ಬ್ರೇಕಿಂಗ್ ನ್ಯೂಸ್
26-05-23 01:28 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 26 : ಚುನಾವಣೆಗೆ ಮುಂಚೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜಂಟಿ ಸಹಿಯುಳ್ಳ ಗ್ಯಾರಂಟಿ ಕಾರ್ಡ್ಗಳನ್ನು ರಾಜ್ಯದ ಪ್ರತಿ ಮನೆಗೆ ವಿತರಿಸಿ, ಕಾಂಗ್ರೆಸ್ ಅಧಿಕಾರವಹಿಸಿಕೊಂಡ ನಂತರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಐದು ಉಚಿತ ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಘೋಷಿಸಿದ್ದರು.ಈಗ ಅದನ್ನು ಪಾಲಿಸಲೇಬೇಕು ಎಂದು ಬಿಜೆಪಿ ಮಾಜಿ ಸಚಿವ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಪಕ್ಷದ ರಾಜ್ಯ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿದೆ. ಐದು ಉಚಿತ ಗ್ಯಾರಂಟಿಗಳನ್ನು ಕೊಡಮಾಡಲಿದೆ. ದಯವಿಟ್ಟು ಕಾಂಗ್ರೆಸ್ನವರು ಹೇಳಿದ್ದನ್ನು ಜನರು ಫಾಲೋ ಮಾಡಬೇಕು.ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೊದಲ ಸಚಿವ ಸಂಪುಟ ಸಭೆಯೂ ಆಗಿರುವ ಕಾರಣ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸ್ವತಃ ಹೇಳಿದಂತೆಯೇ ಯಾರೊಬ್ಬರೂ ಕರೆಂಟ್ ಬಿಲ್ ಕಟ್ಟಬೇಡಿ. ಮಹಿಳೆಯರು ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಲಿ. ನಾನು ಕಟ್ಟಲ್ಲ, ನೀವೂ ಕಟ್ಟಬೇಡಿ ಎಂದು ಅವರಿಬ್ಬರು ಹೇಳಿದ್ದಾರೆ. ಹೀಗಾಗಿ ಕರೆಂಟ್ ಬಿಲ್ ಕಟ್ಟಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಅವಮಾನಿಸಬಾರದು ಎಂದು ರಾಜ್ಯದ ಜನರಿಗೆ ಆರ್.ಅಶೋಕ್ ಉಚಿತ ಸಲಹೆ ನೀಡಿದರು.


ಆರ್ಎಸ್ಎಸ್ ನಿಷೇಧವಲ್ಲ, ಸಂಘದ ಒಂದು ಶಾಖೆಯನ್ನು ಕಾಂಗ್ರೆಸ್ಗೆ ತಾಕತ್ತಿದ್ದರೆ ಮುಟ್ಟಲಿ ನೋಡೋಣ. ಹಿಂದುಗಳ ಧ್ವನಿಯಾಗಿರುವ ಆರ್ಎಸ್ಎಸ್, ಭಜರಂಗದಳ ತಂಟೆಗೆ ಹೋದರೆ ಮೂರು ತಿಂಗಳಲ್ಲಿ ಪತನವಾಗಲಿದೆ ಎಂದು ಆರ್.ಅಶೋಕ್ ಎಚ್ಚರಿಸಿದರು.
ಐದು ಗ್ಯಾರಂಟಿಗಳನ್ನು ಈಡೇರಿಸಲು ಜನರು ಪಟ್ಟು ಹಿಡಿದು ಒತ್ತಡ ಹೇರಲಾರಂಭಿಸಿದ್ದು, ವಿಷಯಾಂತರ ಮಾಡಲು ನಿಷೇಧದ ಬಗ್ಗೆ ಮಾತನಾಡುತ್ತಿದ್ದಾರೆ. ರಾಹುಲ್ ಗಾಂಧಿ ಮುತ್ತಾತ, ಅಜ್ಜಿಗೂ ಆರ್ಎಸ್ಎಸ್ ತಂಟೆಗೆ ಹೋಗಲಾಗಿಲ್ಲ. ನಿಷೇಧದ ಬಗ್ಗೆ ಸದನದಲ್ಲಿ ಧಮ್ಮಿದ್ದರೆ ಬಿಲ್ ತರಲಿ ಎಂದು ಸೆಡ್ಡು ಹೊಡೆದರು.
ಸಿದ್ದರಾಮಯ್ಯ ಅವರು 13 ಬಾರಿ ಬಜೆಟ್ ಮಂಡಿಸಿದವರು. ಉಚಿತ ಗ್ಯಾರಂಟಿ ಹೇಗೆ ಜಾರಿ ಮಾಡಬೇಕು, ಅವರಿಗೆ ಎಲ್ಲ ಮಾಹಿತಿಯಿದೆ, ಹೇಳಿದಂತೆ ನಡೆಯುತ್ತಾರೆ. ಡಬಲ್ ಸ್ಟೇರಿಂಗ್ ಸರ್ಕಾರದಲ್ಲಿ ಮಂತ್ರಿ ಪದವಿ, ಮಂತ್ರಿಯಾದವರಿಗೆ ಖಾತೆ ಗ್ಯಾರಂಟಿಯೇ ಸಿಕ್ಕಿಲ್ಲ ಎಂದು ಆರ್.ಅಶೋಕ್ ವ್ಯಂಗ್ಯವಾಡಿದರು.
Let Congress touch one office of the RSS if they have guts slams R. Ashok, says don't pay the electricity bill. Even am not going pay the bill he slammed.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am