರ್ಧಾರ ಆತಂಕಕಾರಿಯಾಗಿದೆ. ಇದೇ ವಯಸ್ಸಿನ ಬೇರೆ ನಾಯಕರಿಗೆ ಇತರ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದಾರೆ. ಆದರೆ ಈಶ್ವರಪ್ಪನವರಿಗೆ ಟಿಕೆಟ್ ನಿರಾಕರಿಸಲಾಗಿದೆ. ನಮ್ಮಂತ ನಾಯಕರನ್ನು ಗುರುತಿಸಿ ಬೆಳೆಸಿದ ಸಂಪೂರ್ಣ ಶ್ರೇಯಸ್ಸು ಈಶ್ವರಪ್ಪನವರಿಗೆಸಲ್ಲುತ್ತದೆ. ಬಿಜೆಪಿ ಹೈಕಮಾಂಡ್ ಅನಿರೀಕ್ಷಿತ ನಡೆಯನ್ನು ವಿರೋಧಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯತ್ವಕ್ಕೆ ರಾಜೀನಾಮೆ ಘೋಷಿಸುತ್ತಿದ್ದೇವೆ ಎಂದು 19 ಬಿಜೆಪಿ ನಾಯಕರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಮಹಾನಗರ ಪಾಲಿಕೆಯ ಮೇಯರ್ ಶಿವಕುಮಾರ್ , ಉಪಮೇಯರ್ ಲಕ್ಷ್ಮಿ ಶಂಕರ್ ನಾಯಕ್ ಸೇರಿದಂತೆ 19 ಪಾಲಿಕೆ ಸದಸ್ಯರಿಂದ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿ ನೀಡಿದ್ದಾರೆ. ಇದೇ ವೇಳೆ ಈಶ್ವರಪ್ಪನವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ. ಇದೀಗ ಈಶ್ವರಪ್ಪ ರಾಜೀನಾಮೆ ವಿಚಾರ ಭಾರಿ ಕೋಲಾಹಲ ಸೃಷ್ಟಿಸಿದೆ. ಈಗಾಗಲೇ ಈಶ್ವರಪ್ಪ ಕಾರ್ಯಕರ್ತರು, ಬೆಂಬಲಿಗರಿಗೆ ಸಮಾಧಾನ ಪಡಿಸುವ ಕಾರ್ಯವನ್ನೂ ಮಾಡಿದ್ದಾರೆ. ಆದರೆ ಬೆಂಬಲಿಗರು ಸುಮ್ಮನಾಗಿಲ್ಲ. ಟೈಯರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ 34 ವರ್ಷಗಳಿಂದ ಸ್ಪರ್ಧಿಸಿ ಸೋಲು-ಗೆಲುವುಗಳ ಮೂಲಕ ಬಿಜೆಪಿಗೆ ಮತ್ತು ತಮ್ಮ ವರ್ಚಸ್ಸಿಗೆ ಭದ್ರ ಬುನಾದಿ ಹಾಕಿದ್ದ ಈಶ್ವರಪ್ಪ ಮಂಗಳವಾರ ಮಧ್ಯಾಹ್ನ ಯಾರಿಗೂ ಸುಳಿವು ನೀಡದೆ ನೇರವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದು ತಮ್ಮ ಚುನಾವಣಾ ನಿವೃತ್ತಿ ಪ್ರಕಟಿಸಿದ್ದರು.
Several leaders and office bearers of the Bharatiya Janata Party (BJP) in Karnataka's Shivamogga district have tendered mass resignation in support of senior leader and former Deputy Chief Minister KS Eshwarappa
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm