ಬ್ರೇಕಿಂಗ್ ನ್ಯೂಸ್
02-05-23 04:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 2: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಭಾರೀ ಅಪಘಾತದಿಂದ ಪಾರಾಗಿದ್ದಾರೆ. ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್ಗೆ ರಣಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಪ್ಟರ್ನ ಮುಂಭಾಗದ ಗಾಜು ಪುಡಿ ಪುಡಿಯಾಗಿದೆ. ನಿಯಂತ್ರಣ ತಪ್ಪುತ್ತಿದ್ದಂತೆ ಎಚ್ಎಎಲ್ ಏರ್ಪೋರ್ಟ್ನಲ್ಲಿ ಹೆಲಿಕಾಪ್ಟರ್ ಅನ್ನು ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ಡಿಕೆ ಶಿವಕುಮಾರ್ ಜಕ್ಕೂರಿನಿಂದ ಮುಳಬಾಗಿಲಿಗೆ ಹೆಲಿಕಾಪ್ಟರ್ ಮೂಲಕ ಪ್ರಚಾರಕ್ಕೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಹೊಸಕೋಟೆ ಬಳಿ ರಣಹದ್ದು ಹೆಲಿಕಾಪ್ಟರ್ಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಹೆಲಿಕಾಪ್ಟರ್ ಗಾಜು ಪುಡಿಯಾಗಿದೆ. ಇದರಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣ ಆಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

ಕೂಡಲೇ ಹೆಲಿಕಾಪ್ಟರ್ ಅನ್ನು ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ತಂದು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಸುರಕ್ಷಿತವಾಗಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಖಾಸಗಿ ಸುದ್ದಿ ವಾಹಿನಿಯ ವರದಿಗಾರ ಸಂದರ್ಶನ ನಡೆಸುವಾಗ ಈ ಅವಘಡ ಸಂಭವಿಸಿದೆ. ಕ್ಯಾಮೆರಾದಲ್ಲಿ ದೃಶ್ಯಗಳು ಸೆರೆಯಾಗಿವೆ. ರಣಹದ್ದು ಬಡಿದ ತಕ್ಷಣ ಹೆಲಿಕಾಪ್ಟರ್ ಗಾಜು ಪುಡಿಪುಡಿಯಾಗಿದ್ದು, ಒಂದು ಕ್ಷಣ ಡಿಕೆ ಶಿವಕುಮಾರ್ ಹಾಗೂ ವರದಿಗಾರನ ಮುಖದಲ್ಲಿ ಆತಂಕ ಆವರಿಸಿತ್ತು. ಖಾಸಗಿ ವಾಹಿನಿಯ ಛಾಯಾಗ್ರಾಹಕನಿಗೆ ಗಾಜಿನ ಚೂರು ಚುಚ್ಚಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.
ಸುರಕ್ಷಿತವಾಗಿಯೇ ವಾಪಸಾಗಿದ್ದೇವೆ ಎಂದ ಡಿಕೆಶಿ!
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ದೊಡ್ಡ ಹದ್ದು ಒಂದು ಬಂದು ಹೆಲಿಕಾಪ್ಟರ್ ಗ್ಲಾಸ್ಗೆ ಹೊಡೆಯಿತು. ಹೊಸಕೋಟೆ ಹತ್ತಿರ ತೆರಳುತ್ತಿರುವಾಗ ಅವಘಡ ಸಂಭವಿಸಿದೆ. ಘಟನೆಯಿಂದಾಗಿ ಹೆಲಿಕಾಪ್ಟರ್ ಗ್ಲಾಸ್ ಬ್ಲ್ಯಾಸ್ಟ್ ಆಗಿದೆ. ಪೈಲಟ್ ನಿಧಾನವಾಗಿಯೇ ಕೆಳಗೆ ಇಳಿಸಿದ್ದಾರೆ. ಸದ್ಯಕ್ಕೆ ಎಚ್ಎಎಲ್ಗೆ ವಾಪಸ್ ಆಗಿದ್ದೇನೆ. ಎಲ್ಲರೂ ಕೂಡ ಸುರಕ್ಷಿತವಾಗಿಯೇ ವಾಪಸಾಗಿದ್ದೇವೆ ಎಂದು ಹೇಳಿದ್ದಾರೆ.
Karnataka Pradesh Congress Committee (KPCC) president DK Shivakumar suffered a bird hit to his helicopter on the way to Mulabagilu for an election rally on Tuesday. An eagle collided with the leader's chopper 's near the Jakkur airport, the Karnataka Congress said.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm