ಬ್ರೇಕಿಂಗ್ ನ್ಯೂಸ್
04-06-23 03:40 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 4: ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಗ್ಯಾರಂಟಿ ಯೋಜನೆ ಮಹಿಳೆಯರಿಗೆ ಉಚಿತ ಸಾರಿಗೆ ಪ್ರಯಾಣ ಇದೇ ಜೂನ್ 11ರಂದು ಜಾರಿಗೆ ಬರುತ್ತಿದೆ. ಅಂದು ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಗೆ ಚಾಲನೆ ನೀಡುವುದರೊಂದಿಗೆ ಸರ್ಕಾರಿ ಬಸ್ ಉಚಿತ ಸೌಲಭ್ಯದ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ.
![]()

ಅಂದಿನಿಂದ ಮಹಿಳೆಯರು ರಾಜ್ಯಾದ್ಯಂತ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಸರ್ಕಾರ ಇದಕ್ಕೆ ಕೆಲವು ಷರತ್ತುಗಳನ್ನು ಹಾಕಿದೆ. ಉಚಿತ ಬಸ್ ಸೇವೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿರುತ್ತದೆ. ರಾಜ್ಯದ ಒಳಗೆ ಮಾತ್ರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಎಕ್ಸ್ಪ್ರೆಸ್ ಬಸ್ನಲ್ಲಿಯೂ ಪ್ರಯಾಣಕ್ಕೆ ಅವಕಾಶ ಮಾಡಲಾಗುತ್ತದೆ. ಬೆಂಗಳೂರು ನಗರದ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ನಲ್ಲಿ ಅವಕಾಶ ಇರಲಿದೆ. ಎಸಿ ಮತ್ತು ಐಷಾರಾಮಿ ಬಸ್ಗಳಲ್ಲಿ ಉಚಿತ ಪ್ರಯಾಣವಿಲ್ಲ. ರಾಜಹಂಸ ಬಸ್ನಲ್ಲಿಯೂ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಇರುವುದಿಲ್ಲ.
ಇದೇ ವೇಳೆ, ಮಹಿಳೆಯರು ಉಚಿತ ಪ್ರಯಾಣಕ್ಕೆ ಟಿಕೆಟ್ ಪಡೆಯಬೇಕೋ, ಇಲ್ಲವೋ.. ಅದಕ್ಕಾಗಿ ಯಾವ ರೀತಿಯ ದಾಖಲೆ ಹಾಜರುಪಡಿಸಬೇಕು ಎಂಬ ಗೊಂದಲಗಳಿದ್ದವು. ಈ ಗೊಂದಲಕ್ಕೆ ಈಗ ತೆರೆಬಿದ್ದಿದೆ. ಮಹಿಳೆಯರು ಪ್ರಯಾಣಕ್ಕೂ ಮೊದಲು ಕಂಡಕ್ಟರ್ ಬಳಿ ಟಿಕೆಟ್ ಪಡೆಯಲೇಬೇಕು. ಮಹಿಳೆಯರಿಗೆ ಉಚಿತ ಪ್ರಯಾಣದ ಟಿಕೆಟ್- ಶಕ್ತಿ ಯೋಜನೆ ಎಂದು ನಮೂದಿಸಿರುವ ಟಿಕೆಟ್ ಚೀಟಿಯನ್ನು ಪ್ರಯಾಣಿಕರಿಗೆ ನೀಡಲಿದ್ದಾರೆ.
ಟಿಕೆಟ್ ಮೇಲೆ 'ಮಹಿಳಾ ಪ್ರಯಾಣಿಕರ ಉಚಿತ ಚೀಟಿ- ಶಕ್ತಿ ಯೋಜನೆ' ಎಂದು ಬರೆದಿರುತ್ತಾರೆ ಮತ್ತು ಟಿಕೆಟ್ನಲ್ಲಿ ಯಾವುದೇ ಬೆಲೆ ನಮೂದಾಗುವುದಿಲ್ಲ. ಮಾಮೂಲಿಯಂತೆ ಕಂಡಕ್ಟರ್ ಬಳಿ ಟಿಕೆಟ್ ಪಡೆದುಕೊಳ್ಳಬೇಕು. ಬದಲಾವಣೆ ಏನೆಂದರೆ, ಹಣ ಕೊಡುವಂತಿಲ್ಲ. ಇದಕ್ಕಾಗಿ ಬಿಎಂಟಿಸಿ ಮತ್ತು ಕೆಎಸ್ಸಾರ್ಟಿಸಿ ಸಿದ್ಧತೆ ನಡೆಸುತ್ತಿದೆ.
Free bus travel for women in karnataka, women should carry ticket compulsory.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
20-01-26 07:04 pm
HK News Desk
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
20-01-26 05:01 pm
Bangalore Correspondent
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm