ಬ್ರೇಕಿಂಗ್ ನ್ಯೂಸ್
12-06-23 11:45 am HK News Desk ಕರ್ನಾಟಕ
ರಾಮನಗರ, ಜೂನ್ 12: ಬೆಂಗಳೂರು-ಮೈಸೂರು ದಶಪಥದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಸ್ನೇಹಿತರಿಬ್ಬರು ಸಾವಿಗೀಡಾಗಿದ್ದು, ಮತ್ತಿಬ್ಬರು ಸ್ನೇಹಿತರ ಪರಿಸ್ಥಿತಿ ಗಂಭೀರವಾಗಿದೆ. ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಭಾನುವಾರ ಈ ಭೀಕರ ಅಪಘಾತ ಸಂಭವಿಸಿದೆ.
ಚನ್ನಪಟ್ಟಣ ತಾಲೂಕಿನ ಕೋಲೂರು ಗೇಟ್ ಬಳಿಯ ಚಾಮುಂಡೇಶ್ವರಿ ಆಸ್ಪತ್ರೆ ಮುಂಭಾಗ ಈ ಅಪಘಾತ ಸಂಭವಿಸಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಮದ್ದೂರು ಮೂಲದ ಚಾಲಕ ಮಂಜೇಶ್ (28) ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದರು.


ಗಂಭೀರ ಗಾಯಗೊಂಡಿದ್ದ ವಿಜಯ್, ವಿನಯ್ ಹಾಗೂ ನಿಖಿಲ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದ ನಿವಾಸಿ ವಿನಯ್ (23) ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ರಾಮನಗರದ ಮಂಜುನಾಥ್ ನಗರ ನಿವಾಸಿ ವಿಜಯ್ (23), ಮತ್ತೊಬ್ಬ ಗಾಯಾಳು ನಿಖಿಲ್ಗೆ ಚಿಕಿತ್ಸೆ ಮುಂದುವರಿದಿದೆ. ವಿಜಯ್ ಪರಿಸ್ಥಿತಿ ಚಿಂತಾಜನಕವಾಗಿದೆ.

ನಾಲ್ವರು ಸ್ನೇಹಿತರು ಮದ್ದೂರಿನ ಬೆಸಗರಹಳ್ಳಿಗೆ ಬಟ್ಟೆ ತರಲು ಹೋಗಿದ್ದರು. ಅಲ್ಲಿಂದ ವಾಪಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದಿದೆ. ವಾಹನ ಚಲಾಯಿಸುತ್ತಿದ್ದ ಮಂಜೇಶ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಸಾವಿಗೀಡಾಗಿದ್ದ. ಅಪಘಾತಕ್ಕೂ ಮುನ್ನ ಈ ನಾಲ್ವರು ಕಾರಿನಲ್ಲಿ ಜಾಲಿಯಾಗಿ ಹಾಡು ಹೇಳಿಕೊಂಡು ಬಂದಿದ್ದು, ವಿಡಿಯೋ ಕೂಡ ಮಾಡಿಕೊಂಡಿದ್ದರು. ಆದರೆ ಅದಾದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿದ್ದರು.
ಕಾರು ರಾಮನಗರದ ಕಡೆಗೆ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ಗಾಯಾಳುಗಳನ್ನು ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Bengaluru Mysuru express way road accident, two friends killed on spot at Ramnagara.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am