ಬ್ರೇಕಿಂಗ್ ನ್ಯೂಸ್
14-05-23 12:16 pm Bangalore Correspondent ಕರ್ನಾಟಕ
Photo credits : REPT PHOTO
ಬೆಂಗಳೂರು, ಮೇ 14: ಈ ಬಾರಿಯ ವಿಧಾನಸಭೆ ಚುನಾವಣೆ ಮತದಾನದ ಫಲಿತಾಂಶದಲ್ಲಿ ವರುಣಾ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಸೋತಿರುವ ವಿ ಸೋಮಣ್ಣ ಇಂದು ಭಾನುವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ತಮ್ಮ ಮನದ ಭಾವನೆಗಳನ್ನು ಹಂಚಿಕೊಂಡರು.
‘ಸೋತಾಗಿದೆ, ಏನು ಮಾತಾಡಲಿ? ಮಾತಾಡೋದು ಅಗತ್ಯ ಇಲ್ಲ. ಸೋತಿದ್ದೇನೆ ಅಷ್ಟೇ. ಹೈಕಮಾಂಡ್ ಸೂಚನೆ ಮೇರೆಗೆ ಹೋಗಿ ಸ್ಪರ್ಧಿಸಿದ್ದೆ. ಇದನ್ನು ಚಾಲೆಂಜ್ ಆಗಿ ತೆಗೆದುಕೊಂಡೆ, ಪ್ರತಿಯೊಂದಕ್ಕೂ ಕಾಲ ಅಂತ ಇರುತ್ತದೆ. ನನ್ನ ಕ್ಷೇತ್ರ ಚಿನ್ನದಂತೆ ಇತ್ತು. ಹೈಕಮಾಂಡ್ ಹೇಳಿತೆಂದು ಹೋದೆ. ಇದೀಗ ಜನ ತೀರ್ಮಾನ ಮಾಡಿದ್ದಾರೆ. ಚೆನ್ನಾಗಿ ದುಡಿಯುತ್ತಿದ್ದ ನಾನು ಈಗ ನಿರುದ್ಯೋಗಿಯಾಗಿದ್ದೇನೆ. ಕ್ಷೇತ್ರಕ್ಕಿಂತ ಪಕ್ಷ ದೊಡ್ಡದು, ಪಕ್ಷದ ಮಾತು ಕೇಳಿದೆ ಅಷ್ಟೇ ಎಂದಿದ್ದಾರೆ.
ಬಿಜೆಪಿ ಯಡಿಯೂರಪ್ಪನವರನ್ನು ಮೂಲೆಗುಂಪು ಮಾಡಿದೆಯೇ ಎಂದು ಕೇಳಿದ್ದಕ್ಕೆ ‘ಯಡಿಯೂರಪ್ಪ ಅವರನ್ನು ಪಕ್ಷ ಮೂಲೆಗುಂಪು ಮಾಡಿಲ್ಲ. ಅವರ ನಾಯಕತ್ವದಲ್ಲಿ ಚುನಾವಣೆ ಮಾಡಿದ್ದೀವಲ್ಲ? ಯಡಿಯೂರಪ್ಪ ಹೇಳಿದ್ದಾರಾ ಮೂಲೆಗುಂಪು ಮಾಡಿದ್ದಾರೆ ಅಂತ. ಸೋತ ತಕ್ಷಣ ಎಲ್ಲವೂ ಮುಗಿದು ಹೋಯ್ತಾ, ಪಕ್ಷಕ್ಕೆ ಹಿನ್ನಡೆ ಆಗಿದ್ದು ನಮಗೆಲ್ಲ ಎಚ್ಚರಿಕೆ ಗಂಟೆ, ಜನರ ತೀರ್ಮಾನ ಇದು, ಬದ್ಧರಾಗಬೇಕು. ದೇಶಕ್ಕೆ ಮೋದಿ ಪ್ರಶ್ನಾತೀತ ನಾಯಕರು, ಅವರ ಕೆಲಸಗಳು ಅವಿಸ್ಮರಣೀಯ. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳೇ ಅವರ ಗೆಲುವಿಗೆ ಕಾರಣ ಎಂದಿದ್ದಾರೆ.
ಮಗನಿಗೆ ಸೀಟು ಕೇಳಿದ್ದೆ: ಎಲ್ಲರಂತೆ ನನಗೂ ಆಸೆಯಿದೆ, ಮಗನಿಗೆ ಟಿಕೆಟ್ ಕೊಡಿ ಎಂದು ಕೇಳಿದ್ದೆ. ಕೊಡಲಿಲ್ಲ, ಎಲ್ಲ ವಿಧಿನಿಯಮದಂತೆ ಆಗಿದೆ ಎಂದು ಬೇಸರದಿಂದ ಹೇಳಿಕೊಂಡರು.
ಡಿಕೆಶಿಗೆ ಪರೋಕ್ಷ ಒಲವು: ಇನ್ನು ಇದೇ ವೇಳೆ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ, ಡಿಕೆಶಿ ನಡುವೆ ಪೈಪೋಟಿ ಕುರಿತು ‘ಅದು ಅವರ ಪಕ್ಷದ ನಿರ್ಧಾರ. ಡಿ.ಕೆ. ಶಿವಕುಮಾರ್ ನಮ್ಮ ತಾಲ್ಲೂಕಿನವರು. ಸಿದ್ದರಾಮಯ್ಯ ಹಿರಿಯ ನಾಯಕರು, ಜೊತೆಗೆ ಈಗಾಗಲೇ ಒಮ್ಮೆ ಮುಖ್ಯಮಂತ್ರಿ ಆಗಿದ್ದಾರೆ. ಈಗ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕಾಗಿರುವವರು. ಯಾರನ್ನು ಸಿಎಂ ಮಾಡಬೇಕೆಂದು ಅವರ ಪಕ್ಷ ನಿರ್ಧಾರ ಕೈಗೊಳ್ಳುತ್ತದೆ ಎನ್ನುವ ಮೂಲಕ ಪರೋಕ್ಷವಾಗಿ ಶಿವಕುಮಾರ್ ಸಿಎಂ ಆಗಬೇಕೆಂಬ ಒಲವು ತೋರಿಸಿದರು ಸೋಮಣ್ಣ.
V. Somanna, who lost both Varuna and Chamarajanagar constituencies in the assembly election results this time, shared his thoughts with reporters at his residence here on Sunday. 'Defeated, what can I say? There is no need to talk. That's all I've lost. I went and contested on the instructions of the high command. I took it as a challenge, everything has a time. My field was like gold.
24-04-26 02:35 pm
HK News Staffer
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm