ಬ್ರೇಕಿಂಗ್ ನ್ಯೂಸ್
02-05-23 02:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 2: ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುತ್ತೇವೆ ಎಂದು ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್ ವಿರುದ್ದ ಬಿಜೆಪಿ ನಾಯಕರು ಕಿಡಿಕಾರಿದ್ದು, ನಿಮಗೆ ತಾಕತ್ ಇದ್ರೆ ಬಜರಂಗದಳ ಸಂಘಟನೆ ನಿಷೇಧಿಸಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ.
ಆರ್ಎಸ್ಎಸ್ನ ಒಂದು ಭಾಗ ಬಿಜೆಪಿ, ಯುವಕರ ಸಂಘಟನೆ ಬಜರಂಗದಳ, ದೇಶಸೇವೆಗೆ ಮುಡಿಪಾಗಿಟ್ಟ ಒಂದು ಸಂಘಟನೆ. ಇವತ್ತು ಬಜರಂಗದಳ ಮತ್ತು ಪಿಎಫ್ಐ ಎರಡನ್ನೂ ಒಂದೇ ತಕ್ಕಡಿಯಲ್ಲಿಟ್ಟು ತೋರಿಸಿ ಕಾಂಗ್ರೆಸ್ ದೇಶದ್ರೋಹದ ಕೆಲಸ ಮಾಡಿದೆ. ಪಿಎಫ್ಐ ಜತೆ ದೇಶಪ್ರೇಮಿ ಬಜರಂಗದಳ ಹೋಲಿಸಿರೋದು ಸರಿಯಲ್ಲ. ನಿಮಗೆ ತಾಕತ್ ಇದ್ದರೆ ಬಜರಂಗದಳ ನಿಷೇಧ ಮಾಡಿ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿಯೂ ಆಗಿರುವ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.


ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಾನು ಬಜರಂಗದಳದ ಕಾರ್ಯಕರ್ತೆ, ತಾಕತ್ ಇದ್ದರೆ ನನ್ನನ್ನೂ ಅರೆಸ್ಟ್ ಮಾಡಿ. ವಿನಾಶಕಾಲೇ ವಿಪರೀತ ಬುದ್ಧಿ ಅನ್ನುವಂತೆ ಕಾಂಗ್ರೆಸ್ ನಡೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ನ ವಿನಾಶ ಕಾಲ ಸಮೀಪಿಸಿದೆ. ಪಿಎಫ್ಐ ನಿಷೇಧ ಈಗಾಗಲೇ ಕೇಂದ್ರ ಸರ್ಕಾರ ಮಾಡಿದೆ. ಇವತ್ತು ಕಾಂಗ್ರೆಸ್ನವರು ಪಿಎಫ್ಐ ನಿಷೇಧ ಮಾಡುತ್ತೇವೆ, ಜತೆಗೆ ಬಜರಂಗದಳ ನಿಷೇಧ ಮಾಡುತ್ತೇವೆ ಎಂದಿದ್ದಾರೆ. ಕಾಂಗ್ರೆಸ್ನವರ ಟಾರ್ಗೆಟ್ ಇರೋದು ಪಿಎಫ್ಐ ಅಲ್ಲ, ಅವರ ಟಾರ್ಗೆಟ್ ಬಜರಂಗದಳ. ನೀವು ಪಿಎಫ್ಐ ಅನ್ನು ಬಜರಂಗದಳದ ಜೊತೆ ಹೋಲಿಕೆ ಮಾಡ್ತೀರಾ? ಬಜರಂಗದಳ ಬ್ಯಾನ್ ಮಾಡುವ ನಿಮ್ಮ ಶಕ್ತಿ ತೋರಿಸಿ ಆಗ ನಾವೂ ದೇಶಾದ್ಯಂತ ನಮ್ಮ ಶಕ್ತಿ ತೋರಿಸುತ್ತೇವೆ ಎಂದಿದ್ದಾರೆ.
Shobha Karandlaje slams Congress manifesto says ban Bajrang Dal if you have guts let me see she Challanged. According to the party, “law and Constitution is sacrosanct and can not be violated by individuals and organisations like Bajrang Dal, PFI or others promoting enmity or hatred, whether among majority or minority communities."
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm