ಬ್ರೇಕಿಂಗ್ ನ್ಯೂಸ್
18-04-23 10:27 pm HK News Desk ಕರ್ನಾಟಕ
ಮೈಸೂರು, ಎ.18 : ಇಟಲಿಯಲ್ಲಿ ಹುಟ್ಟಿದ ಸೋನಿಯಾಗಾಂಧಿ ಬಳ್ಳಾರಿಯಲ್ಲಿ ಚುನಾವಣೆಗೆ ನಿಲ್ಲಬಹುದು, ಅಲಹಾಬಾದ್ನಲ್ಲಿ ಜನಿಸಿದ ಇಂದಿರಾ ಗಾಂಧಿ ಚಿಕ್ಕಮಗಳೂರಿಗೆ ಬರಬಹುದು. ವಿದೇಶಿ ಅಮ್ಮನಿಗೆ ದಿಲ್ಲಿಯಲ್ಲಿ ಹುಟ್ಟಿದ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ಹೋಗಬಹುದು. ವಿ.ಸೋಮಣ್ಣ ವರುಣಾ ಕ್ಷೇತ್ರಕ್ಕೆ ಬರಬಾರದಾ?
ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ಅಲ್ಲದೇ, ನೀವು ಬಾದಾಮಿಯಲ್ಲಿ ಹುಟ್ಟಿ ಗೋಲಿ ಆಡಿದ್ದೀರಲ್ಲಾ ಎಂದು ಟ್ವಿಟರ್ನಲ್ಲಿ ಟಾಂಗ್ ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ರಾಮನಗರ ಮೂಲದ, ಬೆಂಗಳೂರು ನಗರದಲ್ಲಿ ರಾಜಕೀಯ ಮಾಡಿಕೊಂಡಿದ್ದ ಸೋಮಣ್ಣ ಅವರನ್ನು ಬಿಜೆಪಿ ಒತ್ತಾಯಪೂರ್ವಕವಾಗಿ ವರುಣಾ ಕ್ಷೇತ್ರಕ್ಕೆ ಕರೆತಂದು ಕಣಕ್ಕಿಳಿಸಿದೆ. ಇದು ಬಿಜೆಪಿಯ ಹರಕೆಯ ಕುರಿ ಮತ್ತು ವರುಣಾದ ಮನೆ ಮಗನ ನಡುವಿನ ಚುನಾವಣೆ. ನನ್ನ ಜನ ಹಣಕ್ಕೆ ಮರುಳಾಗಿ ತಮ್ಮವರನ್ನು ಕೈಬಿಡುವವರಲ್ಲ ಎಂದು ಹೇಳಿದ್ದರು.
ಅಲ್ಲದೆ, ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದವ, ಇಲ್ಲಿನ ಮಣ್ಣಿನ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ. ಈ ಹಿಂದೆ ವರುಣಾವನ್ನು ಪ್ರತಿನಿಧಿಸಿದಾಗೆಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ದುಡಿದಿದ್ದೇನೆ. ನನ್ನ ಸಾಧನೆಗಳು ಇಲ್ಲಿನ ಜನರ ಬದುಕಿನಲ್ಲಿದೆ. ನನ್ನ ಗೆಲುವಿಗೆ ಇದಕ್ಕಿಂತ ಹೆಚ್ಚೇನು ಬೇಕು? ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಪ್ರತಾಪಸಿಂಹ ತಿರುಗೇಟು ನೀಡಿದ್ದಾರೆ.
ಸಿದ್ರಾಮಣ್ಣ, ಇಟಲಿಯಲ್ಲಿ ಹುಟ್ಟಿದ ಸೋನಿಯಾಗಾಂಧಿ ಬಳ್ಳಾರಿಯಲ್ಲಿ ಚುನಾವಣೆಗೆ ನಿಲ್ಲಬಹುದು, ಅಲಹಾಬಾದ್ನಲ್ಲಿ ಜನಿಸಿದ ಇಂದಿರಾ ಗಾಂಧಿ ಚಿಕ್ಕಮಗಳೂರಿಗೆ ಬರಬಹುದು, ವಿದೇಶಿ ಅಮ್ಮನಿಗೆ ದಿಲ್ಲಿಯಲ್ಲಿ ಹುಟ್ಟಿದ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ಹೋಗಬಹುದು, ಸೋಮಣ್ಣ ವರುಣಾಕ್ಕೆ ಬರಬಾರದಾ? ಅದಿರಲಿ, ಬದಾಮಿಯಲ್ಲೂ ನೀವು ಹುಟ್ಟಿ ಗೋಲಿ ಆಡಿದ್ದಿರಾ? https://t.co/e7DP2HFTNR
— Pratap Simha (@mepratap) April 18, 2023
Pratap Simha slams siddaramaiah, says if Sonia Gandhi from Italy could contest in Ballari, why cant Somanna from Varuna
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm