ಬ್ರೇಕಿಂಗ್ ನ್ಯೂಸ್
30-05-23 03:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 30: ಕರೊನಾ ಸಮಯದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ವರದಿ ಕೇಳಿದ್ದಾರೆ. ವರದಿಯಲ್ಲಿ ಏನಿರುತ್ತದೆ ಎಂಬುದನ್ನು ತಿಳಿದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿದರು.
ಕರೊನಾ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದ್ದು, ಪ್ರಕರಣ ಕೈಗೆತ್ತಿಕೊಂಡು ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಪ್ರತಿಕ್ರಿಯಿಸಿದ್ದು, ದುರದೃಷ್ಟವಶಾತ್ ಆಕ್ಸಿಜನ್ ದುರಂತಕ್ಕೆ ಯಾರು ಕಾರಣ ಎಂಬುದರ ಬಗ್ಗೆ ಇನ್ನೂ ತನಿಖೆ ಪೂರ್ಣ ತನಿಖೆ ಮಾಡಿಲ್ಲ. ಇದೀಗ ಮರು ತನಿಖೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ಆಕ್ಸಿಜನ್ ದುರಂತ ಪ್ರಕರಣದಲ್ಲಿ ಯಾರಿಂದ ಲೋಪದೋಷ ಉಂಟಾಗಿದೆಯೋ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ನ್ಯಾಯಾಲಯದಿಂದ ಪ್ರಕರಣದ ಕುರಿತು ತೀರ್ಪು ಬಂದಿದೆ. ಆದರೆ ಇಲಾಖೆಯಿಂದ ಸರಿಯಾದ ತನಿಖೆ ನಡೆದಿಲ್ಲ. ಮತ್ತೊಮ್ಮೆ ಸರಿಯಾದ ತನಿಖೆ ನಡೆಸುಂತೆ ಸೂಚಿಸಿದ್ದೇನೆ ಎಂದರು.
ಏನಿದು ಆಕ್ಸಿಜನ್ ದುರಂತ?
ಕರೊನಾ 2ನೇ ಅಲೆ ತೀವ್ರವಾಗಿದ್ದ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಂಗ್ರಹದ ಅಸಮರ್ಪಕ ನಿರ್ವಹಣೆಯಿಂದ 36 ಕರೊನಾ ಸೋಂಕಿತರು ಮೃತಪಟ್ಟಿದ್ದರು. ಆಕ್ಸಿಜನ್ ದುರಂತಕ್ಕೆ ಅಂದಿನ ಜಿಲ್ಲಾಧಿಕಾರಿಯ ನಿರ್ಲಕ್ಷ್ಯವೇ ಕಾರಣ ಎಂದು ನ್ಯಾಯಮೂರ್ತಿ ವೇಣುಗೋಪಾಲ ನೇತೃತ್ವದ ಕಾನೂನು ಸೇವೆಗಳ ಪ್ರಾಧಿಕಾರ ಸಮಿತಿ ಹೇಳಿತ್ತು. ಆದರೆ ಈ ಹಿಂದಿನ ಸರ್ಕಾರ ಮಾತ್ರ ದುರಂತಕ್ಕೆ ಯಾರನ್ನೂ ಹೊಣೆ ಮಾಡಿರಲಿಲ್ಲ. ಘಟನೆ ನಡೆದು ಒಂದು ವರ್ಷ ಕಳೆದಿದ್ದರೂ, ನ್ಯಾಯಾಂಗ ತನಿಖಾ ವರದಿ ಇನ್ನೂ ಬಹಿರಂಗವಾಗಿಲ್ಲ.
Oxygen tragedy in Chamarajanagar, health minister Dinesh Gundu Rao orders for reinvestigation of case.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am