ಬ್ರೇಕಿಂಗ್ ನ್ಯೂಸ್
14-04-23 09:45 pm HK News Desk ಕರ್ನಾಟಕ
ಹಾಸನ, ಎ.14 : ಮಾಜಿ ಸಿಎಂ ಯಡಿಯೂರಪ್ಪ ಬಲಗೈ ಬಂಟನಂತಿದ್ದ ಯುವ ಮುಖಂಡ ಎನ್.ಆರ್ ಸಂತೋಷ್ ಜೆಡಿಎಸ್ ಕಡೆಗೆ ತಿರುಗಿದ್ದಾರೆ. ಅರಸೀಕೆರೆ ಬಿಜೆಪಿ ಟಿಕೆಟ್ ಸಿಗದೆ ಬಂಡಾಯ ಎದ್ದಿದ್ದ ಸಂತೋಷ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ರೇವಣ್ಣ ಮತ್ತು ಪ್ರಜ್ವಲ್ ಮುಂದಾಗಿದ್ದಾರೆ.
ಕಡೂರಿನಲ್ಲಿ ವೈಎಸ್ವಿ ದತ್ತಾ ಅವರನ್ನು ಸೆಳೆದುಕೊಂಡ ಮಾದರಿಯಲ್ಲಿ ಅರಸೀಕೆರೆಯಲ್ಲೂ ರೇವಣ್ಣ ಬಿಜೆಪಿ ಟಿಕೆಟ್ ಆಕಾಂಕ್ಷಿಗೆ ಗಾಳ ಹಾಕಿದ್ದು ಯಶಸ್ಸು ಸಾಧಿಸಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿ ಟಿಕೆಟ್ ಸಿಗದೆ ಬಂಡಾಯದ ಮುನ್ಸೂಚನೆ ನೀಡಿದ್ದ ಎನ್.ಆರ್.ಸಂತೋಷ ಜೆಡಿಎಸ್ ಸೇರುವ ಸುಳಿವು ನೀಡಿದ್ದಾರೆ. ಇದರ ಬೆನ್ನಲ್ಲೇ ಸಂತೋಷ್ ಬೆಂಬಲಿಗರು ತೆನೆಹೊತ್ತ ಮಹಿಳೆಯ ಚಿಹ್ನೆಯ ಜೊತೆಗೆ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ಸಮ್ಮಿಶ್ರ ಸರ್ಕಾರ ಕೆಡವಿ ಯಡಿಯೂರಪ್ಪ ಅವರನ್ನು ಸಿಎಂ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎನ್.ಆರ್.ಸಂತೋಷ್ ಅವರನ್ನೇ ಜೆಡಿಎಸ್ ಕಡೆ ಸೆಳೆದು ಸಂಸದ ಪ್ರಜ್ವಲ್ ಮತ್ತು ಮಾಜಿ ಸಚಿವ ರೇವಣ್ಣ ವಿರೋಧಿಗಳಿಗೆ ದೊಡ್ಡ ಟಾಂಗ್ ನೀಡಿದ್ದಾರೆ. ಅರಸೀಕೆರೆ ಕ್ಷೇತ್ರದಲ್ಲಿ ಎನ್.ಆರ್ ಸಂತೋಷ್ ಪ್ರಭಾವಿಯಾಗಿದ್ದು ಈ ಬಾರಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು.
ನಿನ್ನೆ ತಮ್ಮ ನಿವಾಸದೆದುರಿನ ಬೆಂಬಲಿಗರ ಸಭೆಯಲ್ಲಿ ಸಂತೋಷ್ ಅವರನ್ನು ಜೆಡಿಎಸ್ ಸೇರಿ ಎಂದು ಬೆಂಬಲಿಗರು ಒತ್ತಾಯ ಮಾಡಿದ್ದರು. ಬೆಂಬಲಿಗರ ಒತ್ತಾಯದಂತೆ ಜೆಡಿಎಸ್ ಸೇರಲು ಸಂತೋಷ್ ಓಕೆ ಎಂದಿದ್ದರು. ಕುಮಾರಸ್ವಾಮಿ ಬದಿಗಿಟ್ಟು ಮಾಜಿ ಸಚಿವ ರೇವಣ್ಣ ಮತ್ತು ಮಗ ಪ್ರಜ್ವಲ್ ಸೇರಿ ಆಪರೇಶನ್ ನಡೆಸಿದ್ದು ಬೆಂಗಳೂರಿನಲ್ಲಿ ದೇವೇಗೌಡರ ಭೇಟಿ ಮಸಡಿಸಿದ್ದಾರೆ. ಇದಲ್ಲದೆ, ಈಗಾಗಲೇ ಕ್ಷೇತ್ರದ ಅಭ್ಯರ್ಥಿ ಎಂದು ಬಿಂಬಿತವಾಗಿದ್ದ ಬಾಣಾವರ ಅಶೋಕ್ ಜೊತೆಗೆ ರೇವಣ್ಣ ಮತ್ತು ಪ್ರಜ್ವಲ್ ಮಾತನಾಡಿ ಮನವೊಲಿಕೆ ಮಾಡಿದ್ದಾರೆ. ನಿಮ್ಮ ತೀರ್ಮಾನಕ್ಕೆ ಬದ್ದ ಎಂದು ಬಾಣಾವರ ಅಶೋಕ್ ತಿಳಿಸಿದ್ದಾರೆ ಎನ್ನಲಾಗಿದೆ.
Former Chief Minister B.S. Yediyurappa’s relative N.R. Santhosh, an aspirant for the Arsikere seat in Hassan district, has been denied the ticket by the BJP. The BJP has nominated G.V. Basavaraj in the constituency. N R Santosh is likely to join JDS.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm