ಬ್ರೇಕಿಂಗ್ ನ್ಯೂಸ್
10-06-23 05:08 pm HK News Desk ಕರ್ನಾಟಕ
ಚಿಕ್ಕಮಗಳೂರು, ಜೂ.10: ಸರಕಾರಿ ಬಸ್ಸಿನಲ್ಲಿ ಶೋಭಾ ಕರಂದ್ಲಾಜೆ ಅವರಿಗೂ ಫ್ರೀ ಎಂಬ ಕಾಂಗ್ರೆಸ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ಗರಂ ಆಗಿದ್ದು, ಹೆಣ್ಮಕ್ಕಳಿಗೆ ಕೊಟ್ಟಿರುವುದು ಖುಷಿಯಾಗಿದೆ, ಒಳ್ಳೆಯದಾಗಲಿ. ಪ್ರವಾಸ ಮಾಡಬಹುದು, ಬೇರೆ ಕಡೆ ಹೋಗಬಹುದು. ಆದರೆ ಶೋಭನಿಗೂ ಫ್ರೀ ಎಂಬ ದುರಾಂಕಾರದ ಮಾತನ್ನ ಕಾಂಗ್ರೆಸ್ ಹೇಳುತ್ತದೆ, ಇದಕ್ಕೆ ಜನರೇ ಉತ್ತರ ಕೊಡುತ್ತಾರೆ. ನಾನೇನೂ ಹೇಳಲ್ಲ ಎಂದಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ”ಪಠ್ಯ ಪುಸ್ತಕದಲ್ಲಿ ನಮ್ಮ ಮಕ್ಕಳು ಏನು ಕಲಿಯಬೇಕೆಂದು ನಾವೇ ನಿರ್ಧಾರ ಮಾಡಬೇಕು. ಅವರ ಬೆಳವಣಿಗೆ ಪ್ರಗತಿ, ಅಭ್ಯುದಯಕ್ಕೆ ಚರಿತ್ರೆ ತಿಳಿದುಕೊಳ್ಳಬೇಕು. ನಮ್ಮ ದೇಶವನ್ನು ತಿಳಿದುಕೊಳ್ಳಲು ಏನು ಕಲಿಸಬೇಕು ಅದೇ ಆಧಾರದಲ್ಲಿ ಕಲಿಸಬೇಕು. ಪಠ್ಯ ಪುಸ್ತಕ ಅನ್ನೋದು ಪಾರ್ಟಿ, ಜಾತಿ, ಧರ್ಮದ ವಿಚಾರವಲ್ಲ. ನಾವು ಸಂವಿಧಾನ್ಮಕವಾಗಿ ಏನನ್ನ ಒಪ್ಪಿಕೊಂಡಿದ್ದೇವೋ, ಅದನ್ನೇ ಕಲಿಯುವಂತಹ ಅವಕಾಶವಾಗಬೇಕು. ಒಂದು ಸರ್ಕಾರ ಬಂದಾಗ ಒಂದು ಪಠ್ಯ, ಇನ್ನೊಂದು ಸರ್ಕಾರ ಬಂದಾಗ ಮತ್ತೊಂದು ಪಠ್ಯ ಸರಿಯಲ್ಲ” ಎಂದು ಕಿಡಿ ಕಾರಿದರು.
”ನಮ್ಮ ದೇಶ ಭಕ್ತರ, ನಮ್ಮ ಸ್ವಾತಂತ್ರ್ಯ ಹೋರಾಟಗಾರರ, ನಮ್ಮ ಸಂಸ್ಕೃತಿಯ ಬಗ್ಗೆ ಕಲಿಸುವ ಅನಿವಾರ್ಯತೆ ಇದೆ. ಈ ದೃಷ್ಟಿಯಿಂದ ರಾಜ್ಯ ಸರ್ಕಾರ ಯೋಚನೆ ಮಾಡಲಿ. ಕಾಂಗ್ರೆಸ್ ಪಠ್ಯ, ಬಿಜೆಪಿಯ ಪಠ್ಯ ಅನ್ನೋದಕ್ಕಿಂತ ಹೆಚ್ಚು ನಮ್ಮ ಮಕ್ಕಳು ಏನನ್ನ ಕಲಿಯಬೇಕು. ಮುಂದಿನ ಪೀಳಿಗೆ ಎಲ್ಲಿಗೆ ಹೋಗಬೇಕು, ಏನಾಗಬೇಕು ಇದರ ಆಧಾರದಲ್ಲಿ ಪಠ್ಯ ಕೊಡುವುದು ಒಳ್ಳೆಯದು” ಎಂದರು.
Shobha Karandlaje slams congress for stating that KSRTC bus seat is free for her.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am