ಬ್ರೇಕಿಂಗ್ ನ್ಯೂಸ್
01-05-23 03:14 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 1 : ಅಸೆಂಬ್ಲಿ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿ ಬಿಜೆಪಿ, ಕಾಂಗ್ರೆಸ್ ರೀತಿಯಲ್ಲೇ ಜನರನ್ನು ಓಲೈಸಲು ಉಚಿತಗಳ ಮೊರೆ ಹೋಗಿದೆ. ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ 5 ಕೆಜಿ ಸಿರಿಧಾನ್ಯ ವಿತರಣೆ ಮಾಡುವುದಾಗಿ ಹೇಳಿದೆ. ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನೂ ನೀಡಿದೆ.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದರು.
.jpg)
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಣಾಳಿಕೆ ಸಲಹಾ ಸಮಿತಿ ಸಂಚಾಲಕ ಮತ್ತು ಸಚಿವ ಡಾ.ಕೆ.ಸುಧಾಕರ್ ಅವರು, ಪ್ರಣಾಳಿಕೆ ಸಿದ್ಧಪಡಿಸಲು 38 ವಿವಿಧ ವಿಭಾಗ, 178 ಕ್ಷೇತ್ರಗಳಲ್ಲಿ ಸಲಹೆ ಪಡೆಯಲಾಗಿದೆ. ಮಿಸ್ ಕಾಲ್ ಮೂಲಕ 29,306 ಸಲಹೆ ಸೇರಿ ಒಟ್ಟು 6 ಲಕ್ಷ ಸಲಹೆ ಬಂದಿವೆ. ಎಲ್ಲವನ್ನೂ ಪರಿಶೀಲನೆ ನಡೆಸಿದ್ದೇವೆ. 17 ರಾಷ್ಟ್ರೀಯ ನಾಯಕರು ಪ್ರಣಾಳಿಕೆ ಸಿದ್ಧಪಡಿಸಲು ಸಹಕರಿಸಿದ್ದಾರೆ. ತಜ್ಞರ ಕಡೆಯಿಂದ 900 ಸಲಹೆ ಬಂದಿವೆ, 50 ಕ್ಷೇತ್ರ ತಜ್ಞರ ಸಲಹೆ ಬಂದಿದೆ ಎಂದು ಹೇಳಿದರು.
ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ ಉಚಿತವಾಗಿ 3 ಗ್ಯಾಸ್ ಸಿಲಿಂಡರ್, ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್ ವಿತರಣೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಟಲ್ ಆಹಾರ ಕೇಂದ್ರ ಸ್ಥಾಪನೆ, ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಆಹಾರ ವಸ್ತುಗಳ ಮಾರಾಟ, ಪೋಷಣೆ ಯೋಜನೆ’ಯಡಿ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ಹಾಲು ವಿತರಣೆ, ಪ್ರತಿ ತಿಂಗಳು 5 ಕೆಜಿ ಅಕ್ಕಿ, ಸಿರಿಧಾನ್ಯ ಒಳಗೊಂಡ ಪಡಿತರ ಕಿಟ್ ವಿತರಿಸುವ ಘೋಷಣೆ ಮಾಡಿದೆ. ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ, ‘ಸರ್ವರಿಗೂ ಸೂರು ಯೋಜನೆ’ಯಡಿ 10 ಲಕ್ಷ ನಿವೇಶನ ಹಂಚಿಕೆ, 1 ಸಾವಿರ ಕೃಷಿ ಉತ್ಪಾದನಾ ಕೇಂದ್ರ ಸ್ಥಾಪನೆ ಮತ್ತು ಮೀನುಗಾರಿಕೆ ಉತ್ಪಾದನೆಗೆ ಆದ್ಯತೆ, ಐದು ಲಕ್ಷದ ಆರೋಗ್ಯ ವಿಮೆ ಮೊತ್ತ 10 ಲಕ್ಷಕ್ಕೆ ಹೆಚ್ಚಳ, ತಾಲ್ಲೂಕುಗಳಲ್ಲಿ ಕಿಮೋಥೆರಪಿ, ಡಯಾಲಿಸಿಸ್ ಸೌಲಭ್ಯ ನೀಡುವ ಭರವಸೆಯನ್ನೂ ನೀಡಿದೆ.
JP Nadda, the national president of Bharatiya Janata Party, on Monday released the party's manifesto for the upcoming Karnataka state elections, promising freebies including milk and cooking gas cylinders and implementation of Uniform Civil Code (UCC) in the southern state if the saffron party is back in power.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm