ಬ್ರೇಕಿಂಗ್ ನ್ಯೂಸ್
02-05-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಮೇ 2 : ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬೆನ್ನಿಗೆ ಚೂರಿ ಹಾಕಿದ್ದಾರೆಂದು ಯಡಿಯೂರಪ್ಪ ಹೇಳುತ್ತಿದ್ದಾರೆ. ಆದರೆ ಇದೇ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ 2013 ರಲ್ಲಿ ದೆಹಲಿಯ ಹೋಟೆಲ್ ಒಂದರಲ್ಲಿ ಒಬ್ಬರನ್ನು ಭೇಟಿಯಾಗಿದ್ದರು. ಅವರು ಯಾರು ಎಂಬುದನ್ನು ನೆನಪಿಸಿಕೊಳ್ಳಲಿ. ಆ ಬಗ್ಗೆ ಸದ್ಯದಲ್ಲೇ ಮಾಹಿತಿ ಬಿಡುಗಡೆ ಮಾಡುತ್ತೇವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್ ನಲ್ಲಿ ಅಂದು ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ವ್ಯಕ್ತಿಯೊಬ್ಬರನ್ನು ಭೇಟಿಯಾಗಿದ್ದರು. ಆ ಭೇಟಿಯ ಹಿನ್ನೆಲೆ ಏನು? ಭೇಟಿಯಾದ ವ್ಯಕ್ತಿ ಯಾರು ಎಂಬುದನ್ನು ಮೂರ್ನಾಲ್ಕು ದಿನಗಳಲ್ಲಿ ಬಹಿರಂಗಪಡಿಸುತ್ತೇನೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.


ಬಿಜೆಪಿಯಿಂದ ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ತಮ್ಮ ಗುರಿ ಮಾಡುವುದರಲ್ಲಿ ಅರ್ಥವಿಲ್ಲ. ವೀರಶೈವ- ಲಿಂಗಾಯತ ಸಮುದಾಯದ ಬೇರೆ ಮುಖಂಡರನ್ನು ತರುವುದಕ್ಕಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಸಂತೋಷ್ ಸಂಚು ರೂಪಿಸಿದ್ದರು. ಇವರೇ ಸೇರಿ ಶೆಟ್ಟರ್, ಸವದಿಯನ್ನು ಬಿಜೆಪಿ ತೊರೆಯುವಂತೆ ಮಾಡಿದ್ದಾರೆ ಎಂದು ಎಂಬಿ ಪಾಟೀಲ್ ಆರೋಪಿಸಿದ್ದಾರೆ.

ಶೆಟ್ಟರ್ ಮತ್ತು ಸವದಿ ಕಾಂಗ್ರೆಸ್ ಸೇರಿ ಬಿಜೆಪಿ ಬೆನ್ನಿಗೆ ಚೂರಿ ಹಾಕಿದ್ದೀರಿ ಎಂದು ಆರೋಪಿಸಿರುವ ನೀವು (ಯಡಿಯೂರಪ್ಪ) 2013ರಲ್ಲಿ ಕೆಜೆಪಿ ಆರಂಭಿಸಿದಾಗ ಬಿಜೆಪಿಯ ಎದೆಗೆ ಚೂರಿ ಹಾಕಿಲ್ಲವೇ ಎಂದು ಪ್ರಶ್ನಿಸಿದರು. ಇದು ವೀರಶೈವ -ಲಿಂಗಾಯತ ಸಮುದಾಯಕ್ಕೆ ತವರು ಮನೆಯಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 130-140 ಸ್ಥಾನಗಳನ್ನು ಗೆಲ್ಲಲಿದೆ ಎಂದವರು ಹೇಳಿದ್ದಾರೆ.
1990ರಲ್ಲಿ ಸಮುದಾಯದ ನಾಯಕ ವೀರೇಂದ್ರ ಪಾಟೀಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಕಾಂಗ್ರೆಸ್ ನಿರ್ಧಾರವನ್ನು ಪಾಟೀಲ್ ಸಮರ್ಥಿಸಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣಕ್ಕೆ ಬದಲಿಸಲಾಗಿತ್ತು. ಬೇರೇನು ದುರುದ್ದೇಶ ಇರಲಿಲ್ಲ ಎಂದು ಹೇಳಿದರು. ಆದರೆ, ಯಡಿಯೂರಪ್ಪನವರು ಚೆನ್ನಾಗಿದ್ದರೂ ಬಿಜೆಪಿ ಅವರನ್ನು ಏಕೆ ಅಧಿಕಾರದಿಂದ ಕೆಳಗಿಳಿಸಿತು ಎಂದು ಪ್ರಶ್ನಿಸಿದರು.
ಶೆಟ್ಟರ್ ಮತ್ತು ಸವದಿ ಅವರನ್ನು ಸೋಲಿಸಲು ಯಡಿಯೂರಪ್ಪ ಅವರನ್ನು ನಿಯೋಜಿಸಲಾಗಿದೆ. ಯಡಿಯೂರಪ್ಪ ಅವರು ತಮ್ಮ ಇಬ್ಬರು ಮಕ್ಕಳ ರಾಜಕೀಯ ಭವಿಷ್ಯದ ಬಗ್ಗೆ ಹೆದರಿ ಈ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ದೂರಿದ್ದಾರೆ.
M B Patil slams BJP, says Yediyurappa and Shobha Karandlaje had met someone in the hotel in 2013 in Delhi, asks who is it.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm