ಬ್ರೇಕಿಂಗ್ ನ್ಯೂಸ್
13-05-23 12:58 pm HK News Desk ಕರ್ನಾಟಕ
ದಾವಣಗೆರೆ, ಮೇ 13 : ಹೊನ್ನಾಳಿ ವಿಧಾನಸಭೆ ಕ್ಷೇತ್ರದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಸೋಲಿನ ಕಹಿ ಅನುಭವಿಸಿದ್ದಾರೆ. 2018ರ ಚುನಾವಣೆಯಲ್ಲಿ ರೇಣುಕಾಚಾರ್ಯ ಎದುರು ಸೋಲು ಕಂಡಿದ್ದ ಕಾಂಗ್ರೆಸ್ನ ಡಿಜಿ ಶಾಂತನಗೌಡ ಅವರು ಈ ಬಾರಿ ಸೇಡು ತೀರಿಸಿಕೊಂಡಿದ್ದಾರೆ.
ಅಂಚೆ ಮತ ಎಣಿಕೆ ಸಂದರ್ಭದಲ್ಲಿಯೇ ಹಿನ್ನಡೆ ಅನುಭವಿಸಿದ ರೇಣುಕಾಚಾರ್ಯ ಅವರು ಮತ್ತೆ ಚೇತರಿಸಿಕೊಳ್ಳುವುದು ಸಾಧ್ಯವಾಗಲಿಲ್ಲ. ಇವಿಎಂ ಮತಗಳ ಎಣಿಕೆಯಲ್ಲಿಯೂ ಶಾಂತನಗೌಡ ಅವರು ಗಮನಾರ್ಹ ಮುನ್ನಡೆ ಕಾಯ್ದುಕೊಂಡಿದ್ದರು. ಸುಮಾರು 14 ಸಾವಿರ ಮತಗಳ ಅಂತರದಿಂದ ಶಾಂತನಗೌಡ ಮುನ್ನಡೆ ಪಡೆದಿದ್ದಾರೆ.
ಇವಿಎಂ ಮತಗಳ ಆರಂಭಿಕ ಸುತ್ತಿನ ಎಣಿಕೆಯಲ್ಲಿ ಶಾಂತನ ಗೌಡ ಅವರು 5185 ಮತಗಳನ್ನು ಪಡೆದಿದ್ದರೆ, ರೇಣುಕಾಚಾರ್ಯ ಅವರಿಗೆ 3713 ಮತಗಳು ಬಂದಿದ್ದವು.
2018ರ ಚುನಾವಣೆಯಲ್ಲಿ ರೇಣುಕಾಚಾರ್ಯ ಅವರು 80,624 ಮತಗಳನ್ನು ಪಡೆದು ಗೆಲುವು ಕಂಡಿದ್ದರು. ಆಗ ಶಾಂತನಗೌಡ ಅವರಿಗೆ 76,391 ಮತಗಳು ದೊರಕಿದ್ದವು. 4233 ಮತಗಳ ಅಂತರದಿಂದ ಶಾಂತನಗೌಡ ಸೋಲು ಅನುಭವಿಸಿದ್ದರು. 2013ರ ಚುನಾವಣೆಯಲ್ಲಿ ಶಾಂತನಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡಿದ್ದರು. ಆಗ ಹೊನ್ನಾಳಿ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಎಂಪಿ ರೇಣುಕಾಚಾರ್ಯ ಸ್ಪರ್ಧಿಸಿದ್ದರು. ಬಿಜೆಪಿಯಿಂದ ಹೊರಗೆ ಬಂದಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೆಜೆಪಿ ಸ್ಥಾಪಿಸಿದ್ದರು. ಅವರ ಜತೆ ಕೆಜೆಪಿ ಸೇರ್ಪಡೆಯಾಗಿದ್ದ ರೇಣುಕಾಚಾರ್ಯ, ಈ ಚುನಾವಣೆಯಲ್ಲಿ ಎರಡನೇ ಸ್ಥಾನ ಪಡೆದಿದ್ದರು.
Honnali Election Result 2023 LIVE, M P Renukacharya defeated against D G Shantana Gowda.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm