ಬ್ರೇಕಿಂಗ್ ನ್ಯೂಸ್
27-05-23 12:27 pm HK News Desk ಕರ್ನಾಟಕ
ಹಾಸನ, ಮೇ 27: ಸಬ್ಇನ್ಸ್ಪೆಕ್ಟರ್ ಮನೆಗೆಯೇ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. ಕೊಣನೂರು ಪೊಲೀಸ್ ಠಾಣೆ ಪಿಎಸ್ಐ ಶೋಭಾ ಭರಮಕ್ಕನವರ್ ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ವೇಳೆ ಅವರ ಬಾಡಿಗೆ ಮನೆಯ ಕಿಟಕಿ ಒಡೆದು ಸೀಮೆಎಣ್ಣೆ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮನೆಯಲ್ಲಿದ್ದ ಲ್ಯಾಪ್ಟಾಪ್, ಡ್ರೆಸ್ಸಿಂಗ್ ಟೇಬಲ್, ಬಟ್ಟೆ, ಪೀಠೋಪಕಣಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಶೋಭಾ ರಜೆ ಮುಗಿಸಿ ಶುಕ್ರವಾರ ಮನೆಗೆ ವಾಪಸಾದಾಗ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು, ಡಿವೈಎಸ್ಪಿ ಮುರುಳೀಧರ್ ಹಾಗೂ ವೃತ್ತ ನಿರೀಕ್ಷಕ ರಘುಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೋಭಾ ಭರಮಕ್ಕನವರ್ ಕಳೆದ ಮೂರುವರೆ ತಿಂಗಳ ಹಿಂದಷ್ಟೇ ಜಾವಗಲ್ ಪೊಲೀಸ್ ಠಾಣೆಯಿಂದ ಕೊಣನೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಇದೀಗ ಘಟನೆ ಬಗ್ಗೆ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಅಲ್ಲದೇ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Hassan sub inspector Shoba house gutted with fire by miscreants, lakhs worth items burnt.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am