ಬ್ರೇಕಿಂಗ್ ನ್ಯೂಸ್
04-06-23 03:40 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 4: ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಗ್ಯಾರಂಟಿ ಯೋಜನೆ ಮಹಿಳೆಯರಿಗೆ ಉಚಿತ ಸಾರಿಗೆ ಪ್ರಯಾಣ ಇದೇ ಜೂನ್ 11ರಂದು ಜಾರಿಗೆ ಬರುತ್ತಿದೆ. ಅಂದು ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಗೆ ಚಾಲನೆ ನೀಡುವುದರೊಂದಿಗೆ ಸರ್ಕಾರಿ ಬಸ್ ಉಚಿತ ಸೌಲಭ್ಯದ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ.
![]()

ಅಂದಿನಿಂದ ಮಹಿಳೆಯರು ರಾಜ್ಯಾದ್ಯಂತ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಸರ್ಕಾರ ಇದಕ್ಕೆ ಕೆಲವು ಷರತ್ತುಗಳನ್ನು ಹಾಕಿದೆ. ಉಚಿತ ಬಸ್ ಸೇವೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿರುತ್ತದೆ. ರಾಜ್ಯದ ಒಳಗೆ ಮಾತ್ರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಎಕ್ಸ್ಪ್ರೆಸ್ ಬಸ್ನಲ್ಲಿಯೂ ಪ್ರಯಾಣಕ್ಕೆ ಅವಕಾಶ ಮಾಡಲಾಗುತ್ತದೆ. ಬೆಂಗಳೂರು ನಗರದ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ನಲ್ಲಿ ಅವಕಾಶ ಇರಲಿದೆ. ಎಸಿ ಮತ್ತು ಐಷಾರಾಮಿ ಬಸ್ಗಳಲ್ಲಿ ಉಚಿತ ಪ್ರಯಾಣವಿಲ್ಲ. ರಾಜಹಂಸ ಬಸ್ನಲ್ಲಿಯೂ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಇರುವುದಿಲ್ಲ.
ಇದೇ ವೇಳೆ, ಮಹಿಳೆಯರು ಉಚಿತ ಪ್ರಯಾಣಕ್ಕೆ ಟಿಕೆಟ್ ಪಡೆಯಬೇಕೋ, ಇಲ್ಲವೋ.. ಅದಕ್ಕಾಗಿ ಯಾವ ರೀತಿಯ ದಾಖಲೆ ಹಾಜರುಪಡಿಸಬೇಕು ಎಂಬ ಗೊಂದಲಗಳಿದ್ದವು. ಈ ಗೊಂದಲಕ್ಕೆ ಈಗ ತೆರೆಬಿದ್ದಿದೆ. ಮಹಿಳೆಯರು ಪ್ರಯಾಣಕ್ಕೂ ಮೊದಲು ಕಂಡಕ್ಟರ್ ಬಳಿ ಟಿಕೆಟ್ ಪಡೆಯಲೇಬೇಕು. ಮಹಿಳೆಯರಿಗೆ ಉಚಿತ ಪ್ರಯಾಣದ ಟಿಕೆಟ್- ಶಕ್ತಿ ಯೋಜನೆ ಎಂದು ನಮೂದಿಸಿರುವ ಟಿಕೆಟ್ ಚೀಟಿಯನ್ನು ಪ್ರಯಾಣಿಕರಿಗೆ ನೀಡಲಿದ್ದಾರೆ.
ಟಿಕೆಟ್ ಮೇಲೆ 'ಮಹಿಳಾ ಪ್ರಯಾಣಿಕರ ಉಚಿತ ಚೀಟಿ- ಶಕ್ತಿ ಯೋಜನೆ' ಎಂದು ಬರೆದಿರುತ್ತಾರೆ ಮತ್ತು ಟಿಕೆಟ್ನಲ್ಲಿ ಯಾವುದೇ ಬೆಲೆ ನಮೂದಾಗುವುದಿಲ್ಲ. ಮಾಮೂಲಿಯಂತೆ ಕಂಡಕ್ಟರ್ ಬಳಿ ಟಿಕೆಟ್ ಪಡೆದುಕೊಳ್ಳಬೇಕು. ಬದಲಾವಣೆ ಏನೆಂದರೆ, ಹಣ ಕೊಡುವಂತಿಲ್ಲ. ಇದಕ್ಕಾಗಿ ಬಿಎಂಟಿಸಿ ಮತ್ತು ಕೆಎಸ್ಸಾರ್ಟಿಸಿ ಸಿದ್ಧತೆ ನಡೆಸುತ್ತಿದೆ.
Free bus travel for women in karnataka, women should carry ticket compulsory.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am