ಬ್ರೇಕಿಂಗ್ ನ್ಯೂಸ್
06-06-23 10:28 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6: ಲೋಕಸಭೆ ಚುನಾವಣೆಯ ವೇಳೆಗೆ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವ ಕುರಿತು ಮಾಜಿ ಪ್ರಧಾನಿ ದೇವೇಗೌಡ ಸುಳಿವು ನೀಡಿದ್ದಾರೆ.
ಚುನಾವಣೆ ಸೋಲಿನ ಕುರಿತ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಈ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ ದೇಶದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳದೇ ಇದ್ದವರು ಯಾರಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್ ಕೂಡ ಬಿಜೆಪಿ ಜೊತೆಗೆ ಆ ರೀತಿಯ ಸಂಬಂಧ ಇರಿಸಿಕೊಂಡಿತ್ತು ಎಂದು ಹೇಳಿದ್ದಾರೆ.

ಬಿಜೆಪಿ ವಿರುದ್ಧ ವಿಪಕ್ಷಗಳು ಒಂದಾದಲ್ಲಿ ನೇತೃತ್ವ ವಹಿಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ನಿರಾಕರಿಸಿದ ಗೌಡರು, ಬಿಜೆಪಿ ಜೊತೆಗೆ ಎಲ್ಲ ಪಕ್ಷಗಳು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಸಂಬಂಧ ಇರಿಸಿಕೊಂಡಿವೆ. ಅದು ಎಲ್ಲರಿಗೂ ಗೊತ್ತಿರುವಂಥದ್ದೇ. ಅದು ಕರ್ನಾಟಕದಲ್ಲಿಯೂ ಆಗಿರುವಂಥದ್ದೇ ಎಂದು ಹೇಳಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋಲಾಯ್ತೆಂದು ನೋವು ಪಟ್ಟುಕೊಳ್ಳುವ ಅಗತ್ಯವಿಲ್ಲ. ಎಲ್ಲಿ ತಪ್ಪಾಗಿದೆ ಅನ್ನುವುದನ್ನು ಪತ್ತೆ ಮಾಡಿ, ಯಶಸ್ಸು ದಕ್ಕಿಸಿಕೊಳ್ಳುತ್ತೇವೆ. ಹೋರಾಟದಿಂದ ಮತ್ತೆ ಗೆಲುವಿನ ಹಾದಿ ಕಂಡುಕೊಳ್ಳುತ್ತೇವೆ ಎಂದರು.

ಬಿಜೆಪಿ ಪ್ರತಿಭಟನೆ - ಜನ ಮೂರ್ಖರಲ್ಲ
ಡಿಸಿಎಂ ಡಿಕೆ ಶಿವಕುಮಾರ್, ಯುದ್ಧ ಬೇಡ, ಗೆಳೆತನ ಸಾಧಿಸುತ್ತೇವೆ ಎಂದು ಹೇಳಿರುವ ಮಾತಿಗೆ ಉತ್ತರಿಸಿದ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಯಾವುದೇ ರೀತಿಯ ಗೆಳೆತನದ ಸಂಬಂಧ ಇರಿಸಿಕೊಳ್ಳಲು ಬಯಸೋದಿಲ್ಲ. ನಾವು ವಿರೋಧ ಪಕ್ಷದಲ್ಲಿದ್ದೇ ಇರುತ್ತೇವೆ. ಹಾಗಂತ, ಕೈಕಟ್ಟಿ ಕೂರುವ ಜಾಯಮಾನ ನಮ್ಮದಲ್ಲ ಎಂದರು. ಬಿಜೆಪಿಯವರು ವಿದ್ಯುತ್ ಶುಲ್ಕ ಹೆಚ್ಚಳ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಕುರಿತ ಪ್ರಶ್ನೆಗೆ, ಬಿಜೆಪಿ ಸರಕಾರ ಇರುವಾಗಲೇ ವಿದ್ಯುತ್ ದರ ಹೆಚ್ಚಳದ ನಿರ್ಧಾರ ಕೈಗೊಳ್ಳಲಾಗಿತ್ತು. ಈ ರೀತಿಯ ಗಿಮಿಕ್ ಬಗ್ಗೆ ತಿಳಿದುಕೊಳ್ಳದ ಮೂರ್ಖರಲ್ಲ ಜನ. ಈಗ ಪ್ರತಿಭಟನೆ ನಡೆಸಿ ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನದಲ್ಲಿದ್ದಾರೆ ಎಂದರು.
JD(S) supremo and former prime minister H G Deve Gowda maintained an enigmatic silence on whether his party will tie-up with BJP for next year’s Lok Sabha polls and instead asked which party has not done business with BJP. Gowda, who attended a review meeting of the party performance in the assembly polls in the party office in Bengaluru on Tuesday, claimed that all parties, including Congress, have had understanding with BJP and they have done in Karnataka too.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
20-01-26 07:04 pm
HK News Desk
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
20-01-26 05:01 pm
Bangalore Correspondent
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm