ಬ್ರೇಕಿಂಗ್ ನ್ಯೂಸ್
17-05-23 04:09 pm HK News Desk ಕರ್ನಾಟಕ
ಚಾಮರಾಜನಗರ, ಮೇ 17: ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಳಿಕ ಚಾಮರಾಜನಗರಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಆಗಮಿಸಿ ಕಾರ್ಯಕರ್ತರ ಕೃತಜ್ಞತಾ ಸಭೆ ನಡೆಸಿದರು.
ಭಾಷಣದ ವೇಳೆ ತಮ್ಮ ಸೋಲಿಗೆ ಪಕ್ಷದ ಕೆಲ ಮುಖಂಡರೇ ಕಾರಣ ಎಂದು ಆರೋಪಿಸಿದ ಸೋಮಣ್ಣ, ನನಗೆ ಮಾಡಿದ ಪಾಪದ ಕೆಲಸ ಬೇರೆ ಯಾರಿಗೂ ಮಾಡುವುದು ಬೇಡ, ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಚಪ್ಪಲಿಯಲ್ಲಿ ಹೊಡೀರಿ ಎಂದು ಕಿಡಿಕಾರಿದರು.
ಕೆಲ ಲೋಫರ್ ನನ್ ಮಕ್ಕಳು ಈ ಪಾಪದ ಕೆಲಸ ಮಾಡಿದ್ದಾರೆ. 7-8 ಮಂದಿಯಿಂದ ಈ ಸೋಲುಂಟಾಯಿತು, ನನ್ನ ಸಮಾಜದವರೇ ನನಗೆ ಕೈ ಕೊಟ್ಟರು. ಯಾರ್ಯಾರೋ ಬೋರ್ಡ್ ಅಧ್ಯಕ್ಷರು ಮಠಗಳಿಗೆ ದುಡ್ಡು ಕೊಟ್ಟು ಜನರ ದಿಕ್ಕು ತಪ್ಪಿಸಿದರು ಎಂದು ಬಿಜೆಪಿ ಮುಖಂಡರ ವಿರುದ್ಧ ಆರೋಪ ಮಾಡಿದರು.
ಈಗ ಅವರು ಒಳೇಟು ಕೊಟ್ಟರು, ಇವರು ಒಳೇಟು ಕೊಟ್ಟರು, ಕ್ರಮ ಕೈಗೊಳ್ಳಿ ಎನ್ನುತ್ತಿದ್ದೀರಿ, ಈ ಕೆಲಸವನ್ನು 6 ತಿಂಗಳ ಹಿಂದೆ ಮಾಡಬೇಕಿತ್ತು, ಆಗ ಮಾಡಲಿಲ್ಲ- ಈಗ ಮಾಡಿ ಎನ್ನುತ್ತಿದ್ದೀರಿ, ನಾನು ನಿಮ್ಮನ್ನು ನಂಬಿಕೊಂಡಿದ್ದೆ ತಪ್ಪಾಯಿತು. ಮಾದೇಶ್ವರನ ಅಣೆ, ನನ್ನ ಮಕ್ಕಳಾಣೆ ನಾನಾಗಿ ಇಲ್ಲಿಗೆ ಬರಲಿಲ್ಲ. ಹೈಕಮಾಂಡ್ ಹೇಳಿದ್ದರಿಂದ ಚಿನ್ನ ದಂತಹ ಗೋವಿಂದರಾಜ ನಗರ ಕ್ಷೇತ್ರ ಬಿಟ್ಟು ಇಲ್ಲಿಗೆ ಬಂದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.
ಮಾತು ಮುಂದುವರಿಸಿದ ಅವರು, ಪಕ್ಷ ತಾಯಿಗೆ ಸಮಾನ ಪಕ್ಷ ದೊಳಗಿದ್ದು ದ್ರೋಹ ಬಗೆಯುವುದು ಎಷ್ಟರಮಟ್ಟಿಗೆ ಸರಿ ? ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್ ಅವರಿಗೆ ನೈತಿಕತೆ ಇದ್ದರೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರನ್ನು ಒದ್ದು ಓಡಿಸಿ ಎಂದು ಆಗ್ರಹಿಸಿದರು.
ಕೆಲವರು ಮನಸ್ಸು ಬಿಚ್ಚಿ ಮುಕ್ತ ಮನಸ್ಸಿನಿಂದ ಕೆಲಸ ಮಾಡಲಿಲ್ಲ. ದೊಡ್ಡ ಸ್ಥಾನಕ್ಕೆ ಸೋಮಣ್ಣ ಹೋಗುತ್ತಾರೆ ಎಂದಿದ್ದೆ ಮುಳುವಾಯಿತು ಎಂದು ಪಕ್ಷದ ಕೆಲ ಮುಖಂಡರ ವಿರುದ್ಧ ಬೇಸರ ವ್ಯಕ್ತಪಡಿಸಿದರು.
Somanna says some inside BJP are responsible for me to loose in Varuna, should thrash them with slippers, somanna goes out of control in Chamrajnagar.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm