ಬ್ರೇಕಿಂಗ್ ನ್ಯೂಸ್
03-06-23 02:04 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 3: ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಹಿನ್ನೆಲೆಯಲ್ಲಿ ಕನ್ನಡಿಗರಿಗೆ ಅಗತ್ಯ ನೆರವು ನೀಡಲು ಹಾಗೂ ಸುರಕ್ಷತೆಯ ಮಾಹಿತಿ ಒದಗಿಸಲು ರಾಜ್ಯ ತುರ್ತು ನಿರ್ವಹಣಾ ಕೇಂದ್ರ (SEOC)ದಲ್ಲಿ ನಾಗರೀಕರ ಅನುಕೂಲಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ.
ದೂರವಾಣಿ ಸಂಖ್ಯೆ: 1070, 080-22253707, 080-22340676 ಕ್ಕೆ ಕರೆಮಾಡಿ ಮಾಹಿತಿ ಅಥವಾ ನೆರವು ಪಡೆಯಲು ಕೋರಲಾಗಿದೆ. ಶುಕ್ರವಾರ ರಾತ್ರಿ ಓಡಿಶಾದ ಬಾಲಸೋರ್ ರೈಲು ಅಪಘಾತ ಘಟನೆಯಲ್ಲಿ ಕನ್ನಡಿಗರ ಸುರಕ್ಷತೆಗಾಗಿ ಸಚಿವ ಸಂತೋಷ್ ಲಾಡ್ ನೇತೃತ್ವದ ತಂಡವನ್ನು ನಿಯೋಜಿಸಿದೆ.
ಮುಖ್ಯಮಂತ್ರಿಗಳು ಮುಖ್ಯ ಕಾರ್ಯದರ್ಶಿಯವರಿಂದ ವರದಿಯನ್ನು ಕೇಳಿದ್ದು, ಕನ್ನಡಿಗರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅವರಿಗೆ ಅಗತ್ಯವಿರುವ ಎಲ್ಲ ಬೆಂಬಲವನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ಸಂಪೂರ್ಣ ನೆರವು ನೀಡಲಾಗುವುದು. ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಒಡಿಶಾದ ಬಾಲಾಸೋರ್ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟ ಸುದ್ದಿ ಕೇಳಿ ಅತೀವ ನೋವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಗಾಯಗೊಂಡಿರುವವರೆಲ್ಲರೂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಈ ಮೊದಲು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.
ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸುವಂತೆ ಹಾಗೂ ಅವರಿಗೆ ಅಗತ್ಯ ನೆರವನ್ನು ನೀಡುವಂತೆ ಸಚಿವ ಸಂತೋಷ್ ಲಾಡ್ ಅವರಿಗೆ ಸೂಚಿಸಿದ್ದೇನೆ.
— Siddaramaiah (@siddaramaiah) June 3, 2023
ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ನಾವು…
Karnataka CM Siddaramaiah grieved by Odisha train accident, helpline number for kannadigas launched. He also tweeted stating we will be responsible to get back even a single kanmadiga safely from the place of accident in Odisha.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
20-01-26 07:04 pm
HK News Desk
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
20-01-26 07:51 pm
Bangalore Correspondent
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm