ಬ್ರೇಕಿಂಗ್ ನ್ಯೂಸ್
13-04-23 02:52 pm Bangalore Correspondent ಕರ್ನಾಟಕ
ಬೆಂಗಳೂರು, ಎ.13: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಇದರಲ್ಲೂ ಹಲವು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.
ಟಿಕೆಟ್ ವಂಚಿತ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಟಿಕೆಟ್ ಕೈತಪ್ಪಿದ್ದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಎಂಪಿ ಕುಮಾರಸ್ವಾಮಿ ಅವರು, ನನಗೆ ಮೂಡಿಗೆರೆ ಕ್ಷೇತ್ರದ ಟಿಕೆಟ್ ತಪ್ಪಲು ಸಿ.ಟಿ.ರವಿ ಕಾರಣ ಎಂದು ಆರೋಪಿಸಿದ್ದಾರೆ.

ಸಿಟಿ ರವಿ ಅವರಿಗೆ ನಿಷ್ಠರಾಗಿ ಹೋಗಬೇಕು, ಅದು ನನ್ನಿಂದ ಸಾಧ್ಯವಿಲ್ಲ. ರಾಜ್ಯದಲ್ಲಿ ಬಿಜೆಪಿ ನೆಲಕಚ್ಚಲು ಸಿ.ಟಿ.ರವಿ ಕಾರಣ ಆಗುತ್ತಾರೆ. ದೆಹಲಿಯಲ್ಲಿ ಶಾಸಕ ಸಿ.ಟಿ.ರವಿ ಕಣ್ಣಾಮುಚ್ಚಾಲೆ ಆಟ ಆಡಿದ್ದಾರೆ. ಬಿಎಸ್ ಯಡಿಯೂರಪ್ಪ ಅವರು ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡ್ರೆ 50 ಸ್ಥಾನವೂ ಬರಲ್ಲ. ಬಿಜೆಪಿ ಸಿ.ಟಿ ರವಿಯನ್ನು ನಂಬಿಕೊಂಡು ಹೋದರೆ ಮುಂದಿನ ದಿನಗಳಲ್ಲಿ ಅನುಭವಿಸುತ್ತದೆ. ಸಿಟಿ ರವಿ ಓದ್ಕೊಂಡು ಬಂದಿಲ್ಲ. ಸಂಘ ಪರಿವಾರದ ಜೊತೆ ಇದ್ದು ಮಾತನಾಡುವುದನ್ನು ಕಲಿತುಕೊಂಡಿದ್ದಾನೆ ಎಂದು ವಾಗ್ದಾಳಿ ನಡೆಸಿದರು. ಹೈಕಮಾಂಡ್ಗೆ ನನ್ನ ಬಗ್ಗೆ ತಪ್ಪು ವರದಿ ಕೊಟ್ಟಿದ್ದಾರೆ. ವೈಯಕ್ತಿಕ ಕಾರಣಕ್ಕೆ ರಾಜಕಾರಣ ಮಾಡುತ್ತಿದ್ದಾರೆ. ಕೆಲ ರಾಜ್ಯ ನಾಯಕರೇ ಇದಕ್ಕೆ ಕಾರಣ.
ಸಿಟಿ ರವಿ ಕೈವಾಡ ಇದೆ ಅನ್ನೋದು ಸ್ಪಷ್ಟವಾಗಿ ತಿಳಿದಿದೆ. ಹೈಕಮಾಂಡ್ ಮುಂದೆ ನನ್ನ ಬಗ್ಗೆ ಇಲ್ಲಸಲ್ಲದ್ದನ್ನು ಹೇಳಿ ಟಿಕೆಟ್ ತಪ್ಪಿಸಿದ್ದಾರೆ. ಬಿಜೆಪಿ ಮುಗಿಸುವವರೆಗೂ ಸಿ.ಟಿ ರವಿ ವಿಶ್ರಾಂತಿ ಪಡೆಯುವುದಿಲ್ಲ. ಪಕ್ಷಕ್ಕೆ ಇದು ಮುಂದೇ ಗೊತ್ತಾಗುತ್ತದೆ ಎಂದು ಗುಡುಗಿದರು. ಪಕ್ಷಕ್ಕೆ ನಾನು ಏನು ಅನ್ಯಾಯ ಮಾಡಿದ್ದೇನೆ. ಜನರ ಸೇವೆ ಮಾಡುವ ಶಕ್ತಿ ಇನ್ನೂ ಇದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
Mudigere MLA M.P. Kumaraswamy submitted his resignation from the primary membership of the BJP to party State unit president Nalin Kumar Kateel. He took this decision after being denied the ticket to contest from Mudigere constituency in Chikkamagaluru district for the Assembly elections in Karnataka, which are scheduled on May 10.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm