ಬ್ರೇಕಿಂಗ್ ನ್ಯೂಸ್
25-05-23 09:07 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25 : ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಮೊದಲ ಎಫ್ಐಆರ್ ಬೆಂಗಳೂರಿನಲ್ಲಿ ದಾಖಲಾಗಿದೆ. ಅಂಬೇಡ್ಕರ್ ಅಭಿವೃದ್ದಿ ನಿಗಮ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.
ಶೀಘ್ರವೇ ಈ ಪ್ರಕರಣ ಸಿಐಡಿಗೆ ವರ್ಗಾವಣೆಯಾಗುವ ಸಾಧ್ಯತೆಯಿದೆ. ಎರಡರಿಂದ 5 ಎಕರೆ ವ್ಯಾಪ್ತಿಯೊಳಗಡೆ ಜಮೀನಿರುವ ಸಣ್ಣ ರೈತರಿಗೆ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಲು ಅನುದಾನ ನೀಡಲಾಗುತ್ತದೆ. ಆದರೆ ಈ ಯೋಜನೆಯನ್ನು ದುರುಪಯೋಗ ಮಾಡಿಕೊಂಡು ಟೆಂಡರ್ ನಿಯಮಗಳನ್ನು ಗಾಳಿಗೆ ತೂರಿ ಹಣ ಕಬಳಿಸಿದ್ದಾರೆ. ನಕಲಿ ದಾಖಲೆ ನೀಡಿ ಕೋಟ್ಯಂತರ ರೂಪಾಯಿ ಹಣ ಬಿಡುಗಡೆ ಮಾಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಹಿಂದೆ 2021 ರಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ನಡೆಯುವ ಅಕ್ರಮ ತಡೆಯಲು ತನಿಖೆಗೆ ಸದನ ಸಮಿತಿ ರಚನೆಯಾಗಿತ್ತು. ಡಾ.ವೈ.ಎ. ನಾರಾಯಣ ಸ್ವಾಮಿ ನೇತೃತ್ವದ ಗಂಗಾ ಕಲ್ಯಾಣ ವಿಶೇಷ ಸದನ ಸಮಿತಿ ಈಗಾಗಲೇ ಮಧ್ಯಂತರ ವರದಿ ಸಲ್ಲಿಸಿದೆ. ಈ ಬೆನ್ನಲ್ಲೇ ಗಂಗಾಕಲ್ಯಾಣ ಯೋಜನೆಯ ಅಕ್ರಮದ ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ನಿರ್ಮಾಣ ಕಾರ್ಯದಲ್ಲಿ ಶೇ.30 ರಿಂದ 40 ರಷ್ಟು ಅಕ್ರಮ ನಡೆದಿದೆ. 100 ಕೋಟಿ ರೂ. ಅನುದಾನದಲ್ಲಿ 30ರಿಂದ 40 ಕೋಟಿ ರೂ. ದೋಚುವ ಕೆಲಸ ಮಾಡಲಾಗಿದೆ ಎಂದು ತನಿಖೆ ನಡೆಸಿದ್ದ ಡಾ.ವೈ.ಎ. ನಾರಾಯಣಸ್ವಾಮಿ ಈ ಹಿಂದೆ ಹೇಳಿದ್ದರು. 2015ರಿಂದ 2021ರ ನಡುವೆ ಕೋಟ್ಯಂತರ ರೂ. ಅಕ್ರಮ ನಡೆದಿರುವುದು ಸಮಿತಿಯ ತನಿಖೆಯಲ್ಲಿ ತಿಳಿದುಬಂದಿತ್ತು. ಗೋಲ್ಮಾಲ್ನಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಮಿತಿ ಶಿಫಾರಸು ಮಾಡಲಿದೆ ಎಂದು ನಾರಾಯಣ ಸ್ವಾಮಿ ತಿಳಿಸಿದ್ದರು.
Karnataka Ganga Kalyana Scheme 2023 corruption scam, FIR registered at Vidhana Soudha police station by Congress.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am