ಬ್ರೇಕಿಂಗ್ ನ್ಯೂಸ್
09-06-23 03:50 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 9: ಕರ್ನಾಟಕ ರಾಜ್ಯಕ್ಕೆ ಮುಂಗಾರು ಆಗಮನ ತಡವಾಗಿದೆ ಕಂಡು ಕೇಳರಿಯದ ಬಿಸಿಲಿನ ಕಾರಣ ರಾಜ್ಯದ ಹಲವು ಭಾಗಗಳಲ್ಲಿ ನೀರಿನ ಕೊರತೆ ಉಂಟಾಗಿದೆ. ಹಲವು ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರ ಕುಸಿತ ಕಂಡಿದ್ದು ಕುಡಿಯುವ ನೀರಿಗೂ ತೊಂದರೆ ಉಂಟಾಗಿದೆ.
ಅತಿಯಾದ ಬಿಸಿಲು ಇದ್ದ ಕಾರಣ ನೀರು ತ್ವರಿತವಾಗಿ ಖಾಲಿಯಾಗಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಬಿಸಿಲು ಹೆಚ್ಚಾಗಿದ್ದು, ನದಿ, ಹೊಳೆಗಳಲ್ಲಿ ಕೂಡ ನೀರಿಲ್ಲದಂತಾಗಿದೆ. ಮಂಗಳೂರು ನಗರದಲ್ಲಿ ನೀರಿನ ಕೊರತೆಯಿಂದಾಗಿ ಶಾಲಾ-ಕಾಲೇಜುಗಳಿಗೂ ರಜೆ ಕೊಡುವಂತ ಸ್ಥಿತಿ ನಿರ್ಮಾಣವಾಗಿದೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ಬಂದಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಕಾರಣ ಎನ್ನುವ ಅರ್ಥದಲ್ಲಿ ಬಿಜೆಪಿ ಟ್ವೀಟ್ ಮಾಡಿದೆ. ಸಿದ್ದರಾಮಯ್ಯ ಕಾಲ್ಗುಣದಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಬಂದಿದೆ ಎಂದು ಹೇಳಿದ್ದು, ಈ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತೀರಿ ಎಂದು ಪ್ರಶ್ನೆ ಮಾಡಿದೆ.
ಸಿದ್ದುಕಾಲ ಎಂದರೆ ಬರಗಾಲ ಎಂದ ಬಿಜೆಪಿ ;
ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ "ಸಿದ್ದುಕಾಲವೆಂದರೆ ಬರಗಾಲವೆಂಬ ನುಡಿ ಸತ್ಯವಾಯಿತೇ, ಸಿದ್ದುಕಾಲವೆಂದರೆ ಬರಗಾಲವೆಂಬ ನುಡಿ ಸತ್ಯವಾಯಿತೇ, ಮುಂಗಾರು ಓಡಿಹೋಯಿತೇ! ಸಿದ್ದರಾಮಯ್ಯನವರೇ?" ಎಂದು ಪ್ರಶ್ನೆ ಮಾಡಿದೆ.
"ಬರಿದಾಯ್ತು ಘಟಪ್ರಭಾ, ಮಲಪ್ರಭಾ. ಬತ್ತಿ ಹೋಗುತ್ತಿದೆ ಕೆಆರ್ಎಸ್. ಶುರುವಾಗಿದೆ ಬೆಂಗಳೂರಿಗೆ ಜಲಕಂಟಕ. ಉಡುಪಿ-ಮಂಗಳೂರಲ್ಲಿ ನೀರಿಲ್ಲ, ಕಾಲೇಜು, ಹೋಟೆಲ್ಗಳು ಬಂದ್ !, ಸಿಗಂದೂರಿನ ಹಿನ್ನೀರು ಸಂಪೂರ್ಣ ಖಾಲಿ. ಕೃಷ್ಣ, ತುಂಗೆಯೂ ಬರಿದು. ತಳಕಂಡ ನಾರಾಯಣಪುರ ಬಲದಂಡೆ. ಆದರೂ ತಾವು ಮೌನವಾಗಿದ್ದೀರಿ" ಎಂದು ಸಿದ್ದರಾಮಯ್ಯ ಅವರನ್ನು ಕೇಳಿದೆ.
"ರಾಜ್ಯದಲ್ಲಿ ಕ್ಷಾಮ ಪಕ್ಷದ ಕಾಲ್ಗುಣದಿಂದ ಉಂಟಾದ ಈ ಘನಘೋರ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತೀರಿ, ಹೇಗೆ 'ಸಿದ್ದ' ರಾಗಿದ್ದೀರಿ?" ಕಾಗೆ ಹಾರಿಸದೆ, ರಾಜ್ಯಕ್ಕೆ ಉತ್ತರ ಕೊಡಿ ಎಂದು ಕೇಳಿದೆ.
ಸಿದ್ದುಕಾಲವೆಂದರೆ ಬರಗಾಲವೆಂಬ ನುಡಿ ಸತ್ಯವಾಯಿತೇ, ಮುಂಗಾರು ಓಡಿಹೋಯಿತೇ! @siddaramaiahನವರೇ,
— BJP Karnataka (@BJP4Karnataka) June 9, 2023
🗣 ಬರಿದಾಯ್ತು ಘಟಪ್ರಭಾ, ಮಲಪ್ರಭಾ.
ತಾವು ಮಾತ್ರ 🤐
🗣 ಬತ್ತಿ ಹೋಗುತ್ತಿದೆ ಕೆಆರ್ಎಸ್.
ತಾವು ಮಾತ್ರ🤐
🗣 ಶುರುವಾಗಿದೆ ಬೆಂಗಳೂರಿಗೆ ಜಲಕಂಟಕ.
ತಾವು ಮಾತ್ರ 🤐
🗣 ಉಡುಪಿ-ಮಂಗಳೂರಲ್ಲಿ ನೀರಿಲ್ಲ, ಕಾಲೇಜು, ಹೋಟೆಲ್ಗಳು ಬಂದ್!
ತಾವು…
No rains, waterbodies river dried up, BJP tweets says its all becuase of the fate of CM Siddaramaiah.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am