ಬ್ರೇಕಿಂಗ್ ನ್ಯೂಸ್
01-06-23 10:49 pm HK News Desk ಕರ್ನಾಟಕ
ಬಳ್ಳಾರಿ, ಜೂ 1: ಬಳ್ಳಾರಿ ಜಿಲ್ಲೆಯಲ್ಲಿ ವರುಣ ಆರ್ಭಟ ಜೋರಾಗಿದ್ದು, ಜಿಲ್ಲೆಯ ಸಿರುಗುಪ್ಪ ತಾಲೂಕಿನ ಉತ್ತನೂರು ಗ್ರಾಮದ ಮೂವರು ವ್ಯಕ್ತಿಗಳು ಸಿಡಿಲು ಬಡಿದು ಮೃತರಾಗಿದ್ದಾರೆ.
ಸಿರುಗುಪ್ಪ ತಾಲೂಕಿನ ಉತ್ತನೂರು ಗ್ರಾಮದ ನಿವಾಸಿ ಶೇಖರಗೌಡ (32) ಹಾಗೂ ಬಸವನಗೌಡ (38) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಮೃತರು ಸಂಬಂಧಿಕರ ಮದುವೆ ಕಾರ್ಯ ನಿಮಿತ್ತ ಸೀಮಾಂಧ್ರದ ಹೊಳಗುಂದ ಮಂಡಲ ವ್ಯಾಪ್ತಿಯ ವಿರೂಪಾಪುರ ಗ್ರಾಮದ ಬಳಿ ಇರುವ ಬೊಗಟೇಶ್ವರ ದೇವಸ್ಥಾನಕ್ಕೆ ಗುರುವಾರ ಬೆಳಿಗ್ಗೆ ಗ್ರಾಮದಿಂದ ತೆರಳಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮದುವೆಯ ನಂತರ ಮರದ ಬಳಿ ನಿಂತು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತು ಇವರ ಜೊತೆಗಿದ್ದ ಬೇರೆ ಗ್ರಾಮಗಳ ನಾಲ್ಕು ಜನರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಒಟ್ಟು ಮೂವರು ಮೃತಪಟ್ಟಿದ್ದು, ಮತ್ತೋರ್ವ ಮೃತನ ಹೆಸರು, ಮಾಹಿತಿ ತಿಳಿದು ಬಂದಿಲ್ಲ.
ಸಿಡಿಲು ಬಡಿದು ಮೃತಪಟ್ಟ ಶೇಖರ ಗೌಡ ಎಂಬಾತ ಪತ್ನಿ ಹಾಗೂ ಒಂದು ಗಂಡು ಮತ್ತು ಹೆಣ್ಣು ಮಗುವನ್ನು ಅಗಲಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Three killed in Bellary after lightening strikes due to heavy rains.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am