ಬ್ರೇಕಿಂಗ್ ನ್ಯೂಸ್
09-06-23 03:50 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 9: ಕರ್ನಾಟಕ ರಾಜ್ಯಕ್ಕೆ ಮುಂಗಾರು ಆಗಮನ ತಡವಾಗಿದೆ ಕಂಡು ಕೇಳರಿಯದ ಬಿಸಿಲಿನ ಕಾರಣ ರಾಜ್ಯದ ಹಲವು ಭಾಗಗಳಲ್ಲಿ ನೀರಿನ ಕೊರತೆ ಉಂಟಾಗಿದೆ. ಹಲವು ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರ ಕುಸಿತ ಕಂಡಿದ್ದು ಕುಡಿಯುವ ನೀರಿಗೂ ತೊಂದರೆ ಉಂಟಾಗಿದೆ.
ಅತಿಯಾದ ಬಿಸಿಲು ಇದ್ದ ಕಾರಣ ನೀರು ತ್ವರಿತವಾಗಿ ಖಾಲಿಯಾಗಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಬಿಸಿಲು ಹೆಚ್ಚಾಗಿದ್ದು, ನದಿ, ಹೊಳೆಗಳಲ್ಲಿ ಕೂಡ ನೀರಿಲ್ಲದಂತಾಗಿದೆ. ಮಂಗಳೂರು ನಗರದಲ್ಲಿ ನೀರಿನ ಕೊರತೆಯಿಂದಾಗಿ ಶಾಲಾ-ಕಾಲೇಜುಗಳಿಗೂ ರಜೆ ಕೊಡುವಂತ ಸ್ಥಿತಿ ನಿರ್ಮಾಣವಾಗಿದೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ಬಂದಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಕಾರಣ ಎನ್ನುವ ಅರ್ಥದಲ್ಲಿ ಬಿಜೆಪಿ ಟ್ವೀಟ್ ಮಾಡಿದೆ. ಸಿದ್ದರಾಮಯ್ಯ ಕಾಲ್ಗುಣದಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಬಂದಿದೆ ಎಂದು ಹೇಳಿದ್ದು, ಈ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತೀರಿ ಎಂದು ಪ್ರಶ್ನೆ ಮಾಡಿದೆ.
ಸಿದ್ದುಕಾಲ ಎಂದರೆ ಬರಗಾಲ ಎಂದ ಬಿಜೆಪಿ ;
ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ "ಸಿದ್ದುಕಾಲವೆಂದರೆ ಬರಗಾಲವೆಂಬ ನುಡಿ ಸತ್ಯವಾಯಿತೇ, ಸಿದ್ದುಕಾಲವೆಂದರೆ ಬರಗಾಲವೆಂಬ ನುಡಿ ಸತ್ಯವಾಯಿತೇ, ಮುಂಗಾರು ಓಡಿಹೋಯಿತೇ! ಸಿದ್ದರಾಮಯ್ಯನವರೇ?" ಎಂದು ಪ್ರಶ್ನೆ ಮಾಡಿದೆ.
"ಬರಿದಾಯ್ತು ಘಟಪ್ರಭಾ, ಮಲಪ್ರಭಾ. ಬತ್ತಿ ಹೋಗುತ್ತಿದೆ ಕೆಆರ್ಎಸ್. ಶುರುವಾಗಿದೆ ಬೆಂಗಳೂರಿಗೆ ಜಲಕಂಟಕ. ಉಡುಪಿ-ಮಂಗಳೂರಲ್ಲಿ ನೀರಿಲ್ಲ, ಕಾಲೇಜು, ಹೋಟೆಲ್ಗಳು ಬಂದ್ !, ಸಿಗಂದೂರಿನ ಹಿನ್ನೀರು ಸಂಪೂರ್ಣ ಖಾಲಿ. ಕೃಷ್ಣ, ತುಂಗೆಯೂ ಬರಿದು. ತಳಕಂಡ ನಾರಾಯಣಪುರ ಬಲದಂಡೆ. ಆದರೂ ತಾವು ಮೌನವಾಗಿದ್ದೀರಿ" ಎಂದು ಸಿದ್ದರಾಮಯ್ಯ ಅವರನ್ನು ಕೇಳಿದೆ.
"ರಾಜ್ಯದಲ್ಲಿ ಕ್ಷಾಮ ಪಕ್ಷದ ಕಾಲ್ಗುಣದಿಂದ ಉಂಟಾದ ಈ ಘನಘೋರ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತೀರಿ, ಹೇಗೆ 'ಸಿದ್ದ' ರಾಗಿದ್ದೀರಿ?" ಕಾಗೆ ಹಾರಿಸದೆ, ರಾಜ್ಯಕ್ಕೆ ಉತ್ತರ ಕೊಡಿ ಎಂದು ಕೇಳಿದೆ.
ಸಿದ್ದುಕಾಲವೆಂದರೆ ಬರಗಾಲವೆಂಬ ನುಡಿ ಸತ್ಯವಾಯಿತೇ, ಮುಂಗಾರು ಓಡಿಹೋಯಿತೇ! @siddaramaiahನವರೇ,
— BJP Karnataka (@BJP4Karnataka) June 9, 2023
🗣 ಬರಿದಾಯ್ತು ಘಟಪ್ರಭಾ, ಮಲಪ್ರಭಾ.
ತಾವು ಮಾತ್ರ 🤐
🗣 ಬತ್ತಿ ಹೋಗುತ್ತಿದೆ ಕೆಆರ್ಎಸ್.
ತಾವು ಮಾತ್ರ🤐
🗣 ಶುರುವಾಗಿದೆ ಬೆಂಗಳೂರಿಗೆ ಜಲಕಂಟಕ.
ತಾವು ಮಾತ್ರ 🤐
🗣 ಉಡುಪಿ-ಮಂಗಳೂರಲ್ಲಿ ನೀರಿಲ್ಲ, ಕಾಲೇಜು, ಹೋಟೆಲ್ಗಳು ಬಂದ್!
ತಾವು…
No rains, waterbodies river dried up, BJP tweets says its all becuase of the fate of CM Siddaramaiah.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm