ಬ್ರೇಕಿಂಗ್ ನ್ಯೂಸ್
06-06-23 11:25 am HK News Desk ಕರ್ನಾಟಕ
ಯಾದಗಿರಿ, ಜೂನ್ 6: ಮಂಗಳವಾರ ನಸುಕಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಐದು ಜನ ಸಾವನ್ನಪ್ಪಿದ್ದು, 13 ಜನ ಗಾಯಗೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಎ)ನಲ್ಲಿ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ನಡೆದಿದೆ.
ಮೃತರನ್ನು ರಮಿಜಾ ಬೇಗಂ (50), ಮುನೀರ್ (40), ನಯಾಮತ್ (40), ಮುದಸ್ಸೀರ್ (12) ಮತ್ತು ಸುಮ್ಮಿ (12) ಎಂದು ಗುರುತಿಸಲಾಗಿದೆ. ಮೃತರೆಲ್ಲಾ ಆಂಧ್ರ ಪ್ರದೇಶದ ಮೂಲದವರು ಎಂದು ತಿಳಿದುಬಂದಿದೆ. ಆಂಧ್ರ ಪ್ರದೇಶದ ಬಂಡಿ ಆತ್ಮಕೂರು ಗ್ರಾಮದ ಮುನೀರ್ ಹಾಗೂ ಮುದಸ್ಸೀರ್ ಇಬ್ಬರೂ ತಂದೆ-ಮಗ ಎನ್ನಲಾಗಿದ್ದು, ಇನ್ನುಳಿದ ಮೂವರು ವೆಲಗುಡ ಗ್ರಾಮದವರು ಎಂದು ತಿಳಿದುಬಂದಿದೆ.
ಕ್ರೂಸರ್ನಲ್ಲಿದ್ದ ಜನರು ಆಂಧ್ರಪ್ರದೇಶದ ನಂದ್ಯಾಳ್ ಜಿಲ್ಲೆಯಿಂದ ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾದ ಉರುಸ್ ಜಾತ್ರೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಬಳಿಚಕ್ರ ಬಳಿ ಹೆದ್ದಾರಿ ಪಕ್ಕ ನಿಲ್ಲಿಸಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದಿದೆ. ಇದರಿಂದ ಸ್ಥಳದಲ್ಲಿಯೇ ಐವರು ಸಾವಿಗೀಡಾಗಿದ್ದಾರೆ.

ಸ್ಥಳಕ್ಕೆ ಸೈದಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ಐವರು ಪೈಕಿ ಇಬ್ಬರು ಮಹಿಳೆಯರು ಸೇರಿದ್ದಾರೆ. ರಸ್ತೆ ಅಪಘಾತದಲ್ಲಿ 13 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಯಾದಗಿರಿ ಮತ್ತು ರಾಯಚೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕರ್ನಾಟಕದಲ್ಲಿ ರಸ್ತೆ ಅಪಘಾತಗಳ ಸರಣಿ ಮುಂದುವರಿದಿದೆ. ಮೇ 28ರಂದು ಕುಷ್ಟಗಿ ಸಮೀಪದ ಕಲಕೇರಿ ಬಳಿ ಭೀಕರ ರಸ್ತೆ ಅಪಘಾತ ನಡೆದಿತ್ತು. ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಮೇ 29ರಂದು ಮೈಸೂರಿನ ಟಿ ನರಸೀಪುರ ಸಮೀಪದ ಕುರುಬೂರು ಬಳಿ ಭೀಕರ ರಸ್ತೆ ಅಫಘಾತ ಸಂಭವಿಸಿತ್ತು. ಬಸ್ಗೆ ಕಾರು ಡಿಕ್ಕಿ ಹೊಡೆದು ಬಳ್ಳಾರಿ ಮೂಲದ 11 ಜನ ಸಾವನ್ನಪ್ಪಿದ್ದರು.
As many as five people, including two children, were killed in a road accident near Balichakra village in Yadgir district in Karnataka on June 6 morning. 13 others were injured in the accident and were rushed to YIMS.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am