ಬ್ರೇಕಿಂಗ್ ನ್ಯೂಸ್
25-05-23 05:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25: ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಬಿಜೆಪಿ ನಾಯಕರನ್ನು ಗುರಿಯಾಗಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ದೂರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಶ್ವಥ್ ನಾರಾಯಣ್, ಹರೀಶ್ ಪೂಂಜ ಮೇಲೆ ಹಿಂದಿನ ವಿಚಾರಕ್ಕೆ ಈಗ ಎಫ್ಐಆರ್ ಹಾಕಿದ್ದಾರೆ. ಅವರ ಬಾಯಿ ಮುಚ್ಚಿಸುವ ಕೆಲಸ ಮಾಡಲಾಗುತ್ತಾ? ಕಾರ್ಯಕರ್ತರನ್ನು, ಮುಖಂಡರನ್ನು ಧಮಕಿ ಹಾಕಿ ಬಾಯಿ ಮುಚ್ಚಿಸ್ತೀರಾ? ಇಷ್ಟಕ್ಕೇ ಹೆದರಿಸಲು ಸಾಧ್ಯವಾ? ಕೆಲವು ರೌಡಿಗಳು ಪೊಲೀಸರಿಗೆ ಧಮಕಿ ಹಾಕುವುದನ್ನು ನೋಡಿದ್ದೇವೆ. ಅನುಭವಿ ಅಧಿಕಾರಿಗಳಿಗೆ ಧಮಕಿ ಹಾಕುವ ಕೆಲಸ ಮಾಡಲಾಗುತ್ತಿದೆ. ಈ ಮೂಲಕ ಅವರ ಬಾಯಿ ಮುಚ್ಚಿಸೋ ಕೆಲಸ ಮಾಡಲಾಗ್ತಿದೆ ಎಂದು ಆರೋಪಿಸಿದ್ದಾರೆ.
ಪೊಲೀಸ್ ಇಲಾಖೆಯ ಕೇಸರೀಕರಣ ಅಂತ ಹೇಳುತ್ತಿದ್ದೀರಿ. ಅವರು ಎಂದಾದ್ರೂ ಕೇಸರಿ ಡ್ರೆಸ್ ಹಾಕೋದನ್ನು ನೋಡಿದ್ರಾ? ಪೊಲೀಸರ ಮೇಲೆ ಹಗೆತನ ತೋರುವುದು ಸರಿಯಲ್ಲ. ನೀವು ಜನರನ್ನು ವಂಚಿಸಿ, ತೇಜೋವಧೆ ಮಾಡಿ ಮತ ಪಡೆಯುವ ಕೆಲಸ ಮಾಡಿದ್ದೀರಿ ಎಂದು ಪರೋಕ್ಷವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದರು.
ನೀರಾವರಿ ಇಲಾಖೆಯಲ್ಲಿ 40% ಕಮಿಷನ್ ಪಡೆದಿದ್ದಾರೆ. ಅಂಥವರನ್ನೆಲ್ಲಾ ಜೈಲಿಗೆ ಕಳಿಸ್ತೀನಿ ಅಂತ ಎಂಬಿ ಪಾಟೀಲ್ ಹೇಳಿದ್ದಾರೆ. ಅವರೇನು ನೀರಾವರಿ ಮಂತ್ರಿನಾ? ಅದರ ಅರ್ಥ ಅವರಿಗೆ ನೀರಾವರಿ ಮಂತ್ರಿಗಿರಿ ಬೇಕು ಅಂತ ಅಲ್ಲವೇ? ಮತ್ತೊಬ್ಬ ಸಚಿವರು ಆರ್ಎಸ್ಎಸ್, ಜರಂಗದಳ ಬ್ಯಾನ್ ಮಾಡ್ತೀನಿ ಅಂತಾರೆ. ಅದರ ಅರ್ಥ ಹೋಮ್ ಮಿನಿಸ್ಟರ್ ಬೇಕು ಅಂತ ಅಷ್ಟೆ. ಖಾತೆಗಳ ಹಂಚಿಕೆ ಆಗಿಲ್ಲ, ಆದ್ರೆ ನಾನೇ ಅದರ ವಾರಸುದಾರ ಅಂತ ಹೇಳುತ್ತಿದ್ದಾರೆ. ನಿಮ್ಮ ಈ ಬೆದರಿಕೆಗೆ ಬಿಜೆಪಿ ಸೊಪ್ಪು ಹಾಕಲ್ಲ ಎಂದು ನಾರಾಯಣಸ್ವಾಮಿ ತಿರುಗೇಟು ನೀಡಿದ್ದಾರೆ.
ವಾಮ ಮಾರ್ಗವನ್ನು ಜನರಿಗೆ ತೋರಿಸಿದ್ದೀರಿ. ನೀವು ಯಾವ ಮಟ್ಟಕ್ಕೆ ಇಳಿದಿದ್ದೀರಿ ಅಂತ ಜನಕ್ಕೆ ತೋರಿಸಿದ್ದೀರಿ. ನೀವು ಮಾಡುವ ತಪ್ಪಿಗೆ ಲೈನ್ ಮ್ಯಾನ್, ಕಂಡಕ್ಟರ್ಗಳಿಗೆ ಸಮಸ್ಯೆ ಮಾಡಬೇಕಾ ಎಂದು ಅವರು ಕಾಂಗ್ರೆಸ್ನವರನ್ನು ಪ್ರಶ್ನಿಸಿದ್ದಾರೆ.
Congress trying to fix old cases on Ashwath Narayan and Harish Poonja, top Police officer's threatned by Congress leaders says chalavadi narayanaswamy.
06-07-25 04:50 pm
HK News Desk
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
06-07-25 03:53 pm
HK News Desk
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
06-07-25 04:14 pm
Mangalore Correspondent
Pregnant Woman Murder, Chamarajanagar: ಗರ್ಭಿಣ...
06-07-25 01:23 pm
6 ವರ್ಷಗಳ ಹಿಂದೆ ಮಗನ ಹತ್ಯೆ ; ಇಂದು ಅಪ್ಪನ ಗುಂಡಿಕ್...
05-07-25 11:04 pm
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm