ಬ್ರೇಕಿಂಗ್ ನ್ಯೂಸ್
09-06-23 03:50 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 9: ಕರ್ನಾಟಕ ರಾಜ್ಯಕ್ಕೆ ಮುಂಗಾರು ಆಗಮನ ತಡವಾಗಿದೆ ಕಂಡು ಕೇಳರಿಯದ ಬಿಸಿಲಿನ ಕಾರಣ ರಾಜ್ಯದ ಹಲವು ಭಾಗಗಳಲ್ಲಿ ನೀರಿನ ಕೊರತೆ ಉಂಟಾಗಿದೆ. ಹಲವು ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರ ಕುಸಿತ ಕಂಡಿದ್ದು ಕುಡಿಯುವ ನೀರಿಗೂ ತೊಂದರೆ ಉಂಟಾಗಿದೆ.
ಅತಿಯಾದ ಬಿಸಿಲು ಇದ್ದ ಕಾರಣ ನೀರು ತ್ವರಿತವಾಗಿ ಖಾಲಿಯಾಗಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಬಿಸಿಲು ಹೆಚ್ಚಾಗಿದ್ದು, ನದಿ, ಹೊಳೆಗಳಲ್ಲಿ ಕೂಡ ನೀರಿಲ್ಲದಂತಾಗಿದೆ. ಮಂಗಳೂರು ನಗರದಲ್ಲಿ ನೀರಿನ ಕೊರತೆಯಿಂದಾಗಿ ಶಾಲಾ-ಕಾಲೇಜುಗಳಿಗೂ ರಜೆ ಕೊಡುವಂತ ಸ್ಥಿತಿ ನಿರ್ಮಾಣವಾಗಿದೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ಬಂದಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಕಾರಣ ಎನ್ನುವ ಅರ್ಥದಲ್ಲಿ ಬಿಜೆಪಿ ಟ್ವೀಟ್ ಮಾಡಿದೆ. ಸಿದ್ದರಾಮಯ್ಯ ಕಾಲ್ಗುಣದಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಬಂದಿದೆ ಎಂದು ಹೇಳಿದ್ದು, ಈ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತೀರಿ ಎಂದು ಪ್ರಶ್ನೆ ಮಾಡಿದೆ.
ಸಿದ್ದುಕಾಲ ಎಂದರೆ ಬರಗಾಲ ಎಂದ ಬಿಜೆಪಿ ;
ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ "ಸಿದ್ದುಕಾಲವೆಂದರೆ ಬರಗಾಲವೆಂಬ ನುಡಿ ಸತ್ಯವಾಯಿತೇ, ಸಿದ್ದುಕಾಲವೆಂದರೆ ಬರಗಾಲವೆಂಬ ನುಡಿ ಸತ್ಯವಾಯಿತೇ, ಮುಂಗಾರು ಓಡಿಹೋಯಿತೇ! ಸಿದ್ದರಾಮಯ್ಯನವರೇ?" ಎಂದು ಪ್ರಶ್ನೆ ಮಾಡಿದೆ.
"ಬರಿದಾಯ್ತು ಘಟಪ್ರಭಾ, ಮಲಪ್ರಭಾ. ಬತ್ತಿ ಹೋಗುತ್ತಿದೆ ಕೆಆರ್ಎಸ್. ಶುರುವಾಗಿದೆ ಬೆಂಗಳೂರಿಗೆ ಜಲಕಂಟಕ. ಉಡುಪಿ-ಮಂಗಳೂರಲ್ಲಿ ನೀರಿಲ್ಲ, ಕಾಲೇಜು, ಹೋಟೆಲ್ಗಳು ಬಂದ್ !, ಸಿಗಂದೂರಿನ ಹಿನ್ನೀರು ಸಂಪೂರ್ಣ ಖಾಲಿ. ಕೃಷ್ಣ, ತುಂಗೆಯೂ ಬರಿದು. ತಳಕಂಡ ನಾರಾಯಣಪುರ ಬಲದಂಡೆ. ಆದರೂ ತಾವು ಮೌನವಾಗಿದ್ದೀರಿ" ಎಂದು ಸಿದ್ದರಾಮಯ್ಯ ಅವರನ್ನು ಕೇಳಿದೆ.
"ರಾಜ್ಯದಲ್ಲಿ ಕ್ಷಾಮ ಪಕ್ಷದ ಕಾಲ್ಗುಣದಿಂದ ಉಂಟಾದ ಈ ಘನಘೋರ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತೀರಿ, ಹೇಗೆ 'ಸಿದ್ದ' ರಾಗಿದ್ದೀರಿ?" ಕಾಗೆ ಹಾರಿಸದೆ, ರಾಜ್ಯಕ್ಕೆ ಉತ್ತರ ಕೊಡಿ ಎಂದು ಕೇಳಿದೆ.
ಸಿದ್ದುಕಾಲವೆಂದರೆ ಬರಗಾಲವೆಂಬ ನುಡಿ ಸತ್ಯವಾಯಿತೇ, ಮುಂಗಾರು ಓಡಿಹೋಯಿತೇ! @siddaramaiahನವರೇ,
— BJP Karnataka (@BJP4Karnataka) June 9, 2023
🗣 ಬರಿದಾಯ್ತು ಘಟಪ್ರಭಾ, ಮಲಪ್ರಭಾ.
ತಾವು ಮಾತ್ರ 🤐
🗣 ಬತ್ತಿ ಹೋಗುತ್ತಿದೆ ಕೆಆರ್ಎಸ್.
ತಾವು ಮಾತ್ರ🤐
🗣 ಶುರುವಾಗಿದೆ ಬೆಂಗಳೂರಿಗೆ ಜಲಕಂಟಕ.
ತಾವು ಮಾತ್ರ 🤐
🗣 ಉಡುಪಿ-ಮಂಗಳೂರಲ್ಲಿ ನೀರಿಲ್ಲ, ಕಾಲೇಜು, ಹೋಟೆಲ್ಗಳು ಬಂದ್!
ತಾವು…
No rains, waterbodies river dried up, BJP tweets says its all becuase of the fate of CM Siddaramaiah.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
20-01-26 05:01 pm
Bangalore Correspondent
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm