ಬ್ರೇಕಿಂಗ್ ನ್ಯೂಸ್
18-04-23 10:27 pm HK News Desk ಕರ್ನಾಟಕ
ಮೈಸೂರು, ಎ.18 : ಇಟಲಿಯಲ್ಲಿ ಹುಟ್ಟಿದ ಸೋನಿಯಾಗಾಂಧಿ ಬಳ್ಳಾರಿಯಲ್ಲಿ ಚುನಾವಣೆಗೆ ನಿಲ್ಲಬಹುದು, ಅಲಹಾಬಾದ್ನಲ್ಲಿ ಜನಿಸಿದ ಇಂದಿರಾ ಗಾಂಧಿ ಚಿಕ್ಕಮಗಳೂರಿಗೆ ಬರಬಹುದು. ವಿದೇಶಿ ಅಮ್ಮನಿಗೆ ದಿಲ್ಲಿಯಲ್ಲಿ ಹುಟ್ಟಿದ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ಹೋಗಬಹುದು. ವಿ.ಸೋಮಣ್ಣ ವರುಣಾ ಕ್ಷೇತ್ರಕ್ಕೆ ಬರಬಾರದಾ?
ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ಅಲ್ಲದೇ, ನೀವು ಬಾದಾಮಿಯಲ್ಲಿ ಹುಟ್ಟಿ ಗೋಲಿ ಆಡಿದ್ದೀರಲ್ಲಾ ಎಂದು ಟ್ವಿಟರ್ನಲ್ಲಿ ಟಾಂಗ್ ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ರಾಮನಗರ ಮೂಲದ, ಬೆಂಗಳೂರು ನಗರದಲ್ಲಿ ರಾಜಕೀಯ ಮಾಡಿಕೊಂಡಿದ್ದ ಸೋಮಣ್ಣ ಅವರನ್ನು ಬಿಜೆಪಿ ಒತ್ತಾಯಪೂರ್ವಕವಾಗಿ ವರುಣಾ ಕ್ಷೇತ್ರಕ್ಕೆ ಕರೆತಂದು ಕಣಕ್ಕಿಳಿಸಿದೆ. ಇದು ಬಿಜೆಪಿಯ ಹರಕೆಯ ಕುರಿ ಮತ್ತು ವರುಣಾದ ಮನೆ ಮಗನ ನಡುವಿನ ಚುನಾವಣೆ. ನನ್ನ ಜನ ಹಣಕ್ಕೆ ಮರುಳಾಗಿ ತಮ್ಮವರನ್ನು ಕೈಬಿಡುವವರಲ್ಲ ಎಂದು ಹೇಳಿದ್ದರು.
ಅಲ್ಲದೆ, ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದವ, ಇಲ್ಲಿನ ಮಣ್ಣಿನ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ. ಈ ಹಿಂದೆ ವರುಣಾವನ್ನು ಪ್ರತಿನಿಧಿಸಿದಾಗೆಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ದುಡಿದಿದ್ದೇನೆ. ನನ್ನ ಸಾಧನೆಗಳು ಇಲ್ಲಿನ ಜನರ ಬದುಕಿನಲ್ಲಿದೆ. ನನ್ನ ಗೆಲುವಿಗೆ ಇದಕ್ಕಿಂತ ಹೆಚ್ಚೇನು ಬೇಕು? ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಪ್ರತಾಪಸಿಂಹ ತಿರುಗೇಟು ನೀಡಿದ್ದಾರೆ.
ಸಿದ್ರಾಮಣ್ಣ, ಇಟಲಿಯಲ್ಲಿ ಹುಟ್ಟಿದ ಸೋನಿಯಾಗಾಂಧಿ ಬಳ್ಳಾರಿಯಲ್ಲಿ ಚುನಾವಣೆಗೆ ನಿಲ್ಲಬಹುದು, ಅಲಹಾಬಾದ್ನಲ್ಲಿ ಜನಿಸಿದ ಇಂದಿರಾ ಗಾಂಧಿ ಚಿಕ್ಕಮಗಳೂರಿಗೆ ಬರಬಹುದು, ವಿದೇಶಿ ಅಮ್ಮನಿಗೆ ದಿಲ್ಲಿಯಲ್ಲಿ ಹುಟ್ಟಿದ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ಹೋಗಬಹುದು, ಸೋಮಣ್ಣ ವರುಣಾಕ್ಕೆ ಬರಬಾರದಾ? ಅದಿರಲಿ, ಬದಾಮಿಯಲ್ಲೂ ನೀವು ಹುಟ್ಟಿ ಗೋಲಿ ಆಡಿದ್ದಿರಾ? https://t.co/e7DP2HFTNR
— Pratap Simha (@mepratap) April 18, 2023
Pratap Simha slams siddaramaiah, says if Sonia Gandhi from Italy could contest in Ballari, why cant Somanna from Varuna
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm