ಬ್ರೇಕಿಂಗ್ ನ್ಯೂಸ್
02-05-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಮೇ 2 : ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬೆನ್ನಿಗೆ ಚೂರಿ ಹಾಕಿದ್ದಾರೆಂದು ಯಡಿಯೂರಪ್ಪ ಹೇಳುತ್ತಿದ್ದಾರೆ. ಆದರೆ ಇದೇ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ 2013 ರಲ್ಲಿ ದೆಹಲಿಯ ಹೋಟೆಲ್ ಒಂದರಲ್ಲಿ ಒಬ್ಬರನ್ನು ಭೇಟಿಯಾಗಿದ್ದರು. ಅವರು ಯಾರು ಎಂಬುದನ್ನು ನೆನಪಿಸಿಕೊಳ್ಳಲಿ. ಆ ಬಗ್ಗೆ ಸದ್ಯದಲ್ಲೇ ಮಾಹಿತಿ ಬಿಡುಗಡೆ ಮಾಡುತ್ತೇವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್ ನಲ್ಲಿ ಅಂದು ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ವ್ಯಕ್ತಿಯೊಬ್ಬರನ್ನು ಭೇಟಿಯಾಗಿದ್ದರು. ಆ ಭೇಟಿಯ ಹಿನ್ನೆಲೆ ಏನು? ಭೇಟಿಯಾದ ವ್ಯಕ್ತಿ ಯಾರು ಎಂಬುದನ್ನು ಮೂರ್ನಾಲ್ಕು ದಿನಗಳಲ್ಲಿ ಬಹಿರಂಗಪಡಿಸುತ್ತೇನೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.


ಬಿಜೆಪಿಯಿಂದ ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ತಮ್ಮ ಗುರಿ ಮಾಡುವುದರಲ್ಲಿ ಅರ್ಥವಿಲ್ಲ. ವೀರಶೈವ- ಲಿಂಗಾಯತ ಸಮುದಾಯದ ಬೇರೆ ಮುಖಂಡರನ್ನು ತರುವುದಕ್ಕಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಸಂತೋಷ್ ಸಂಚು ರೂಪಿಸಿದ್ದರು. ಇವರೇ ಸೇರಿ ಶೆಟ್ಟರ್, ಸವದಿಯನ್ನು ಬಿಜೆಪಿ ತೊರೆಯುವಂತೆ ಮಾಡಿದ್ದಾರೆ ಎಂದು ಎಂಬಿ ಪಾಟೀಲ್ ಆರೋಪಿಸಿದ್ದಾರೆ.

ಶೆಟ್ಟರ್ ಮತ್ತು ಸವದಿ ಕಾಂಗ್ರೆಸ್ ಸೇರಿ ಬಿಜೆಪಿ ಬೆನ್ನಿಗೆ ಚೂರಿ ಹಾಕಿದ್ದೀರಿ ಎಂದು ಆರೋಪಿಸಿರುವ ನೀವು (ಯಡಿಯೂರಪ್ಪ) 2013ರಲ್ಲಿ ಕೆಜೆಪಿ ಆರಂಭಿಸಿದಾಗ ಬಿಜೆಪಿಯ ಎದೆಗೆ ಚೂರಿ ಹಾಕಿಲ್ಲವೇ ಎಂದು ಪ್ರಶ್ನಿಸಿದರು. ಇದು ವೀರಶೈವ -ಲಿಂಗಾಯತ ಸಮುದಾಯಕ್ಕೆ ತವರು ಮನೆಯಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 130-140 ಸ್ಥಾನಗಳನ್ನು ಗೆಲ್ಲಲಿದೆ ಎಂದವರು ಹೇಳಿದ್ದಾರೆ.
1990ರಲ್ಲಿ ಸಮುದಾಯದ ನಾಯಕ ವೀರೇಂದ್ರ ಪಾಟೀಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಕಾಂಗ್ರೆಸ್ ನಿರ್ಧಾರವನ್ನು ಪಾಟೀಲ್ ಸಮರ್ಥಿಸಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣಕ್ಕೆ ಬದಲಿಸಲಾಗಿತ್ತು. ಬೇರೇನು ದುರುದ್ದೇಶ ಇರಲಿಲ್ಲ ಎಂದು ಹೇಳಿದರು. ಆದರೆ, ಯಡಿಯೂರಪ್ಪನವರು ಚೆನ್ನಾಗಿದ್ದರೂ ಬಿಜೆಪಿ ಅವರನ್ನು ಏಕೆ ಅಧಿಕಾರದಿಂದ ಕೆಳಗಿಳಿಸಿತು ಎಂದು ಪ್ರಶ್ನಿಸಿದರು.
ಶೆಟ್ಟರ್ ಮತ್ತು ಸವದಿ ಅವರನ್ನು ಸೋಲಿಸಲು ಯಡಿಯೂರಪ್ಪ ಅವರನ್ನು ನಿಯೋಜಿಸಲಾಗಿದೆ. ಯಡಿಯೂರಪ್ಪ ಅವರು ತಮ್ಮ ಇಬ್ಬರು ಮಕ್ಕಳ ರಾಜಕೀಯ ಭವಿಷ್ಯದ ಬಗ್ಗೆ ಹೆದರಿ ಈ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ದೂರಿದ್ದಾರೆ.
M B Patil slams BJP, says Yediyurappa and Shobha Karandlaje had met someone in the hotel in 2013 in Delhi, asks who is it.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm