ಬ್ರೇಕಿಂಗ್ ನ್ಯೂಸ್
30-05-23 06:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 30 : ಚಿಕ್ಕಮಗಳೂರಿನಲ್ಲಿ ನಾಗರ ಹಾವಿನ ಕಡಿತಕ್ಕೊಳಗಾದ ಉರಗತಜ್ಞ ಸ್ನೇಕ್ ನರೇಶ್ (51) ದುರಂತ ಸಾವು ಕಂಡಿದ್ದಾರೆ.
ಸಾವಿರಾರು ಹಾವುಗಳನ್ನು ಸೆರೆಹಿಡಿದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಹೊಂದಿದ್ದ ನರೇಶ್ ಇಂದು ಮಧ್ಯಾಹ್ನ ಹಾವನ್ನು ಹಿಡಿದು ಕೊಂಡೊಯ್ಯುವ ಯತ್ನದಲ್ಲಿ ಕಡಿತಕ್ಕೊಳಗಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ಯಲಾಗಿದ್ದು ಅಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಬೆಳಗ್ಗೆ ಒಂದು ನಾಗರ ಹಾವನ್ನು ಹಿಡಿದು ಸ್ಕೂಟರ್ ಡಿಕ್ಕಿಯಲ್ಲಿ ಹಾಕ್ಕೊಂಡು ಬಂದಿದ್ದರು. ಮತ್ತೊಂದು ಹಾವು ಹಿಡಿದು ಹಾವಿನ ಚೀಲ ತೆರೆಯಲು ಡಿಕ್ಕಿ ಓಪನ್ ಮಾಡಿದ್ದರು. ಅಷ್ಟರಲ್ಲೇ ಹಾವು ಕಡಿದಿದ್ದು ವಿಷ ದೇಹಕ್ಕೆ ಆವರಿಸಿತ್ತು.
ಹಾವು ಹಿಡಿಯುವುದರಲ್ಲಿ ಖ್ಯಾತಿ ಹೊಂದಿದ್ದ ಸ್ನೇಕ್ ನರೇಶ್, 2013ರಲ್ಲಿ ವಿಧಾನಸಭಾ ಚುನಾವಣೆಗೂ ಸ್ಪರ್ಧಿಸಿದ್ದರು. ಶಾಲಾ ಮಕ್ಕಳಿಗೆ ಹಾವುಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ವಿಷ ರಹಿತ ಹಾವುಗಳ ಬಗ್ಗೆ ಭಯ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬುತ್ತಿದ್ದರು. ಇಂದು ಮಧ್ಯಾಹ್ನ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಹಾವು ಹಿಡಿಯಲು ಹೋದ ಸಂದರ್ಭದಲ್ಲಿ ದುರಂತ ಸಾವು ಕಂಡಿದ್ದಾರೆ.
Chikkamagaluru Snake Suresh dies after deadly cobra attack. The Snake which he himself rescued has caused his death.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am