ಬ್ರೇಕಿಂಗ್ ನ್ಯೂಸ್
12-05-23 04:56 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 12: ಅತಂತ್ರ ಫಲಿತಾಂಶ ಬರಲಿದೆ ಎಂಬ ಸಮೀಕ್ಷೆಗಳ ವರದಿ ಹಿನ್ನೆಲೆಯಲ್ಲಿ ಕಾಂಗ್ರೆಸ್, ಬಿಜೆಪಿ ಎರಡೂ ಅಧಿಕಾರಕ್ಕೇರಲು ತೆರೆಮರೆಯ ಪ್ರಯತ್ನ ನಡೆಸಿದೆ. ಇದೇ ವೇಳೆ, ಕಾಂಗ್ರೆಸ್ ತನ್ನ ಶಾಸಕರನ್ನು ಹಿಡಿದಿಡಲು ಪ್ಲಾನ್ ಹಾಕ್ಕೊಂಡಿದೆ. ಆಪರೇಶನ್ ಕಮಲದ ಭೀತಿಯಿಂದಾಗಿ ಕಾಂಗ್ರೆಸ್ ನಾಯಕರು, ತಮ್ಮ ಅಭ್ಯರ್ಥಿಗಳಿಗೆ ಮುನ್ನಡೆ ಪಡೆದು ಗೆಲುವು ಖಾತ್ರಿಯಾಗುತ್ತಲೇ ನೇರವಾಗಿ ಬೆಂಗಳೂರಿಗೆ ಬರುವಂತೆ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ರಾತ್ರಿ ರಾಜ್ಯದ ಎಲ್ಲ ಅಭ್ಯರ್ಥಿಗಳ ಜೊತೆಗೂ ವರ್ಚುವಲ್ ಮೀಟಿಂಗ್ ನಡೆಸಿದ್ದು, ಲೀಡ್ ಪಡೆಯುತ್ತಲೇ ನೇರವಾಗಿ ಬೆಂಗಳೂರಿಗೆ ಬಂದು ಉಳಿದುಕೊಳ್ಳುವಂತೆ ಸಲಹೆ ಮಾಡಿದ್ದಾರೆ.
ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕೆಲವು ಕಾಂಗ್ರೆಸ್ ಬಹುಮತ ಸಾಧಿಸುತ್ತೆ ಎಂದಿದ್ದರೆ, ಹೆಚ್ಚಿನವುಗಳಲ್ಲಿ ಅತಂತ್ರ ಫಲಿತಾಂಶ ತೋರಿಸಿದೆ. ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಮೂಡಿಬರಲಿದೆ ಎಂದೂ ಹೇಳಿದೆ. ಹೀಗಾಗಿ ಕಾಂಗ್ರೆಸ್ ಕೆಲವು ಸ್ಥಾನಗಳಿಂದ ಮ್ಯಾಜಿಕ್ ನಂಬರಿನಿಂದ ಮಿಸ್ ಹೊಡೆಯುತ್ತಾ ಅನ್ನುವ ಜಿಜ್ಞಾಸೆ ಉಂಟಾಗಿದೆ. ಇಂತಹ ಅನುಮಾನ ಸ್ವತಃ ರಾಜ್ಯ ಕಾಂಗ್ರೆಸ್ ನಾಯಕರಲ್ಲೂ ಇದ್ದು, ಹೊರಗೆ ಬಿಟ್ಟು ಕೊಡದಿದ್ದರೂ ತಮ್ಮ ಶಾಸಕರು ವಿರೋಧಿಗಳಿಗೆ ದಾಳವಾಗದಿರಲಿ ಎಂದು ಆಪರೇಶನ್ ಆಗದಂತೆ ಹಿಡಿದಿಡಲು ಪ್ರಯತ್ನಿಸಿದ್ದಾರೆ.
ಇದೇ ವೇಳೆ, ಬಿಜೆಪಿ ರೀತಿಯಲ್ಲೇ ರಿವರ್ಸ್ ಆಪರೇಶನ್ ಮಾಡೋದಕ್ಕೂ ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. 2-3 ಸೀಟು ಕಡಿಮೆಯಾದಲ್ಲಿ ಆಪರೇಶನ್ ಮೂಲಕ ಶಾಸಕರನ್ನು ಖರೀದಿಸುವುದಕ್ಕೂ ತಯಾರಿ ನಡೆಸಿದೆ. ಎರಡು ಪಕ್ಷಗಳೂ ತಮಗೇ ಬಹುಮತ ಎಂದು ಹೇಳಿಕೊಂಡರೂ, ಒಳಗೊಳಗೆ ಅತಂತ್ರದ ಭೀತಿ ಎದುರಿಸುತ್ತಿವೆ.
Before BJP starts operation, come to Bangalore when congress is about to get powers, leaders to MLAs. Revenue Minister and senior BJP leader R Ashoka said that the BJP will start an ‘operation’ with the high command’s guidance, if the party does not win a majority. Speaking to Kannada news channel News First, Ashoka exuded confidence that the BJP will form government, irrespective of whether they win a majority.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm