ಬ್ರೇಕಿಂಗ್ ನ್ಯೂಸ್
16-05-23 07:48 pm HK News Desk ಕರ್ನಾಟಕ
ದಾವಣಗೆರೆ, ಮೇ 16 : ಕರ್ನಾಟಕದಲ್ಲಿ ಬಿಜೆಪಿ ಸೋಲಿಗೆ ವಿವಿಧ ಕಾರಣಗಳನ್ನು ಹೇಳಲಾಗುತ್ತಿದೆ. ಈ ನಡುವೆ ಸ್ವಪಕ್ಷದ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಪಕ್ಷದ ಸೋಲಿನ ಹಿಂದಿನ ಹಲವು ಕಾರಣಗಳನ್ನು ಬಿಚ್ಚಿಟ್ಟಿದ್ದಾರೆ. ಬಿಜೆಪಿ ಕೈಗೊಂಡ ತಪ್ಪು ನಿರ್ಧಾರ, ಗುಜರಾತ್ ಮಾದರಿ ಪ್ರಯೋಗ ಹಾಗೂ ಮೀಸಲಾತಿ ಪರಿಷ್ಕರಣೆಯಿಂದ ರಾಜ್ಯದಲ್ಲಿ ಬಿಜೆಪಿಗೆ ಸೋಲಾಯಿತು ಎಂದು ಹೊನ್ನಾಳಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿಗಳು ನಮ್ಮನ್ನು ಹಾಳುಮಾಡಿದವು. ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯ ನಾಯಕರನ್ನು ನಿರ್ಲಕ್ಷಿಸಿದರು. ಅನ್ನಭಾಗ್ಯ ಅಕ್ಕಿ 5 ಕೆಜಿಗೆ ಸೀಮಿತಗೊಳಿಸಿದ್ದರಿಂದ ಬಿಜೆಪಿ ಸೋತಿದೆ. ಬಿಜೆಪಿ ಬಡವರ ಹೊಟ್ಟೆ ಮೇಲೆ ಹೊಡೆಯಿತು ಎಂದು ಜನರು ಹೇಳುತ್ತಿದ್ದರು. ಆವಗಲೇ ನಮಗೆ ಸೋಲಾಗಿಯಿತು ಎಂದರು.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಹಿಂದೆ ಸರಿಸಿದ್ದೇ ದೊಡ್ಡ ತಪ್ಪು ಎಂದು ಹೇಳಿದ ರೇಣುಕಾಚಾರ್ಯ, ತನ್ನ ಸೋಲಿನ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಮಾಡಿದ ಕೆಲಸಕ್ಕೆ ಈ ಸೋಲು ತೀವ್ರ ಬೇಸರವನ್ನು ತಂದಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.
ಬಿಜೆಪಿಯಲ್ಲಿ ಜಾತಿ ಸಮೀಕರಣ ಆಗಲಿಲ್ಲ. ಕಾಂಗ್ರೆಸ್ ದಲಿತರಿಗೆ ಮಲ್ಲಿಕಾರ್ಜುನ ಖರ್ಗೆ, ಕುರುಬ ಸಮಾಜಕ್ಕೆ ಸಿದ್ದರಾಮಯ್ಯ, ವಾಲ್ಮೀಕಿ ಸಮಾಜಕ್ಕೆ ಸತೀಶ್ ಜಾರಕಿಹೊಳಿ ನಾಯಕರಿದ್ದಾರೆ. ಆದರೆ ಇಂತಹ ಪ್ಲಾನ್ ಬಿಜೆಪಿಯಲ್ಲಿ ಮಾಡಲೇ ಇಲ್ಲ ಎಂದರು.
Mulsim reservation, Gujarath model adoption is the result for BJP to loose Karnataka elections slams BJP former MLA M. P. Renukacharya. Annabaghya limited for only 5 kilos is another reason for the failure he added.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm